ತಮ್ಮ ಹುಟ್ಟುಹಬ್ಬದಿಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸದಿಂದ ಹೊಸ ಮನೆಗೆ ಶಿಫ್ಟ್ ಆಗಲಿದ್ದಾರೆ.

ಬೆಂಗಳೂರು, [ಫೆ.23]: ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿವಾಸ ಬದಲಿಸಲು ಮುಂದಾಗಿದ್ದು, ಡಾಲರ್ಸ್ ಕಾಲೋನಿಯಲ್ಲರಿರುವ ಧವಳಗಿರಿ ನಿವಾಸದಿಂದ ಸರ್ಕಾರಿ ಬಂಗಲೇ ಕಾವೇರಿಗೆ ಶಿಫ್ಟ್ ಆಗಲು ತಯಾರಿ ನಡೆಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈಗಾಗಲೇ ಕಾವೇರಿ ನಿವಾಸದಲ್ಲಿ ನಡೆಯುತ್ತಿರುವ ನವೀಕರಣ ಕಾರ್ಯ ಮುಗಿಯುವ ಹಂತಕ್ಕೆ ಬಂದಿದೆ. ಎಲ್ಲಾ ಕಾರ್ಯಕ್ರಗಳು ಮುಗಿದರೆ ಫೆ. 27ಕ್ಕೆ ಅಧಿಕೃತವಾಗಿ ಕಾವೇರಿ ನಿವಾಸಕ್ಕೆ ಪ್ರವೇಶಿಸಲಿದ್ದಾರೆ ಎಂದು ತಿಳಿದುಬಂದಿದೆ.

‘ಕಾವೇರಿ’ಯಲ್ಲಿ ಸಿದ್ದು ಎಷ್ಟು ದಿನ ಬೇಕಾದ್ರೂ ಇದ್ದು ಹೋಗ್ಲಿ!

ಫೆ.27ಕ್ಕೆ ಕಾವೇರಿಯಲ್ಲಿ ವಿಶೇಷ ಪೂಜೆ
ಫೆಬ್ರವರಿ 27ರಂದು ಸಿಎಂ ಯಡಿಯೂರಪ್ಪನವರಿಗೆ 78ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಫೆ. 27ರಂದು ಅರಮನೆ ಮೈದಾನದಲ್ಲಿ ಜನ್ಮದಿನೋತ್ಸವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ. 

ಅಂದೇ ಕಾವೇರಿ ನಿವಾಸದಲ್ಲಿ ಕುಟುಂಬದಿಂದ ವಿಶೇಷ ಪೂಜಾ ಕಾರ್ಯಕ್ರಮಗಳನ್ನ ಹಮ್ಮಿಕೊಂಡಿದ್ದು, ಇನ್ನೂ ಅಲ್ಪ-ಸ್ವಲ್ಪ ನವೀಕರಣ ಕಾರ್ಯ ಬಾಕಿ ಇರುವುದರಿಂದ ಯುಗಾದಿಗೆ ಗೃಹ ಪ್ರವೇಶ ಮಾಡಲಿದ್ದಾರೆ ಎನ್ನಲಾಗುತ್ತಿದೆ. 

‘ಕಾವೇರಿ ಶಾಪ’ : ಇದು ಸಿಎಂ ನಿವಾಸಕ್ಕೆ ಅಂಟಿಕೊಂಡಿರುವ ಶಾಪದ ಕಥೆ!

ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬಂದು ತಿಂಗಳುಗಳೇ ಕಳೆದರೂ ಅಧಿಕೃತವಾಗಿ ಕಾವೇರಿ ನಿವಾಸಕ್ಕೆ ಸ್ಥಳಾಂತರವಾಗಿರಲಿಲ್ಲ. ಡಾಲರ್ಸ್​​ ಕಾಲೋನಿಯ ತಮ್ಮ ನಿವಾಸ ಧವಳಗಿರಿಯಲ್ಲೇ ವಾಸ್ತವ್ಯ ಹೂಡಿದ್ದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ಹಿಂದೆ ಸಿಎಂ ಆಗಿದ್ದಾಗಿನಿಂದಲೂ ಇದೇ ಕಾವೇರಿ ನಿವಾಸದಲ್ಲಿದ್ದರು. ಬಳಿಕ ಮೈತ್ರಿ ಸರ್ಕಾರದ ವೇಳೆಯಲ್ಲೂ ಸಹ ಇದೇ ಕಾವೇರಿ ನಿವಾಸದಲ್ಲಿದ್ದರು. ಇದೀಗ ಯಡಿಯೂರಪ್ಪನವರು ಕಾವೇರಿ ನಿವಾಸ ಬಯಸಿದ್ದರಿಂದ ಸಿದ್ದರಾಮಯ್ಯನವರು ಈ ಮನೆಯನ್ನ ಖಾಲಿ ಮಾಡಿದ್ದಾರೆ.