Asianet Suvarna News Asianet Suvarna News

ಈ ಬಾರಿ ಬಿಎಸ್​ವೈ ನನ್ನ ಕೈಬಿಡಲ್ಲ ಎಂಬ ನಂಬಿಕೆ ಇದೆ ಎಂದ ಸಚಿವಾಕಾಂಕ್ಷಿ

ಸದ್ಯ ರಾಜ್ಯ ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ಕಸರತ್ತು ಜೋರಾಗಿ ನಡೆದಿದ್ದು, ಮಂತ್ರಿ ಸ್ಥಾನಕ್ಕಾಗಿ ಸಚಿವಾಕಾಂಕ್ಷಿಗಳು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇದರ ಮಧ್ಯೆ ಈ ಬಾರಿ ಯಡಿಯೂರಪ್ಪ ಕೈಬಿಡುವುದಿಲ್ಲ ಎಂದು ಮಂತ್ರಿ ಆಕಾಂಕ್ಷಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

BJP MLC R Shankar Talks about Karnataka Cabinet expansion rbj
Author
Bengaluru, First Published Jan 11, 2021, 10:34 PM IST

ಹಾವೇರಿ, ಜ.11): ನಿನ್ನನ್ನ ಎಂಎಲ್​ಸಿ ಮಾಡಿ ನಿನಗೆ ಮಂತ್ರಿ ಸ್ಥಾನ ನೀಡುತ್ತೇನೆ ಎಂದು ಸಿಎಂ ಮಾತುಕೊಟ್ಟಿದ್ದಾರೆ. ಹೀಗಾಗಿ ನನ್ನನ್ನ ಈ ಬಾರಿ ಯಡಿಯೂರಪ್ಪ ಕೈಬಿಡುವುದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಆರ್​.ಶಂಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಬಗ್ಗೆ ಸಾಕಷ್ಟು ಅಪಪ್ರಚಾರಗಳು ನಡೆದಿದ್ದವು. ಏನೇ ಅಪಪ್ರಚಾರ ಮಾಡಿದರೂ ಸಿಎಂ ಯಡಿಯೂರಪ್ಪ ಈ ಬಾರಿ ನನ್ನ ಕೈ ಬಿಡುವುದಿಲ್ಲ ಎಂಬ ನಂಬಿಕೆ ಇದೆ ಎಂದು ಸ್ಪಷ್ಟಪಡಿಸಿದರು. 

ನನ್ನನ್ನು ಸರ್ಕಾರದಿಂದ ಕೈಬಿಡುವಷ್ಟು ಧೈರ್ಯ ಯಾರಿಗಿದೆ ಸ್ವಾಮಿ: ಸಚಿವರ ಖಡಕ್ ಮಾತು

ನಿನ್ನ ಎಂಎಲ್‌ಸಿ ಮಾಡಿ ನಿನಗೆ ಮಂತ್ರಿ ಸ್ಥಾನ ನೀಡುತ್ತೇನೆ ಎಂದು ಮಾತು ಕೊಟ್ಟಿದ್ದಾರೆ. ಅದೇ ರೀತಿ ಅವರು ನಡೆದುಕೊಳ್ಳುತ್ತಾರೆ ಎಂಬ ಭರವಸೆ ನನಗಿದೆ ಎಂದರು.

ನಾನು ಎರಡು ಬಾರಿ ಮಂತ್ರಿಯಾಗಿದ್ದವನು. ಈ ಬಾರಿ ಸಂಪುಟದಲ್ಲಿ ಉತ್ತಮ ಖಾತೆ ಕೊಟ್ಟರೆ ಜನ ಸೇವೆ ಮಾಡಲು ನನಗೆ ಅನುಕೂಲವಾಗುತ್ತದೆ. ಯಡಿಯೂರಪ್ಪ ಸರ್ಕಾರಕ್ಕೆ ಹೆಸರು ತರುವಂಥ ಕೆಲಸವನ್ನು ನಾನು ಮಾಡುತ್ತೇನೆ. ಉತ್ತಮ ಖಾತೆ ನೀಡುವುದು ಸಿಎಂ ಪರಮಾವಧಿ, ನನಗೆ ಉತ್ತಮ ಖಾತೆ ಸಿಗುತ್ತದೆ ಎಂಬ ಭರವಸೆಯಿದೆ ಎಂದು ಹೇಳಿದರು.

Follow Us:
Download App:
  • android
  • ios