ನೂತನ ಶಾಸಕ ಬಸವಕಲ್ಯಾಣ ಕ್ಷೇತ್ರದ ಶಾಸಕ ಶರಣು ಸಲಗರ ಇಂದು ಪ್ರಮಾಣ ವಚನ   ಸಿಎಂ ಭೇಟಿಯಾಗಿ ಆಶೀರ್ವಾದ ಪಡೆದ ನೂತನ ಶಾಸಕ ಸಲಗರ ಬಿ.ಎಸ್ ಯಡಿಯೂರಪ್ಪ  ನಿವಾಸಕ್ಕೆ ತೆರಳಿ ಕಾಲಿಗೆ ಎರಗಿ  ಆಶೀರ್ವಾದ ಪಡೆದ ಶರಣು ಸಲಗರ

ಬೆಂಗಳೂರು (ಜೂ.08): ರಾಜ್ಯ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನೂತನ ಶಾಸಕ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ ಇಂದು ಪ್ರಮಾಣ ವಚನ ಸ್ವೀಕರಿಸಿದ್ದು, ಅದಕ್ಕೂ ಮುನ್ನ ಸಿಎಂ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

ವಿಧಾನಸೌಧದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಬಸವಕಲ್ಯಾಣ ಕ್ಷೇತ್ರದ ನೂತನ ಶಾಸಕ ಶರಣು ಸಲಗರ ಸಿಎಂ ಬಿ.ಎಸ್ ಯಡಿಯೂರಪ್ಪ ನಿವಾಸಕ್ಕೆ ತೆರಳಿ ಕಾಲಿಗೆ ಎರಗಿ ಆಶೀರ್ವಾದ ಪಡೆದುಕೊಂಡರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜೆಡಿಎಸ್ ಕ್ಷೇತ್ರ ಬಸವಕಲ್ಯಾಣದಲ್ಲಿ 13 ವರ್ಷ ನಂತರ ನೆಲೆಕಂಡ ಬಿಜೆಪಿ

 ಬಸವ ಕಲ್ಯಾಣ ಕ್ಷೇತ್ರದಲ್ಲಿ ನಡೆ ಉಪ ಚುನಾವಣೆಯಲ್ಲಿ ಶರಣು ಸಲಗರ ಭರ್ಜರಿ ಗೆಲುವು ದಾಖಲಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಲ್ಲಮ್ಮ ಹಾಗೂ ಜೆಡಿಎಸ್ ಅಭ್ಯರ್ಥಿ ಯಾಸ್ರಬ್ ಖಾದ್ರಿ ಹಾಗೂ ಮಲ್ಲಿಕಾರ್ಜುನ್ ಖೂಬಾ ವಿರುದ್ಧ 19 ಸಾವಿರ ಹೆಚ್ಚುವರಿ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. 

ಬಸವಕಲ್ಯಾಣ ಬೈಎಲೆಕ್ಷನ್‌: ಬಿಜೆಪಿ ಅಭ್ಯರ್ಥಿ ಶರಣು ಸಲಗರಗೆ ಪ್ರಚಂಡ ಗೆಲುವು

ಬರೋಬ್ಬರಿ 13 ವರ್ಷಗಳ ಬಳಿಕ ಬಸವಕಲ್ಯಾಣದಲ್ಲಿ ಸಲಗರ ಗೆಲುವಿನ ಮೂಲಕ ಬಿಜೆಪಿ ಖಾತೆ ತೆರೆದಂತಾಗಿತ್ತು. ಬಸವಕಲ್ಯಾಣ ಕ್ಷೇತ್ರ 1957 ರಲ್ಲಿ ರಚನೆಯಾದಂದಿನಿಂದ ಕೇವಲ 2 ಬಾರಿ ಬಿಜೆಪಿ ಗೆಲುವು ಸಾಧಿಸಿತ್ತು. ಇದು ಜೆಡಿಎಸ್ ಭದ್ರಕೋಟೆ ಎಂದೆ ಬಿಂಬಿತವಾಗಿದ್ದು ಈ ಬಾರಿ ಈ ಇತಿಹಾಸವನ್ನು ಮುರಿದು ಸಲಗರ ಗೆಲುವು ಸಾಧಿಸಿದ್ದರು. 

13 ವರ್ಷಗಳ ಬಳಿಕ ಕ್ಷೇತ್ರದಲ್ಲಿ ಕಮಲ ಅರಳಿಸಿ ಬೀದರ್ ಜಿಲ್ಲೆಯ ಎರಡನೇ ಬಿಜೆಪಿ ಶಾಸಕರಾಗಿ ಸಲಗರ ಆಯ್ಕೆಯಾಗಿದ್ದು, ಇಂದು ಶಾಸಕರಾಗಿ ವಿಧಾನಸೌಧದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.