ಬಿ.ಎಸ್‌.ಯಡಿಯೂರಪ್ಪ ನಮ್ಮ ನಾಯಕರು, ಅವರನ್ನು ಮುಂದಿಟ್ಟುಕೊಂಡೇ ನಾವು ರಾಜಕೀಯ ಮಾಡುತ್ತೇವೆ  ಯಡಿಯೂರಪ್ಪ ನೇತೃತ್ವದಲ್ಲಿ ರಾಜಕೀಯ ಎಂದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ  

 ಅರಸೀಕೆರೆ (ಸೆ.10): ಬಿ.ಎಸ್‌.ಯಡಿಯೂರಪ್ಪ ನಮ್ಮ ನಾಯಕರು, ಅವರನ್ನು ಮುಂದಿಟ್ಟುಕೊಂಡೇ ನಾವು ರಾಜಕೀಯ ಮಾಡುತ್ತೇವೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. 

Add Asianetnews Kannada as a Preferred SourcegooglePreferred

ಸುದ್ದಿಗಾರರ ಜತೆ ಮಾತನಾಡಿದ ಅವರು, ಯಡಿಯೂರಪ್ಪ ಅವರನ್ನು ಕೆಳಗಿಳಿಸಬೇಕು ಎಂದು ಯಾರ ಅಪೇಕ್ಷೆಯೂ ಇರಲಿಲ್ಲ. ವಯಸ್ಸಿನ ಕಾರಣ ಹೀಗಾಯ್ತು ಅಷ್ಟೆ. ಅವರು ಪಕ್ಷದ ವರಿಷ್ಠರಾಗಿ ಇರುತ್ತಾರೆ ಎಂದರು. 

ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಜನ ಜಾತ್ರೆ: ಬೇಜವಾಬ್ದಾರಿ ಉತ್ತರ ಕೊಟ್ಟ ಸಚಿವ ಮಾಧುಸ್ವಾಮಿ

ಆಡಳಿತದಲ್ಲಿ ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲಾ. ಅವರ ಮಾರ್ಗದರ್ಶನದಲ್ಲಿ ಆಡಳಿತ ಮಾಡುವುದಾಗಿ ಮುಖ್ಯಮಂತ್ರಿಗಳೇ ಹೇಳಿದ್ದಾರೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.