ರಾಜ್ಯ ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ವಿಚಾರವಾಗಿ ರಾಜಕೀಯ ಚಟುವಟಿಕೆಗಳು ಜೋರಾಗಿದೆ. ಇದರ ಮಧ್ಯೆ ಕುಮಾರಸ್ವಾಮಿ ನನಗೆ ಸಚಿವ ಸ್ಥಾನದ ಅವಕಾಶ ತಪ್ಪಿಸುವಷ್ಟು ಶಕ್ತರೇನಲ್ಲ ಎಂದು ಬಿಜೆಪಿ ನಾಯಕ ಗುಡುಗಿದ್ದಾರೆ.

ಬೆಂಗಳೂರು, (ಸೆ.19): ಮಂತ್ರಿ ಮಂಡಲ ವಿಸ್ತರಣೆ ಕುರಿತು ನಿಖರ ಮಾಹಿತಿ ಇಲ್ಲ, ನಾನೂ ದೆಹಲಿಗೆ ಹೋಗಿ ಬಂದಿದ್ದೇನೆ. ನಾಳೆ, ನಾಡಿದ್ದು ಆಗಬಹುದು ಅಥವಾ ಅಧಿವೇಶನ ಆದ ಬಳಿಕವೂ ಆಗಬಹುದು ಎಂದು ವಿಧಾನ ಪರಿಷತ್​ ಸದಸ್ಯ ಸಿ.ಪಿ ಯೋಗೇಶ್ವರ್ ಅವರು ಶನಿವಾರ ಹೇಳಿದರು. 

Add Asianetnews Kannada as a Preferred SourcegooglePreferred

ಸಚಿವ ಸಂಪುಟ ವಿಸ್ತರಣೆ ವಿಷಯ ಕುರಿತಂತೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಂಪುಟ ವಿಸ್ತರಣೆ ಆಗೇ ಆಗುತ್ತೆ. ಸಮಯದ ಕೊರತೆಯಿಂದ ಮುಂದೆ ಹೋಗಬಹುದು. ಪಕ್ಷ ಹಾಗೂ ಸಿಎಂ ತೀರ್ಮಾನಕ್ಕೆ ಬದ್ಧ. ಪಕ್ಷದ ಹಿರಿಯರು ಕುಳಿತು ತೀರ್ಮಾನ ಮಾಡ್ತಾರೆ. ಮಂತ್ರಿ ಸ್ಥಾನ ಕೊಡದೇ ಇದ್ದರೆ, ಪಕ್ಷದ ಕೆಲಸ ಮಾಡುವೆ ಎಂದು ಸ್ಪಷ್ಟಪಡಿಸಿದರು.

ದಿಲ್ಲಿಯಿಂದಲೇ ಬ್ರೇಕಿಂಗ್ ನ್ಯೂಸ್ ಕೊಟ್ಟ ಬಿಎಸ್‌ವೈ, ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ಸದ್ಯ ನನಗೆ ಇರುವ ತಿಳುವಳಿಕೆ ಪ್ರಕಾರ ಮುಖ್ಯಮಂತ್ರಿ ಬದಲಾವಣೆ ಯೋಚನೆ ಹೈಕಮಾಂಡ್​ಗೆ ಇಲ್ಲ. ಬಿಜೆಪಿ ಹಿಂದೆಯೂ ನನಗೆ ಮಂತ್ರಿ ಆಗೋಕೆ ಅವಕಾಶ ಕೊಟ್ಟಿತ್ತು. ನನಗೆ ಅವಕಾಶ ಕೊಡೋದು ಬಿಡೋದು ಹೈಕಮಾಂಡ್​ಗೆ ಬಿಟ್ಟಿದ್ದು, ಕುಮಾರಸ್ವಾಮಿ, ಡಿಕೆಶಿ ನಮ್ಮ ರಾಜಕೀಯ ವಿರೋಧಿಗಳು. ಅವರು ನಮ್ಮ ಪಕ್ಷದಲ್ಲಿ ಪರಿಣಾಮ ಬೀರೋಕೆ ಆಗಲ್ಲ. ಅವರು ನನಗೆ ಅವಕಾಶ ತಪ್ಪಿಸುವಷ್ಟು ಅವರು ಶಕ್ತರೇನಲ್ಲ ಎಂದರು.

 ಮೈತ್ರಿ ಸರ್ಕಾರ ಹೋಗಬೇಕಿತ್ತು, ಹೋಯ್ತು. ನನಗೆ ಮಂತ್ರಿ ಸ್ಥಾನ ಕೊಡೋದು ಪಾರ್ಟಿ ತೀರ್ಮಾನವೇ ಅಂತಿಮ ಎಂದು ಡಿಕೆಶಿ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿಗೆ ಟಾಂಗ್​ ಕೊಟ್ಟರು

ಇನ್ನು ಕೆಲ ದಿನಗಳ ಹಿಂದೆ ಎಚ್​.ಡಿ ಕುಮಾರಸ್ವಾಮಿ ಭೇಟಿಯಾದ ವಿಚಾರದ ಬಗ್ಗೆ ಮಾತನಾಡಿದ ಅವರು, ಕುಮಾರಸ್ವಾಮಿ ನಮ್ಮ ಪಕ್ಷದಲ್ಲಿ ಪ್ರಭಾವ ಬೀರ್ತಾರೆ ಅಂತ ನಾನು ಅಂದುಕೊಂಡಿಲ್ಲ. ನಮ್ಮ ಪಕ್ಷದ ಮೇಲೆ ಪ್ರಭಾವ ಬೀರುವಷ್ಟು ಶಕ್ತಿ ಅವರಿಗೆ ಉಳಿದಿಲ್ಲ. ಸಂಪುಟ ವಿಸ್ತರಣೆ ಕುರಿತು ಏನು ಅಂತ ಗೊತ್ತಾಗುತ್ತೆ ಎಂದು ಸಿಪಿವೈ ಅವರು ತಿಳಿಸಿದರು.