ಬೇರೆ-ಬೇರೆ ಕಾರಣಗಳಿಂದ ಅಸಮಾಧಾನಗೊಂಡಿರುವ ಶಾಸರು ಹಾಗೂ ಸಚಿವರುಗಳನ್ನು ಸಮಾಧಾನಪಡಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮುಂದಾಗಿದ್ದಾರೆ. 

ಬೆಂಗಳೂರು, (ಫೆ.01): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಚಿವರಿಗೆ ಮತ್ತು ಬಿಜೆಪಿ ಶಾಸಕರಿಗೆ ಔತಣಕೂಟ ಏರ್ಪಡಿಸಿದ್ದಾರೆ.

Add Asianetnews Kannada as a Preferred SourcegooglePreferred

ನಾಳೆ ಅಂದ್ರೆ ಮಂಗಳವಾರ (ಫೆ.02) ತಮ್ಮ ಸರ್ಕಾರಿ‌ ನಿವಾಸದಲ್ಲಿ ಸಿಎಂ, ಸಚಿವರಿಗೆ ಮತ್ತು ಬಿಜೆಪಿ ಶಾಸಕರಿಗೆ ಸಿಎಂ ನಿವಾಸದಲ್ಲಿ ಡಿನ್ನರ್ ಪಾರ್ಟಿ ಆಯೋಜಿಸಿದ್ದು, ಕುತೂಹಲ ಮೂಡಿಸಿದೆ.

ಅಚ್ಚರಿ ಮೂಡಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಈ ದಿಢೀರ್ ನಿರ್ಧಾರ..!

ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಈ ಡಿನ್ನರ್ ಪಾರ್ಟಿ ಕೊಡುತ್ತಿದ್ದಾರೆ ಎನ್ನಲಾಗಿದೆ.

ಕೆಲವರು ತಮ್ಮ ಕ್ಷೇತ್ರಕ್ಕೆ ಅನುದಾನ ಸಿಗ್ತಿಲ್ಲ ಅಂತ ಅಸಮಾಧಾನಗೊಂಡಿದ್ದಾರೆ. ಇನ್ನು ಕೆಲವರು ಸಚಿವ ಸ್ಥಾನ ಸಿಗದೆ ಮುನಿಸಿಕೊಂಡಿದ್ದಾರೆ. ಅಲ್ಲದೇ ಖಾತೆ ಹಂಚಿಕೆ ಬಗ್ಗೆಯೂ ಸಿಎಂ ಮೇಲೆ ಬೇಸರಗೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿಎಂ ಔತಣಕೂಟದ ಮೂಲಕ ಎಲ್ಲರನ್ನೂ ಸಮಾಧಾನಗೊಳಿಸಲು ಮುಂದಾಗಿದ್ದಾರೆ. ಅಲ್ಲದೇ ಮುಂದೆ ರಾಜ್ಯ ಬಿಜೆಟ್ ಇರುವುದರಿಂದ ಎಲ್ಲರನ್ನು ಗಣನೆಗೆ ತೆಗೆದುಕೊಳ್ಳಲು ಈ ಅಸ್ತ್ರ ಪ್ರಯೋಗಿಸಿದ್ದಾರೆ ಎಂದು ತಿಳಿದುಬಂದಿದೆ.