Asianet Suvarna News Asianet Suvarna News

ಬಿಜೆಪಿ- ದಳ ಮೈತ್ರಿಗೆ ಅಲ್ಪಸಂಖ್ಯಾತರ ಅಸಮಾಧಾನ: ಜೆಡಿಎಸ್‌ ಬಿಡ್ಬೇಕಾ?, ಕುತೂಹಲ ಮೂಡಿಸಿದ ಇಬ್ರಾಹಿಂ ನಡೆ

ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ದೆಹಲಿಗೆ ತೆರಳಿ ಬಿಜೆಪಿಯೊಂದಿಗೆ ಮೈತ್ರಿ ಖಚಿತವಾದ ನಂತ ಸಿ.ಎಂ.ಇಬ್ರಾಹಿಂ ಪಕ್ಷದ ಯಾವುದೇ ಪತ್ರಿಕಾಗೋಷ್ಠಿಗಳಲ್ಲಿ ಕಾಣಿಸಿಕೊಂಡಿಲ್ಲ. ಅಲ್ಲದೇ ಮೈತ್ರಿ ವಿಚಾರದಲ್ಲಿ ಪ್ರತಿಕ್ರಿಯೆಯನ್ನೂ ನೀಡಿಲ್ಲ. ಕೆಲವು ದಿನಗಳಿಂದ ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ಇದು ಇಬ್ರಾಹಿಂ ಅವರ ಮುಂದಿನ ನಡೆಯ ಬಗ್ಗೆ ತೀವ್ರ ಕುತೂಹಲ ಮೂಡಿಸಿದೆ.

CM Ibrahim will held Meeting For BJP JDS Alliance grg
Author
First Published Sep 29, 2023, 6:15 AM IST

ಬೆಂಗಳೂರು(ಸೆ.29):  ಬಿಜೆಪಿ ಜತೆ ಜೆಡಿಎಸ್‌ ಮೈತ್ರಿ ಅಧಿಕೃತಗೊಳ್ಳುತ್ತಿದ್ದಂತೆ ಪಕ್ಷದ ಚಟುವಟಿಕೆಯಿಂದ ಅಂತರ ಕಾಯ್ದುಕೊಂಡಿರುವ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಮುಂದಿನ ತಿಂಗಳು 15ರ ನಂತರ ಬೆಂಬಲಿಗರ ಸಭೆ ನಡೆಸಿ ತಮ್ಮ ನಿಲುವು ಪ್ರಕಟಿಸುವ ಸಾಧ್ಯತೆ ಇದೆ.

ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ದೆಹಲಿಗೆ ತೆರಳಿ ಬಿಜೆಪಿಯೊಂದಿಗೆ ಮೈತ್ರಿ ಖಚಿತವಾದ ನಂತ ಸಿ.ಎಂ.ಇಬ್ರಾಹಿಂ ಪಕ್ಷದ ಯಾವುದೇ ಪತ್ರಿಕಾಗೋಷ್ಠಿಗಳಲ್ಲಿ ಕಾಣಿಸಿಕೊಂಡಿಲ್ಲ. ಅಲ್ಲದೇ ಮೈತ್ರಿ ವಿಚಾರದಲ್ಲಿ ಪ್ರತಿಕ್ರಿಯೆಯನ್ನೂ ನೀಡಿಲ್ಲ. ಕೆಲವು ದಿನಗಳಿಂದ ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ಇದು ಇಬ್ರಾಹಿಂ ಅವರ ಮುಂದಿನ ನಡೆಯ ಬಗ್ಗೆ ತೀವ್ರ ಕುತೂಹಲ ಮೂಡಿಸಿದೆ.

ಬಿಜೆಪಿ-ಜೆಡಿಎಸ್ ಮೈತ್ರಿ.. ಅಡಕತ್ತರಿಯಲ್ಲಿ ಸಿಎಂ ಇಬ್ರಾಹಿಂ !

ಪಕ್ಷ ತೊರೆಯುವಂತೆ ಬೆಂಬಲಿಗರು ಒತ್ತಾಯ ಮಾಡುತ್ತಿರುವ ಕಾರಣ ಮುಂದಿನ ತಿಂಗಳು 15ರ ಬಳಿಕ ಬೆಂಬಲಿಗರ ಸಭೆ ಕರೆದು ಚರ್ಚೆ ನಡೆಸುವ ಚಿಂತನೆ ನಡೆಸಿದ್ದಾರೆ. ಸಭೆಯ ಬಳಿಕ ಸೂಕ್ತ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬಿಜೆಪಿ ಜತೆ ಜೆಡಿಎಸ್‌ ಮೈತ್ರಿ ವಿಚಾರದಲ್ಲಿ ಅಲ್ಪಸಂಖ್ಯಾತ ನಾಯಕರು ತೀವ್ರ ಅಸಮಾಧಾನಗೊಂಡಿದ್ದು, ಈಗಾಗಲೇ ಕೆಲವರು ಪಕ್ಷವನ್ನು ತೊರೆದಿದ್ದಾರೆ. ಇನ್ನು ಕೆಲವರು ಪಕ್ಷ ತೊರೆಯುವಲ್ಲಿ ಮುಂದಾಗಿದ್ದಾರೆ ಎನ್ನಲಾಗಿದೆ.

Follow Us:
Download App:
  • android
  • ios