ರಾಸಲೀಲೆ ಸಿ.ಡಿ.ಸ್ಫೋಟಗೊಂಡು ರಮೇಶ್ ಜಾರಕಿಹೊಳಿ ಅವರ ಸಚಿವ ಸ್ಥಾನ ನುಂಗಿದೆ. ಇದರ ಬೆನ್ನಲ್ಲೇ ರಮೇಶ್​ ಜಾರಕಿಹೊಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಬೆಂಗಳೂರು, (ಮಾ.16): ರಾಸಲೀಲೆ ಸಿ.ಡಿ. ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ತಲೆ ಎತ್ತಿ ಓಡಾಡದ ಸ್ಥಿತಿ ನಿರ್ಮಾಣವಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದರ ಮಧ್ಯೆ ಕನ್ನಡಿಗರಿಗೆ ಅವಾಚ್ಯ ಪದವನ್ನು ಬಳಸಿದ್ದಾರೆ ಎಂದು ಆರೋಪಿಸಿ ಕನ್ನಡಿಗರ ರಕ್ಷಣಾ ವೇದಿಕೆ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ್ದಾರೆ.

ಜಾರಕಿಹೊಳಿ ಸಿ.ಡಿ. ಕೇಸ್: ಮಹಾನಾಯಕಿಯನ್ನು ಎಳೆದು ತಂದ ಬಿಜೆಪಿ! 

ಹೌದು....ಯುವತಿಯೊಂದಿಗಿನ ರಾಸಲೀಲೆ ವೇಳೆ ರಮೇಶ್ ಜಾರಕಿಹೊಳಿ ಅವರು ಕನ್ನಡಿಗರ ಬಗ್ಗೆ ಅವಹೇಳನ ಮಾತುಗಳನ್ನಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕನ್ನಡಿಗರ ರಕ್ಷಣಾ ವೇದಿಕೆಯಿಂದ ಕಬ್ಬನ್​ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಮೇಶ್ ಜಾರಕಿಹೊಳಿ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ. ಕನ್ನಡಿಗರಿಗೆ ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ. ಕರ್ನಾಟಕದಲ್ಲಿ ಹುಟ್ಟಿ, ಕರ್ನಾಟಕದಲ್ಲಿ ಬೆಳೆದು ಅಪಮಾನ ಮಾಡುವುದು ಅವರಿಗೆ ಶೋಭೆಯಲ್ಲ ಎಂದು ಹೇಳಿರುವ ಕನ್ನಡಿಗರ ರಕ್ಷಣಾ ವೇದಿಕೆ ಸದಸ್ಯರು ಸರ್ಕಾರ ಈ ಕೂಡಲೇ ರಮೇಶ್​ ಜಾರಕಿಹೊಳಿ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.