Asianet Suvarna News Asianet Suvarna News

ರಂಗೇರಿತು ಲೋಕಸಭಾ ಎಲೆಕ್ಷನ್ : ಮೊದಲ ಅಭ್ಯರ್ಥಿ ಘೋಷಿಸಿದ ಯಡಿಯೂರಪ್ಪ

ಲೋಕಸಭೆ ಚುನಾವಣೆಗೆ ಕಾಂಗ್ರೆಸ್​, ಜೆಡಿಎಸ್​ ಇನ್ನು ಅಣಿಯಾಗುತ್ತಿರುವಾಗಲೇ ಬಿಜೆಪಿ ಒಂದು ಹೆಜ್ಜೆ ಮುಂದೆ ಹೋಗಿ ತನ್ನ ಮೊದಲ ಅಭ್ಯರ್ಥಿಯನ್ನೇ ಘೋಷಣೆ ಮಾಡಿದೆ.

BS Yeddyurappa Announces Candidate Name For Chikkaballapur Loksabha Constituency
Author
Bengaluru, First Published Jan 25, 2019, 3:46 PM IST

ಚಿಕ್ಕಬಳ್ಳಾಪುರ, [25]: 2019ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ, ಚುನಾವಣಾ ಕಣಗಳೂ ರಂಗೇರುತ್ತಿದೆ.ಇದರ ನಡುವೆ ಬರ ಪ್ರವಾಸದಲ್ಲಿ ಮಾಡುತ್ತಿರುವ ಬಿಜೆಪಿ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿ ಕೈತೊಳಿದುಕೊಂಡಿದೆ.

ಚಿಕ್ಕಬಳ್ಳಾಪುರಕ್ಕೆ ಮಾಜಿ ಸಚಿವ ಬಿ.ಎನ್​ ಬಚ್ಚೇಗೌಡರೇ ಅಭ್ಯರ್ಥಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​ ಯಡಿಯೂರಪ್ಪ ಅವರು ಇಂದು ಹೊಸಕೋಟೆಯಲ್ಲಿ ಘೋಷಣೆ ಮಾಡಿದ್ದಾರೆ.

ಸಿ ವೋಟರ್ ಮೂಡ್ ಆಫ್ ದಿ ನೇಶನ್ : ಯಾರಿಗೆ ಎಷ್ಟು..?

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇಂದು ಬರ ಅಧ್ಯಯನ ಪ್ರವಾಸ ಕೈಗೊಂಡಿರುವ ಬಿಎಸ್​ವೈ, ಹೊಸಕೋಟೆಯಲ್ಲಿ ಕಾರ್ಯಕರ್ತರೊಂದಿಗೆ ಸಭೆಯಲ್ಲಿ  ಬಿ.ಎನ್​ ಬಚ್ಚೇಗೌಡ ಹೆಸರನ್ನು ಅಂತಿಮಗೊಳಿಸಿದರು. 

ಚಿಕ್ಕಬಳ್ಳಾಪುರದಲ್ಲಿ ಈ ಬಾರಿ ನೂರಕ್ಕೆ ನೂರರಷ್ಟು ಗೆಲುವು ನಮ್ಮದೆ. ಬಚ್ಚೇಗೌಡರ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು ಸಭೆಯಲ್ಲಿ ಯಡಿಯೂರಪ್ಪ ಸೂಚಿಸಿದರು.

ಕಳೆದ ಬಾರಿ ಕೆಲವರ ಕುತಂತ್ರದಿಂದ ಚಿಕ್ಕಬಳ್ಳಾಪುರದಲ್ಲಿ ಸೋಲುವಂತಾಯಿತು. ಈ ಬಾರಿ ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Follow Us:
Download App:
  • android
  • ios