ಬೆಂಗಳೂರಿನಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ ದೀಪಾವಳಿ ಹಬ್ಬದ ವೇಳೆ ಪಟಾಕಿ ಮಾರುವಂತಿಲ್ಲ ಹಾಗೂ ಪಟಾಕಿ ಹಚ್ಚುವಂತಿಲ್ಲ ಎಂದು ತೀರ್ಮಾನಿಸಿರುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಆರ್‌ಆರ್‌ ನಗರ ಹಾಗೂ ಶಿರಾ ವಿಧಾನಸಬಾ ಉಪಚುನಾವಣೆ ಪಕ್ಕಾ ಲೆಕ್ಕಾ ಹೇಳಿದ್ದಾರೆ.

ಬೆಂಗಳೂರು, (ನ.06): ರಾಜರಾಜೇಶ್ವರಿ ನಗರ ಹಾಗೂ ತುಮಕೂರಿನ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮುಗಿದಿದ್ದು, ಎಲ್ಲರ ಗಮನ ಇದೀಗ ಫಲಿತಾಂಶದತ್ತ ನೆಟ್ಟಿದೆ.

Add Asianetnews Kannada as a Preferred SourcegooglePreferred

ಇದೇ ನವೆಂಬರ್ 10ರಂದು ಎರಡೂ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಅದಕ್ಕೂ ಮೊದಲೇ ಮೂರು ಪಕ್ಷಗಳ ನಾಯಕರು ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದು, ಕೆಲವರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಶಿರಾ ಹಾಗೂ ಆರ್.ಆರ್.ನಗರ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾರಾ, ಶಿರಾದಲ್ಲಿ ಪರ್ಸೆಂಟೇಜ್ ಲೆಕ್ಕಾಚಾರ ಶುರು; ಗೆಲ್ಲೋ ಕುದುರೆ ಯಾರು?

ಶಿರಾ ಮತ್ತು ಆರ್‍ಆರ್ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಯಾರೂ ಏನೇ ಹೇಳಿದರೂ ಬಿಜೆಪಿ ಅಭ್ಯರ್ಥಿಗಳೇ 100ಕ್ಕೆ ನೂರರಷ್ಟು ಗೆಲ್ಲುವುದು ಖಚಿತ. ನಾನು ಏನೇ ಹೇಳಬೇಕಾದರೂ ನೂರಾರು ಬಾರಿ ಲೆಕ್ಕಾಚಾರ ಹಾಕಿಯೇ ಹೇಳುತ್ತೇನೆ. ಈವರೆಗೂ ನಾನು ಹೇಳಿರುವ ಯಾವ ಮಾತುಗಳು ಕೂಡ ಸುಳ್ಳಲಾಗಿಲ್ಲ ಎಂದರು.

ಉಪಚುನಾವಣೆ ನಡೆದಿರುವ ಆರ್‍ಆರ್‍ ನಗರ ಮತ್ತು ಶಿರಾದಲ್ಲಿ ಬಿಜೆಪಿ ಅಭ್ಯರ್ಥಿಗಳು ನಿರೀಕ್ಷೆಗೂ ಮೀರಿದ ಮತಗಳಿಂದ ಗೆಲ್ಲುತ್ತಾರೆ. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಅನುಮಾನ ಬೇಡ ಎಂದು ಅಚಲ ವಿಶ್ವಾಸ ವ್ಯಕ್ತಪಡಿಸಿದರು.