ಗೆಲುವಿಗೆ ಕಾರಣವಾದ ಬಿಜೆಪಿ, ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ರಾಜ್ಯದ ಜನರಿಗೆ ನಾವು ಆಭಾರಿಯಾಗಿದ್ದೇವೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಎಷ್ಟು ಸ್ಥಾನ ಗೆಲ್ತೇವೆ ಅಂದಿದ್ರು?. ಗ್ಯಾರಂಟಿ ಆರ್ಭಟದ ನಡುವೆ ಈ ಸಂಖ್ಯೆ ನಮಗೆ ತೃಪ್ತಿ ಇದೆ ಎಂದ ಬಿ.ವೈ. ವಿಜಯೇಂದ್ರ 

ಬೆಂಗಳೂರು(ಜೂ.4): ಕೇಂದ್ರದಲ್ಲಿ ಬಿಜೆಪಿ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. ಒಂದಂತೂ ಸ್ಪಷ್ಟವಾಗಿದೆ. ಸ್ವಾತಂತ್ರ್ಯ ನಂತರ ಕಾಂಗ್ರೆಸೇತರ ಪಕ್ಷ ಸತತ ಮೂರನೇ ಬಾರಿ ಅಧಿಕಾರಕ್ಕೆ ಬಂದಿರುವುದು ಇತಿಹಾಸವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಸಂಬಂಧಿಸಿದಂತೆ ಇಂದು(ಮಂಗಳವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿ.ವೈ. ವಿಜಯೇಂದ್ರ ಅವರು, ಜೆಡಿಎಸ್ ಎರಡು ಕ್ಷೇತ್ರದಲ್ಲಿ ಗೆದ್ದಿದೆ. ಕಾಂಗ್ರೆಸ್ ಇಪ್ಪತ್ತು ಕ್ಷೇತ್ರಕ್ಕೂ ಹೆಚ್ಚು ಗೆಲ್ತೇವೆ ಎಂದು ಕನಸು ಕಾಣುತ್ತಿದ್ರು. ಆ ಕನಸು ಭಗ್ನವಾಗಿದೆ ಎಂದು ಟೀಕಿಸಿದ್ದಾರೆ. 

Lok Sabha Election 2024 Result: ಸಚಿವರ ಮಕ್ಕಳಿಗೆ ಸೋಲು, ಗೆಲುವಿನ ರುಚಿ ತೋರಿಸಿದ ಮತದಾರರು..!

ಈ ಗೆಲುವಿಗೆ ಕಾರಣವಾದ ಬಿಜೆಪಿ, ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ರಾಜ್ಯದ ಜನರಿಗೆ ನಾವು ಆಭಾರಿಯಾಗಿದ್ದೇವೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಎಷ್ಟು ಸ್ಥಾನ ಗೆಲ್ತೇವೆ ಅಂದಿದ್ರು?. ಗ್ಯಾರಂಟಿ ಆರ್ಭಟದ ನಡುವೆ ಈ ಸಂಖ್ಯೆ ನಮಗೆ ತೃಪ್ತಿ ಇದೆ ಎಂದು ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.