ಕಾಂಗ್ರೆಸ್‌ನಿಂದ ವಿಧಾನಪರಿಷತ್‌ಗೆ ಆಯ್ಕೆಯಾಗಿದ್ದ ಸಿ.ಎಂ.ಇಬ್ರಾಹಿಂ ಅವರು ಇತ್ತೀಚೆಗೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಜೆಡಿಎಸ್‌ ಸೇರ್ಪಡೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಇದೀಗ ಉಪಚುನಾವಣೆ ನಿಗದಿ ಮಾಡಲಾಗಿದೆ.

ಬೆಂಗಳೂರು, (ಜುಲೈ18): ಸಿ.ಎಂ. ಇಬ್ರಾಹಿಂ ರಾಜೀನಾಮೆಯಿಂದ ತೆರವಾದ ವಿಧಾನಪರಿಷತ್‌ ಸ್ಥಾನಕ್ಕೆ ಉಪಚುನಾವಣೆ ನಿಗದಿಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಧಾನಸಭೆಯಿಂದ ಪರಿಷತ್‌ ಗೆ ಆಯ್ಕೆ ಮಾಡಲು ಇದೇ ಆಗಸ್ಟ್ 11ಕ್ಕೆ ಉಪಚುನಾವಣೆ ನಡೆಯಲಿದ್ದು, ಅಂದೇ ಸಂಜೆ ಮತ ಎಣಿಕೆ ನಡೆಯಲಿದೆ. ರಾಜ್ಯ ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣಾ ಆಯೋಗ ಇಂದು (ಸೋಮವಾರ) ಚುನಾವಣೆ ಘೋಷಣೆ ಮಾಡಿದೆ. ಆಗಸ್ಟ್ 11 ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಆಗಸ್ಟ್ 1 ಕಡೆಯ ದಿನವಾಗಿದೆ.

ಆಗಸ್ಟ್ 4 ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಬಹುದಾಗಿದೆ. ಆಗಸ್ಟ್ 11 ರಂದು ಬೆಳಿಗ್ಗೆ 9 ರಿಂದ ಸಾಯಂಕಾಲ 4ರವರೆಗೆ ಮತದಾನ ನಡೆಯಲಿದ್ದು, ಅಂದೇ ಸಾಯಂಕಾಲ 5 ಗಂಟೆಗೆ ಮತ ಎಣಿಕೆ ಪ್ರಾರಂಭವಾಗುತ್ತದೆ.

Karnataka Politics: ಇಬ್ರಾಹಿಂ ಕಾಂಗ್ರೆಸ್‌ ಪಕ್ಷಕ್ಕೆ ಕಡೆಗೂ ಗುಡ್‌ಬೈ..!

ಶಾಸಕರಿಂದ ಮತದಾನ ನಡೆಯಲಿದ್ದು, ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆಯಿದ್ದು, ಬಿಜೆಪಿಗೆ ಸ್ಥಾನ ಲಭಿಸುವ ಸಾಧ್ಯತೆಗಳಿವೆ. ಆಗಸ್ಟ್ 16 ರ ಒಳಗೆ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳಬೇಕಿತ್ತು.

ಕಾಂಗ್ರೆಸ್‌ನಿಂದ ವಿಧಾನಪರಿಷತ್‌ಗೆ ಆಯ್ಕೆಯಾಗಿದ್ದ ಸಿ.ಎಂ.ಇಬ್ರಾಹಿಂ ಅವರು ಇತ್ತೀಚೆಗೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಜೆಡಿಎಸ್‌ ಸೇರ್ಪಡೆಯಾಗಿದ್ದರು. ಈ ಹಿನ್ನೆಲೆಯಲ್ಲಿ ತೆರವಾದ ಸ್ಥಾನ ಇದೀಗ ಉಪಚುನಾವಣೆಯನ್ನು ನಡೆಸಲು ಅಧಿಸೂಚನೆ ಹೊರಡಿಸಲಾಗಿದೆ.

2024 ರ ಜೂನ್ ತಿಂಗಳವರೆಗೆ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸಿ.ಎಂ.ಇಬ್ರಾಹಿಂ ಅವರ ಸದಸ್ಯತ್ವ ಅವಧಿ ಇತ್ತು. ಆದ್ರೆ, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಸ್ಥಾನ ಸಿಗದೆ ಅಸಮಾಧಾನಗೊಂಡು ಇಬ್ರಾಹಿಂ ಕಾಂಗ್ರೆಸ್ ಹಾಗೂ ಪರಿಷತ್ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.