ಬಿಜೆಪಿಗೆ ಸೇರ್ಪಡೆಯಾದ ಸಿಂಧಿಯಾಗೆ ಶಾಕ್| ಅದ್ಧೂರಿ ಸ್ವಾಗತಕ್ಕೆ ಬಂತು ಅಡ್ಡಿ| ಸೇಡು ತೀರಿಸ್ತಿದ್ಯಾ ಕಾಂಗ್ರೆಸ್?

ಭೋಪಾಲ್[ಮಾ.12]: ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಗೊಂಡ ಮಧ್ಯಪ್ರದೇಶ ನಾಯಕ ಜ್ಯೋತಿರಾದಿತ್ಯ ಸಿಂಧಿಯಾಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಬಿಜೆಪಿಗೆ ಸೇರ್ಪಡೆಗೊಂಡ ಸಿಂಧಿಯಾ ಗುರುವಾರ ರಾಜಧಾನಿ ಭೋಪಾಲ್ ಗೆ ಆಗಮಿಸಲಿದ್ದಾರೆ. ಹೀಗಿರುವಾಗ ಅವರಿಗೆ ಸ್ವಾಗತ ಕೋರಿ ಹಾಕಲಾಗಿದ್ದ ಪೋಸ್ಟರ್ ಗಳನ್ನು ನಗಪ ನಿಗಮ ಕಿತ್ತೆಸೆದಿದೆ. 

Add Asianetnews Kannada as a Preferred SourcegooglePreferred

ಹೌದು ಬಿಜೆಪಿ ಸೇರ್ಪಡೆಗೊಂಡ ಸಿಂಧಿಯಾ ಸ್ವಾಗತಕ್ಕೆ ಮಧ್ಯಪ್ರದೇಶ ರಾಜಧಾನಿ ಭೋಪಾಲ್ ನಲ್ಲಿ ಭರ್ಜರಿ ತಯಾರಿ ನಡೆದಿದೆ. ಇಲ್ಲಿನ ವಿವಿಧ ಪ್ರದೇಶಗಳಲ್ಲಿ ಹೋರ್ಡಿಂಗ್ ಹಾಗೂ ಪೋಸ್ಟರ್ ಗಳನ್ನು ಲಗತ್ತಿಸಲಾಗಿದೆ. ಇವುಗಳಲ್ಲಿ ಅನೇಕ ಪೋಸ್ಟರ್ ಗಳಿಗೆ ಮೇಲೆ ದುಷ್ಕರ್ಮಿಗಳು ಮಸಿ ಬಳಿದಿದ್ದಾರೆ. ಇನ್ನು ಸಿಂಧಿಯಾ ಎರಡು ದಿನ ಮಧ್ಯಪ್ರದೇಶದಲ್ಲಿರಲಿದ್ದಾರೆ. ಇದೇ ವೇಳೆ ರಾಜ್ಯಸಭಾ ಸದಸ್ಯರಾಗಲು ನಾಮ ನಿರ್ದೇಶನ ಮಾಡಲಿದ್ದಾರೆ.

ಒಂದು ಸರ್ಕಾರವನ್ನ ಬೀಳಿಸುವಷ್ಟು ಜ್ಯೋತಿರಾದಿತ್ಯ ಸಿಂಧಿಯಾ ಸ್ಟ್ರಾಂಗ್ ನಾ..? ಇವರ ಹಿನ್ನೆಲೆ ಏನು?

ಜ್ಯೋರತಿರಾದಿತ್ಯ ಸಿಂಧಿಯಾ ಲಗತ್ತಿಸಲಾದ ಪೋಸ್ಟರ್ ಗಳನ್ನು ನಗರ ನಿಯಮ ತೆಗೆದು ಹಾಕಿದ್ದು, ಮತ್ತೆ ಕೆಲವೆಡೆ ಅನಾಮಿಕ ವ್ಯಕ್ತಿಗಳು ಪೋಸ್ಟರ್ ಗಳ ಮೇಲೆ ಕಪ್ಪು ಮಸಿ ಬಳಿದಿದ್ದಾರೆ. ಇವುಗಳಲ್ಲಿ ಕೇವಲ ಸಿಂಧಿಯಾ ಮುಖಕ್ಕಷ್ಟೇ ಮಸಿ ಬಳಿದಿದ್ದಾರೆ.

ಬಿಜೆಪಿ ಮಧ್ಯಪ್ರದೇಶ ಕಚೇರಿಯ ಮೂಲಗಳಿಂದ ಸಿಕ್ಕ ಮಾಹಿತಿ ಅನ್ವಯ ಮಧ್ಯಪ್ರದೇಶಕ್ಕೆ ಬಡುವ ಸಿಂಧಿಯಾ ಪ್ರಾದೇಶಿಕ ಕಚೇರಿಗೆ ತೆರಳಲಿದ್ದಾರೆ. ಅಲ್ಲಿಂದ ಸೋಭಾ ಯಾತ್ರೆ ಆಯೋಜಿಸಿ ಬಿಜೆಪಿ ಶಕ್ತಿ ಪ್ರದರ್ಶನ ನಡೆಸಲಾಗುತ್ತದೆ.