Asianet Suvarna News Asianet Suvarna News

'ಬಿಜೆಪಿ ಬಂದ ಮೇಲೆ ಕಳ್ಳಕಾಕರು ನಿರುದ್ಯೋಗಿ ಆಗಿದ್ದಾರೆ' : ಡಿಕೆಶಿಗೆ ಪರೋಕ್ಷ ಟಾಂಗ್

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಡಿಕೆ ಶಿವಕುಮಾರ್‌ಗೆ ತಿರುಗೇಟು ನೀಡಿದ್ದಾರೆ. ಬಿಜೆಪಿ ಬಂದಮೇಲೆ ಕಳ್ಳರು ನಿರುದ್ಯೋಗಿಗಳಾಗಿದ್ದಾರೆ ಎಂದರು. 

BJP Leader Nalin Kumar Kateel Taunt To DK Shivakumar snr
Author
Bengaluru, First Published Jan 25, 2021, 7:23 AM IST

ಕೊಪ್ಪಳ (ಜ.25): ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಕಳ್ಳಕಾಕರು, ಭ್ರಷ್ಟರು ನಿರುದ್ಯೋಗಿಗಳಾಗಿರುವುದು ನಿಜ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ತಿಳಿಸಿದ್ದಾರೆ. 

ಈ ಮೂಲಕ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ನಾವು ನಿರುದ್ಯೋಗಿಗಳಾಗಿದ್ದೇವೆ ಎಂದು ಹೇಳಿಕೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಟಾಂಗ್‌ ನೀಡಿದ್ದಾರೆ. 

ಹನುಮಂತ ಗುಲಾಮಗಿರಿಯ ಸಂಕೇತ ಎಂದವರಿಗೆ ಕಟೀಲು ತಿರುಗೇಟು ಕೊಟ್ಟಿದ್ಹೀಗೆ! ...

ಕೊಪ್ಪಳದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿ  ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಇಂಥ ಕಳ್ಳಕಾಕರಿಗೆ ಉದ್ಯೋಗ ಇಲ್ಲದಂತಾಗಿರುವುದು ನಿಜ ಎಂದು ಕಟೀಲ್ ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರು ಕಳ್ಳರು ಎನ್ನುತ್ತೀರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಅವರೆಲ್ಲಾ ಏನಾಗಿದ್ದಾರೆ ಎನ್ನುವುದು ಗೊತ್ತಿದೆ. ಜೈಲಿಗೆ ಹೋಗಿ ಬಂದಿಲ್ಲವೇ? ಎಂದರು.

Follow Us:
Download App:
  • android
  • ios