ಸಿಎಂ ರಾಜಕೀಯ ಕಾರ್ಯದರ್ಶಿಗಳ ನೇಮಕ ರದ್ದು: ಹೈಕೋರ್ಟ್ಗೆ ಉತ್ತರಿಸಿದ ರಾಜ್ಯ ಸರ್ಕಾರ
* ಸಿಎಂ ರಾಜಕೀಯ ಕಾರ್ಯದರ್ಶಿಗಳ ನೇಮಕ ರದ್ದು
* ರದ್ದಾಗಿರುವುದಾಗಿ ಹೈಕೋರ್ಟ್ ಗೆ ತಿಳಿಸಿದ ರಾಜ್ಯ ಸರ್ಕಾರ
* ವಕೀಲ ಎಸ್. ಉಮಾಪತಿ ಸಲ್ಲಿಸಿದ್ದ ಪಿಐಎಲ್ ಇತ್ಯರ್ಥ
ಬೆಂಗಳೂರು, (ಆ.06): ಸಿಎಂ ರಾಜಕೀಯ ಕಾರ್ಯದರ್ಶಿ ನೇಮಕ ರದ್ದು ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಈ ಮೂಲಕ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ಪ್ರಶ್ನಿಸಿ ವಕೀಲ ಎಸ್. ಉಮಾಪತಿ ಹೈಕೋರ್ಟ್ಗೆ ಸಲ್ಲಿಸಿದ್ದ ಪಿಐಎಲ್ ಇತ್ಯರ್ಥವಾಗಿದೆ.
ಬಿಎಸ್ವೈ ಅವಧಿಯಲ್ಲಿ ನೇಮಕಗೊಂಡಿದ್ದ 10 ಹುದ್ದೆಗಳು ರದ್ದು, ರೇಣುಕಾಚಾರ್ಯ, ಸಂತೋಷ್ಗೆ ಶಾಕ್
ಪಿಐಎಲ್ ಸಲ್ಲಿಕೆಯಾಗಿದ್ದ ಹಿನ್ನೆಲೆ ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜಕೀಯ ಕಾರ್ಯದರ್ಶಿಗಳಾಗಿದ್ದವರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿತ್ತು.
ವಿಚಾರಣೆ ನಡೆಸಿದ್ದ ಹೈಕೋರ್ಟ್ ಸರ್ಕಾರದಿಂದ ಸ್ಪಷ್ಟನೆ ಕೇಳಿತ್ತು. ಈ ರೀತಿ ಹುದ್ದೆ ಸೃಷ್ಟಿ ಮಾಡಲು ಕಾನೂನಿನಲ್ಲಿ ಅವಕಾಶವಿದೆಯೇ.. ಎಂದು ಸರ್ಕಾರದ ಪರ ವಕೀಲರಿಗೆ ಹೈಕೋರ್ಟ್ ಪ್ರಶ್ನೆ ಮಾಡಿತ್ತು. ಇಂದು (ಆ.06) ಹೈಕೋರ್ಟ್ಗೆ ಅವರ ನೇಮಕ ರದ್ದುಗೊಳಿಸಿರುವುದಾಗಿ ಉತ್ತರ ನೀಡಿದೆ.
ಈ ಹಿಂದೆ ಎನ್.ಆರ್.ಸಂತೋಷ್, ಎಸ್ ಆರ್ ವಿಶ್ವನಾಥ್, ಎಂಪಿ ರೇಣುಕಾಚಾರ್ಯ ಹಾಗೂ ಶಂಕರಗೌಡ ಪಾಟೀಲ್ ಅವರು
ಯಡಿಯೂರಪ್ಪನವರ ಅವರ ರಾಜಕೀಯ ಕಾರ್ಯದರ್ಶಿಗಳಾಗಿದ್ದರು. ಇದೀಗ ಬೊಮ್ಮಾಯಿ ಸಿಎಂ ಆದ ಬಳಿಕ ರಾಜಕೀಯ ಕಾರ್ಯದರ್ಶಿಗಳ ಹುದ್ದೆಗಳನ್ನು ರದ್ದು ಮಾಡಿದ್ದಾರೆ.