ಕರ್ನಾಟಕದಲ್ಲಿ ಮತ್ತೊಂದು ಉಪಚುನಾವಣೆಗೆ ದಿನಾಂಕ ಪ್ರಕಟವಾಗಿದೆ. ಈ ಬಗ್ಗೆ  ಇಂದು (ಸೋಮವಾರ) ಚುನಾವಣೆ ಆಯೋಗ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ನವದೆಹಲಿ, (ನ.02): ಈಗಾಗಲೇ ರಾಜ್ಯದಲ್ಲಿ ಆರ್‌.ಆರ್‌ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯುತ್ತಿದ್ದು, ನಾಳೆ ಅಂದ್ರ ನ.03ರಂದು ಮತದಾನ ನಡೆಯಲಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲಿ ಮತ್ತೊಂದು ಉಪಚುನಾವಣೆಗೆ ದಿನಾಂಕ ಪ್ರಕಟವಾಗಿದೆ.

Add Asianetnews Kannada as a Preferred SourcegooglePreferred

ಹೌದು.. ಕೊರೋನಾ ವೈರಸ್‌ನಿಂದಾಗಿ ನಿಧನರಾದ ಸಂಸದ ಅಶೋಕ್ ಗಸ್ತಿ ಅವರಿಂದ ತೆರವಾದ ಕರ್ನಾಟಕದ ಒಂದು ರಾಜ್ಯಸಭಾ ಸ್ಥಾನಕ್ಕೆ ಉಪಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ.

ಈ ಬಗ್ಗೆ ಇಂದು (ಸೋಮವಾರ) ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಆಯೋಗದ ಪ್ರಕಟಣೆಯಂತೆ ಡಿಸೆಂಬರ್ 1ರಂದು ಮತದಾನ ಮತ್ತು ಮತ ಎಣಿಕೆ ನಡೆಯಲಿದೆ.

ರಾಯಚೂರು: ಹುಟ್ಟೂರಲ್ಲಿ ಅಶೋಕ ಗಸ್ತಿ ಅಂತ್ಯಕ್ರಿಯೆ

ಡಿಸೆಂಬರ್ 1ರಂದು ರಾಜ್ಯಸಭೆ ಸ್ಥಾನಕ್ಕಾಗಿನ ಚುನಾವಣೆ ಜತೆಗೆ ಉತ್ತರ ಪ್ರದೇಶ ವಿಧಾನ ಪರಿಷತ್ತಿನ 11 ಪದವೀಧರರು ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಮತ್ತು ಮಹಾರಾಷ್ಟ್ರ ವಿಧಾನ ಪರಿಷತ್ತಿನ 5 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಬಿಜೆಪಿ ಮುಖಂಡರಾದ ಗಸ್ತಿ ಅವರು ಜುಲೈನಲ್ಲಿ ಮೊದಲ ಬಾರಿಗೆ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಕೋವಿಡ್ -19 ಕಾರಣ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನದ್ದರು.