ಮಂತ್ರಿಗಿರಿ ಅಲ್ಲದೇ ಮತ್ತೊಂದು ಬೇಡಿಕೆ: ಯಡಿಯೂರಪ್ಪಗೆ ಸಂಕಷ್ಟ ತಂದಿಟ್ಟ ವಿಶ್ವನಾಥ್
ವಿಧಾನಪರಿಷತ್ ಸದಸ್ಯ ಸದ್ಯ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದರ ಮಧ್ಯೆ ಮುಖ್ಯಮಂತ್ರಿ ಮುಂದೆ ಮತ್ತೊಂದು ಡಿಮ್ಯಾಂಡ್ ಇಟ್ಟಿದ್ದು, ಅದನ್ನು ಈಡೇರಿಸಬೇಕೆಂದು ಒತ್ತಾಯ ಮಾಡಿದ್ದಾರೆ.
ಬೆಂಗಳೂರು, (ನ.27): ಈಗಾಗಲೇ ತರಾತುರಿಯಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ ಬೆನ್ನಲ್ಲೇ ವೀರಶೈವ ಲಿಂಗಾಯತ ನಿಗಮ ಸ್ಥಾಪನೆ ಮಾಡಬೇಕಾದ ಅನಿರ್ವಾವಾಯ್ತು.
ಇದೀಗ ವಿಜಯನಗರ ನೂತನ ಜಿಲ್ಲೆ ರಚನೆ ಬೆನ್ನಲ್ಲೇ ಹುಣಸೂರು ಪ್ರತ್ಯೇಕ ಜಿಲ್ಲೆಗೆ ಬೇಡಿಕೆ ಆರಂಭವಾಗಿದ್ದು, ದೇವರಾಜ್ ಅರಸ್ ಹೆಸರಿನಲ್ಲಿ ಹುಣಸೂರನ್ನು ಜಿಲ್ಲೆಯನ್ನಾಗಿ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಆಗ್ರಹಿಸಿದ್ದಾರೆ.
ಇಂದು (ಶುಕ್ರವಾರ) ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಎಸ್ ಯಡಿಯೂರಪ್ಪ ಅಧಿಕಾರ ಅವಧಿಯಲ್ಲಿ ಹುಣಸೂರು ಜಿಲ್ಲೆ ಮಾಡಿ ಎಂದು ಬೇಡಿಕೆ ಇಟ್ಟಿದ್ದೆವು. 6 ತಾಲ್ಲೂಕು ಸೇರಿ ದೇವರಾಜ್ ಅರಸ್ ಹೆಸರಿನಲ್ಲಿ ಜಿಲ್ಲೆ ಮಾಡಿ ಎಂದು ಬೇಡಿಕೆ ಇರಿಸಿದ್ದೆವು ಎಂದರು.
ದಿಲ್ಲಿಯಿಂದ ಅಮಿತ್ ಶಾ ಫೋನ್ ಕಾಲ್: ಸಿಎಂ ಬಿಎಸ್ವೈ ಫುಲ್ ಶಾಕ್...!
ಮೈಸೂರು ನಗರದ ಒತ್ತಡ ಕಾರಣದಿಂದ ಜಿಲ್ಲಾಧಿಕಾರಿ ಹುಣಸೂರು ಭಾಗಕ್ಕೆ ಅಪರೂಪಕ್ಕೆ ಬರುತ್ತಾರೆ. ಹೀಗಾಗಿ ಹುಣಸೂರನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕು ಎಂದು ವಿಶ್ವನಾಥ್ ಒತ್ತಾಯಿಸಿದರು.
ಹುಣಸೂರು ಜಿಲ್ಲೆ ಮಾಡಬೇಕು ಎಂಬುದು ಬಹಳ ಹಿಂದಿನ ಬೇಡಿಕೆ ಇದೆ. ಯಡಿಯೂರಪ್ಪ ಅವರ ಸರ್ಕಾರದಲ್ಲಿ ಇದು ಈಡೇರಬೇಕು. ಈ ಬಗ್ಗೆ ನಾನು ಸಿಎಂ ಮೇಲೆ ಒತ್ತಡ ಹಾಕುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.