Asianet Suvarna News Asianet Suvarna News

`ರೈತನ ಅನ್ನ ತಿನ್ನುತ್ತಿರುವ ನಾನು ರೈತನಿಗೆ ಯಾವುದೇ ಅನ್ಯಾಯ ಮಾಡಲ್ಲ'

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ವಿರೋಧಿ ರೈತರ ಮಾಡುತ್ತಿರುವ ಪ್ರತಿಭಟನೆಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ.

BS yediyurappa Reacts On farmers Protest against APMC Act Bill rbj
Author
Bengaluru, First Published Sep 28, 2020, 2:31 PM IST

ಬೆಂಗಳೂರು, (ಸೆ.28) : ಎಪಿಎಂಸಿ ಕಾಯಿದೆ ತಾನು ಬೆಳೆದ ಬೆಳೆಯನ್ನು ರೈತರು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು. ರೈತನ ನ್ಯಾಯಕ್ಕಾಗಿ ನಾನು ಹೋರಾಟ ಮಾಡಿ ಬಂದವನು. ಇದೊಂದು ಐತಿಹಾಸಿಕ ನಿರ್ಣಯ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

"

ಇಂದು (ಸೋಮವಾರ) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ನಾನು ರೈತನ ಮಗನಾಗಿ 4ನೇ ಬಾರಿಗೆ ಸಿಎಂ ಆಗಿದ್ದೇನೆ. ರೈತನ ಅನ್ನ ತಿನ್ನುತ್ತಿರುವ ನಾನು ರೈತನಿಗೆ ಯಾವುದೇ ಅನ್ಯಾಯ ಮಾಡಲ್ಲ. ನಾನು ಅಧಿಕಾರಕ್ಕಾಗಿ ಅಂಟಿಕೊಂಡು ಕುಳಿತವನಲ್ಲ ಎಂದು ಹೇಳಿದರು.

' ಎಪಿಎಂಸಿಯಲ್ಲೂ ಲೋಪಗಳಿವೆ, ರೈತರ ಉತ್ಪನ್ನ ಮರು ಹರಾಜಾಗಿರುವ ಇತಿಹಾಸವೇ ಇಲ್ಲ'

ಎಪಿಎಂಸಿ ಕಾಯಿದೆ ಭೂಸುಧಾರಣೆ ಬಗ್ಗೆ ರೈತರು ಕಾಂಗ್ರೆಸ್ ನ ಕೆಲವರ ಪಿತೂರಿಯಿಂದ ಧರಣಿ ನಡೆಸುತ್ತಿದ್ದಾರೆ. ರೈತರನ್ನು ಕರೆದು ನಾನು ಕಾಯಿದೆ ಅನುಕೂಲದ ಬಗ್ಗೆ ಮನವರಿಕೆ ಮಾಡಿದೆ. ಆದರೆ ಅವರು ಸತ್ಯಾಗ್ರಹ ಮಾಡಬೇಕೆಂದು ನಿಶ್ಚಿಯ ಮಾಡಿ ಬಂದಿದ್ದರು ಎಂದರು.

ಈ ಕಾಯಿದೆಯಿಂದ ಎಲ್ಲಾ ವರ್ಗದ ಜನರಿಗೆ ಅನುಕೂಲವಾಗಲಿದೆ. ದಯಮಾಡಿ ನಾನು ರೈತರಿಗೆ ಮನವಿ ಮಾಡುತ್ತೇನೆ. ಇಂದು ಬೇಕಿದ್ರೆ ಚಳುವಳಿ ಮಾಡಿ ಆದರೆ ನಾಳೆ ಬನ್ನಿ ಕುಳಿತು ಮಾತಾಡೋಣ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿಯೇ ಈ ಕಾಯಿದೆ ತಂದಿದ್ದೇವೆ ಸ್ಪಷ್ಟಪಡಿಸಿದರು.

Follow Us:
Download App:
  • android
  • ios