Asianet Suvarna News Asianet Suvarna News

'CDಗೆ ತಡೆಯಾಜ್ಞೆ ತರುವಲ್ಲಿ ತೋರಿದ ತರಾತುರಿ ಆಕ್ಸಿಜನ್​ ವಿಚಾರದಲ್ಲಿ ಯಾಕಿಲ್ಲ?'

ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಜನರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಿಡಿಕಾರಿದೆ.

congress demands Resign Sudhakar For Chamarajanagar Oxygen Shortage Tragedy rbj
Author
Bengaluru, First Published May 3, 2021, 7:56 PM IST

ಬೆಂಗಳೂರು, (ಮೇ.03): ಚಾಮರಾಜನಗರದಲ್ಲಿ ತಡರಾತ್ರಿ ಆಕ್ಸಿಜನ್ ಕೊರತೆಯಾದ ಪರಿಣಾಮ 24 ರೋಗಿಗಳು ಸಾವನ್ನಪ್ಪಿದ್ದಾರೆ. ಆಕ್ಸಿಜನ್​ ಕೊರತೆಗೆ ಸರ್ಕಾರವೇ ಕಾರಣ ಎಂದು ಟೀಕಿಸಿರುವ ಕಾಂಗ್ರೆಸ್,​ ಆರೋಗ್ಯ ಇಲಾಖೆ ಸಚಿವ ಡಾ. ಕೆ. ಸುಧಾಕರ್ ವಿರುದ್ಧ ಕಿಡಿಕಾರಿದೆ.

ಡಾ. ಸುಧಾಕರ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಸುಧಾಕರ್ ಅವರೇ, ಸಿ.ಡಿಗೆ ತಡೆಯಾಜ್ಞೆ ತರುವಲ್ಲಿ ತಾವು ತೋರಿದ ತರಾತುರಿಯನ್ನು ಆಕ್ಸಿಜನ್ ವಿಚಾರದಲ್ಲಿ ತೋರದಿದ್ದದ್ದು ಏಕೆ..? ಈ ಸಾವುಗಳ ಹೊಣೆ ನಿಮ್ಮದಲ್ಲದೆ ಇನ್ಯಾರದ್ದು ಎಂದು ಪ್ರಶ್ನಿಸಿದೆ. ಅಲ್ಲದೇ  #ResignKillerSudhakar ಎಂದು ಹ್ಯಾಷ್​​ಟ್ಯಾಗ್ ಬಳಸಿ ಆಗ್ರಹಿಸಿದೆ.

'ಸಚಿವರು ಕೋರ್ಟ್ ಮೊರೆ ಹೋಗಿದ್ದಾರೆ ಅಂದ್ರೆ ಎಲ್ಲೋ ಒಂದ್ಕಡೆ ಅನುಮಾನ ಬಂದಿದೆ' 

ಬಿಜೆಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರದ್ದು ಎನ್ನಲಾದ ಸಿ.ಡಿ ಬಿಡುಗಡೆಯಾದ ಬೆನ್ನಲ್ಲೇ ಡಾ. ಸುಧಾಕರ್ ಆದಿಯಾಗಿ ಹಲವು ಸಚಿವರು ಕೋರ್ಟ್​​ ಮೊರೆ ಹೋಗಿದ್ದರು. ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಮಾನಹಾನಿಕರ ಸುದ್ದಿಗಳನ್ನ ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದಿದ್ದರು.

Follow Us:
Download App:
  • android
  • ios