ಇಬ್ಬರು ನಾಯಕರು ಒಂದೇ ವೇಳೆಗೆ ದೇವಸ್ಥಾನಕ್ಕೆ ಆಗಮಿಸಿದ್ದರು. ಈ ವೇಳೆ ಡಾ.ಜಿ.ಪರಮೇಶ್ವರ್‌ ಅವರು ವಿಜಯೇಂದ್ರಗೆ ಶಾಲು ಹೊದಿಸಿ, ಹಾರ ಹಾಕಿ ಅಭಿನಂದನೆ ಸಲ್ಲಿಸಿದರು. ಇದಕ್ಕೆ ಪ್ರತಿಯಾಗಿ ವಿಜಯೇಂದ್ರ ಅವರು ಡಾ.ಜಿ.ಪರಮೇಶ್ವರ್‌ ಅವರ ಕಾಲಿಗೆ ನಮಸ್ಕರಿಸಿ, ಆಶೀರ್ವಾದ ಪಡೆದರು. 

ತುಮಕೂರು(ಏ.15):  ಮಾಜಿ ಡಿಸಿಎಂ ಹಾಗೂ ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಾ.ಜಿ.ಪರಮೇಶ್ವರ್‌ ಮತ್ತು ಬಿಜೆಪಿ ಯುವ ಮುಖಂಡ ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ಸಂಜೆ ಯಡಿಯೂರಿನ ಸಿದ್ಧಲಿಂಗೇಶ್ವರ ಸನ್ನಿಧಿಯಲ್ಲಿ ಮುಖಾಮುಖಿಯಾಗಿದ್ದರು.

Add Asianetnews Kannada as a Preferred SourcegooglePreferred

ಇಬ್ಬರು ನಾಯಕರು ಒಂದೇ ವೇಳೆಗೆ ದೇವಸ್ಥಾನಕ್ಕೆ ಆಗಮಿಸಿದ್ದರು. ಈ ವೇಳೆ ಡಾ.ಜಿ.ಪರಮೇಶ್ವರ್‌ ಅವರು ವಿಜಯೇಂದ್ರಗೆ ಶಾಲು ಹೊದಿಸಿ, ಹಾರ ಹಾಕಿ ಅಭಿನಂದನೆ ಸಲ್ಲಿಸಿದರು. ಇದಕ್ಕೆ ಪ್ರತಿಯಾಗಿ ವಿಜಯೇಂದ್ರ ಅವರು ಡಾ.ಜಿ.ಪರಮೇಶ್ವರ್‌ ಅವರ ಕಾಲಿಗೆ ನಮಸ್ಕರಿಸಿ, ಆಶೀರ್ವಾದ ಪಡೆದರು. 

ಮತ್ತೆ 5 ವರ್ಷದವರೆಗೂ ನಿಮ್ಮ ಜೊತೆಗಿರುವಂತೆ ಮಾಡಿ

ಪೂಜೆ ಬಳಿಕ ಇಬ್ಬರು ನಾಯಕರು ಅಲ್ಲಿಂದ ವಾಪಸ್‌ ತೆರಳಿದರು. ಇವರಿಬ್ಬರು ಜೊತೆಗೆ ತೆಗೆಸಿಕೊಂಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಚರ್ಚೆ ಹುಟ್ಟು ಹಾಕಿದೆ.