* ಎಚ್‌ಡಿಕೆ ಪ್ರಶ್ನೆಗೆ ಬಿಎಸ್‌ವೈ ಫ್ಯಾನ್ಸ್ ಖಡಕ್ ಉತ್ತರ* 6 ಬ್ಯಾಗ್ ಗಳಲ್ಲಿ ದೆಹಲಿಗೆ ಏನು ಕೊಂಡೊಯ್ದರು ಎಂದಿದ್ದ ಎಚ್‌ಡಿಕೆ* ಕುಮಾರಸ್ವಾಮಿಗೆ ಉತ್ತರಿಸಿದ ಬಿಎಸ್ ಯಡಿಯೂರಪ್ಪ ಫ್ಯಾನ್ಸ್

ಬೆಂಗಳೂರು, (ಜು.17): ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಗೆ ಹೋಗುವಾಗ ವಿಶೇಷ ವಿಮಾನದಲ್ಲಿ ಆರು ಬ್ಯಾಗ್ ಗಳನ್ನು ಕೊಂಡೊಯ್ದಿದ್ದಾರೆ. ಅವರು ತೆಗೆದುಕೊಂಡು ಹೋಗಿದ್ದು ಏನು ಎಂದು ಪ್ರಶ್ನಿಸಿದ್ದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಗೆ ಬಿಎಸ್‌ವೈ ಫ್ಯಾನ್ಸ್ ಖಡಕ್ ಉತ್ತರ ಕೊಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕುಮಾರಸ್ವಾಮಿಯವರೇ..."ತಾನು ಕಳ್ಳ ಪರರ ನಂಬ" ಗಾದೆ ಮಾತು ನಿಮ್ಮನ್ನು ನೋಡಿಯೇ ಹೇಳಿದಂತಿದೆ. ಯಡಿಯೂರಪ್ಪನವರು ದೆಹಲಿಗೆ ತೆಗೆದುಕೊಂಡು ಹೋದ ಆರು ಬ್ಯಾಗ್ ಗಳಲ್ಲಿ ರಾಷ್ಟ್ರ ನಾಯಕರಿಗೆ ಉಡುಗೊರೆಯಾಗಿ ನೀಡಲು ಹಿಂದೂ ದೇವರಗಳ ವಿಗ್ರಹಗಳಿದ್ದವೇ ವಿನಹಃ ಬೇರೆನೂ ಅಲ್ಲ. ಅಷ್ಟಕ್ಕು ನಿಮ್ದು ಎಷ್ಟೇ ಆಗ್ಲಿ ಸೂಟ್ಕೇಸ್ ಪಕ್ಷವಲ್ಲವೇ...ಅದೇ ಧ್ಯಾನ ಎಂದು ಬಿಎಸ್‌ವೈ ಫ್ಯಾನ್ಸ್ ಸಾಮಾಜಿಕ ಜಾಲತಾಣಗಳಲ್ಲಿ ಕೇಂದ್ರ ನಾಯಕರಿಗೆ ಕೊಟ್ಟಿರುವ ದೇವರ ವಿಗ್ರಹಣ ಚಿತ್ರಗಳೊಂದಿಗೆ ಫೋಸ್ಟ್ ಮಾಡಿದ್ದಾರೆ.

ಬಿಎಸ್‌ವೈ ಜತೆ 6 ದೊಡ್ಡ ಬ್ಯಾಗ್‌ಗಳೂ ದಿಲ್ಲಿಗೆ ಹೋಗಿವೆ: ಹೊಸ ಬಾಂಬ್ ಸಿಡಿಸಿದ ಎಚ್‌ಡಿಕೆ

ಸಿಎಂ ನಿನ್ನೆ ದೆಹಲಿಗೆ ಹೋಗುವಾಗ ಹೈ ಕಮಾಂಡ್​​ಗೆ ಕೊಡೋಕೆ ಆರು ಬ್ಯಾಗ್ ಗಳನ್ನು ಜೊತೆಯಲ್ಲಿ ತೆಗೆದು ಕೊಂಡು ಹೋಗಿದ್ದಾರೆ . ಉಡುಗೊರೆ ಕೊಂಡು ಹೋಗಿದ್ದಾರಾ ಅಥವಾ ಬೇರೆ ಏನು ತಗೊಂಡು ಹೋಗಿದ್ದಾರೆ ಎಂಬುದನ್ನು ಅವರೇ ಹೇಳಬೇಕು ಎಂದು ಎಚ್​ಡಿಕೆ ಹೇಳಿದ್ದರು.

ಅಲ್ಲದೇ ಪ್ರಧಾನಿಗಳನ್ನು ಭೇಟಿ ಮಾಡೋಕೆ ಸಿಎಂ ಒಬ್ಬರೇ ಹೋಗಿದ್ರಾ.. ? ಅಥವಾ ಬ್ಯಾಗ್ ಗಳನ್ನು ತಗೊಂಡು ಹೋಗಿ ಭೇಟಿ ಮಾಡಿದ್ರಾ..? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ರು.