ಪಶ್ಚಿಮ ಬಂಗಾಳ ಚುನಾವಣೆಗೂ ಮುನ್ನ ಬಿಜೆಪಿಗೆ ಬಂದಿದ್ದ ಮುಕುಲ್ ರಾಯ್, ಚುನಾವಣೆಯಲ್ಲಿ ಟಿಎಂಸಿ ಗೆದ್ದ ಕಾರಣ ಪಕ್ಷ ತೊರೆದಿದ್ದರು. ಈ ಹಿನ್ನೆಲೆಯಲ್ಲಿ ಇಂತಹ ಆಯಾರಾಂ ಗಯಾರಾಂ ಪಕ್ಷಾಂತರಿಗಳನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬಿಜೆಪಿ ಇಂತಹ ತಂತ್ರ ಹೆಣೆದಿದೆ. 

ನವದೆಹಲಿ (ಜನವರಿ 3, 2024): ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಅನ್ಯಪಕ್ಷಗಳಿಂದ ಬಿಜೆಪಿಗೆ ಬರಲು ಇಚ್ಛಿಸುವವರ ಪೂರ್ವಾಪರ ಸಮೀಕ್ಷೆ ನಡೆಸಲು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಹೊಸ ಸಮಿತಿಯನ್ನು ರಚಿಸಿದ್ದಾರೆ. ಈ ಸಮಿತಿಯು ಷರತ್ತು ವಿಧಿಸಿ ಪಕ್ಷಕ್ಕೆ ಬರುವವರನ್ನು ಅಥವಾ ಪದೇ - ಪದೇ ಪಕ್ಷ ಬದಲಿಸುವ ಖಯಾಲಿಯ ವ್ಯಕ್ತಿಗಳನ್ನು ಮೊದಲ ಹಂತದಲ್ಲೇ ತಿರಸ್ಕರಿಸಿ, ಅವರ ಬಿಜೆಪಿ ಸೇರ್ಪಡೆಗೆ ತಡೆ ಒಡ್ಡಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜನವರಿ 6 ರಂದು ಮೊದಲ ಸಮಿತಿ ಈ ಸಭೆ ನಡೆಸಲಿದೆ. ಈ ಸಮಿತಿಯ ಸದಸ್ಯರು ಬಿಜೆಪಿಗೆ ಅನ್ಯಪಕ್ಷಗಳಿಂದ ಬರುವವರ ವಿಶ್ವಾಸಾರ್ಹತೆ, ಕಷ್ಟ ಕಾಲದಲ್ಲಿ ಪಕ್ಷಕ್ಕೆ ನೆರವು ನೀಡುವುದು, ಅವರ ನಿಯತ್ತು, ವಿಧೇಯತೆಗಳನ್ನು ಪರಿಶೀಲಿಸಿ ಪಕ್ಷದ ವರಿಷ್ಠರಿಗೆ ವರದಿ ನೀಡಲಿದೆ. ಸಮಿತಿಯ ವರದಿ ಸಕಾರಾತ್ಮಕವಾಗಿದ್ದರೆ ಮಾತ್ರ, ಆಕಾಂಕ್ಷಿಗಳನ್ನು ಪಕ್ಷಕ್ಕೆ ಬರ ಮಾಡಿಕೊಳ್ಳಲಾಗುತ್ತದೆ ಎಂದು ಬಿಜೆಪಿ ಮೂಲಗಳು ಹೇಳಿವೆ.

ಇದನ್ನು ಓದಿ: ಬೆಳಗಾವಿ ಮಹಿಳೆ ಬೆತ್ತಲೆ ಕೇಸ್‌ ದಿಲ್ಲೀಲೂ ಪ್ರತಿಧ್ವನಿ: ಘಟನೆ ತನಿಖೆಗೆ ನಡ್ಡಾರಿಂದ ಸತ್ಯ ಶೋಧನಾ ಸಮಿತಿ

ಇದೇ ವೇಳೆ, ಕೆಲವರು ಪಕ್ಷ ಸೇರ್ಪಡೆಗೂ ಮುನ್ನ ಕೆಲವು ಷರತ್ತುಗಳನ್ನು ವಿಧಿಸುತ್ತಾರೆ. ಇನ್ನು ಕೆಲವರು ಬಿಜೆಪಿ ಸೋತರೆ ಮಾತೃ ಪಕ್ಷಕ್ಕೆ ಮರಳುವ ಚಂಚಲ ಬುದ್ಧಿಯವರಾಗಿರುತ್ತಾರೆ. ಇಂಥವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಬೇಡ ಎಂದು ಸಮಿತಿ ತೀರ್ಮಾನಿಸುತ್ತದೆ.

ಈ ಹಿಂದೆ ಪಶ್ಚಿಮ ಬಂಗಾಳ ಚುನಾವಣೆಗೂ ಮುನ್ನ ಬಿಜೆಪಿಗೆ ಬಂದಿದ್ದ ಮುಕುಲ್ ರಾಯ್, ಚುನಾವಣೆಯಲ್ಲಿ ಟಿಎಂಸಿ ಗೆದ್ದ ಕಾರಣ ಪಕ್ಷ ತೊರೆದಿದ್ದರು. ಈ ಹಿನ್ನೆಲೆಯಲ್ಲಿ ಇಂತಹ ಆಯಾರಾಂ ಗಯಾರಾಂ ಪಕ್ಷಾಂತರಿಗಳನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬಿಜೆಪಿ ಇಂತಹ ತಂತ್ರ ಹೆಣೆದಿದೆ. 

Article 370: ಸುಪ್ರೀಂಕೋರ್ಟ್‌ ತೀರ್ಪಿನ ಬಗ್ಗೆ ಮೋದಿ, ಅಮಿತ್‌ ಶಾ, ಕಾಶ್ಮೀರಿ ನಾಯಕರು ಹೇಳಿದ್ದೀಗೆ..

2024ಕ್ಕೆ ಪ್ರಧಾನಿ ನರೇಂದ್ರ ಮೋದಿ 3ನೇ ಸಲ ಆಯ್ಕೆ ಬಯಸಿರುವ ಹಿನ್ನೆಲೆಯಲ್ಲಿ ಆಯಾರಾಂ ಗಯಾರಾಂಗಳಿಗೆ ಪಕ್ಷದಲ್ಲಿ ಸ್ಥಾನವನ್ನೇ ನೀಡದಿರಲು ಪಕ್ಷ ನಿರ್ಧರಿಸಿದೆ ಎನ್ನಲಾಗಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್‌ ಗ್ಯಾರಂಟಿ ಜಾರಿ ಮಾಡಿಲ್ಲ: ಜೆ.ಪಿ.ನಡ್ಡಾ ಆರೋಪ