Asianet Suvarna News Asianet Suvarna News

ದಲಿತ, ದಮನಿತ ವರ್ಗಗಳ ಹಕ್ಕು ಈಡೇರಿಸಲು ಕಾಂಗ್ರೆಸ್‌ ಸರ್ಕಾರ ಬದ್ಧ: ನೀರಲಕೇರಿ

ಉದ್ಯೋಗ ಸೃಷ್ಟಿ, ಆರ್ಥಿಕ ಚಟುವಟಿಕೆಗಳ ಉತ್ತೇಜನಕ್ಕೆ ಒತ್ತು ಕೊಡಲು ಉದ್ದೇಶಿಸಿದ್ದೇವೆ ನಮ್ಮ ಸರ್ಕಾರ ದಲಿತ, ದಮನಿತ ವರ್ಗಗಳಿಗೆ ನ್ಯಾಯಯುತವಾದ ಹಕ್ಕುಗಳನ್ನು ಈಡೇರಿಸಲು ಮೊದಲಿನಿಂದಲೂ ಬದ್ಧವಾಗಿದೆ: ಕೆಪಿಸಿಸಿ ಮಾದ್ಯಮ ವಕ್ತಾರ ಪಿ.ಎಚ್. ನೀರಲಕೇರಿ

Congress Government Committed to Fulfill the Rights of Dalit Oppressed Classes Says PH Neeralakeri grg
Author
First Published Aug 3, 2023, 11:47 PM IST | Last Updated Aug 3, 2023, 11:47 PM IST

ವರದಿ: ಪರಮೇಶ್ ಅಂಗಡಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಧಾರವಾಡ 

ಧಾರವಾಡ(ಆ.03):  ಎಸ್‌ಸಿ ಮತ್ತು ಎಸ್‌ಟಿ ಯೋಜನೆಯಲ್ಲಿನ ಅನುದಾನಗಳನ್ನು ಇತರೆ ಉದ್ದೇಶಕ್ಕೆ ಬಳಸಲಾಗುತ್ತಿದೆ ಎಂದು ಕೆಲವರು ದಿಕ್ಕು ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಮಾದ್ಯಮ ವಕ್ತಾರ ಪಿ.ಎಚ್. ನೀರಲಕೇರಿ ಅವರು ದಾರಿ ತಪ್ಪಿಸುವವರ ವಿರುದ್ಧ ಆಕ್ರೋಶ ಹೊರಹಾಕಿದರು. 

ಇಂದು ಕೆಲವು ಮಾಧ್ಯಮಗಳಲ್ಲೂ ಈ ಕುರಿತು ವರದಿಗಳು ಪ್ರಸಾವ ವಾಗುತ್ತಿವೆ. ವಾಸ್ತವವಾಗಿ ಸರ್ಕಾರ ಯಾವುದೇ ರೀತಿಯಲ್ಲೂ ಪರಿಶಿಷ್ಟ ಜಾತಿ/ಪಂಗಡಗಳ ಕಲ್ಯಾಣಕ್ಕೆಂದು ಮೀಸಲಿರಿಸಿದ ಹಣವನ್ನು ಇತರ ಜನ ಸಮುದಾಯಗಳ/ಇತರೆ ಉದ್ದೇಶಗಳಿಗೆ ಬಳಸುವುದಿಲ್ಲ ಪರಿಶಿಷ್ಟ ಜಾತಿ/ಪಂಗಡಗಳಿಗೆ ಮೀಸಲಿರಿಸಿದ ಅನುದಾನಗಳನ್ನು ಇತರೆ ಉದ್ದೇಶಗಳಿಗೆ ಬಳಸಲು ಅವಕಾಶ ನೀಡುತ್ತಿದ್ದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಕಾಯ್ದೆ 2013 ರ ಸೆಕ್ಷನ್ 7(ಡಿ) ಯನ್ನು ರದ್ದು ಮಾಡಲು ಈಗಾಗಲೆ ತೀರ್ಮಾನ ಮಾಡಲಾಗಿದೆ. ಬಜೆಟ್‌ನಲ್ಲೂ ಈ ಬಾರಿ ಘೋಷಿಸಲಾಗಿದೆ. ಇದರ ಪರಿಣಾಮವಾಗಿ ಈ ಕೆಳಗಿನ ಇಲಾಖೆಗಳಿಗೆ ಅನುದಾನ ಹಂಚಿಕೆಯನ್ನು ಕಡಿತಗೊಳಿಸಿದ್ದು ಅದನ್ನು ಈ ಬಾರಿ ಫಲಾನುಭವಿ ಆಧಾರಿತ ಕಾರ್ಯಕ್ರಮಗಳಿಗೆ ಹಂಚಿಕೆ ಮಾಡಲಾಗಿದೆ. ಸೆಕ್ಷನ್ 7(ಡಿ) ಅಡಿಯಲ್ಲಿದ್ದ ಕಾರಣಕ್ಕೆ ಸಾವಿರಾರು ಕೋಟಿ ರೂಪಾಯಿಗಳನ್ನು ರಸ್ತೆ, ಸೇತುವೆಗಳಿಗೆ ಬಳಸಲು ಅವಕಾಶವಿತ್ತು. ಇದರಿಂದ ಪರಿಶಿಷ್ಟ ಸಮುದಾಯಗಳಿಗೆ ಆಗುತ್ತಿದ್ದ ಸಮಸ್ಯೆಯನ್ನು ನಮ್ಮ ಸರ್ಕಾರ ನಿಲ್ಲಿಸಿದೆ ಎಂದು ಹೇಳಿದ್ದಾರೆ. 

ಧಾರವಾಡ: ಸಿವಿಲ್‌ ಗುತ್ತಿಗೆದಾರರ ₹3200ಕೋಟಿ ಬಿಲ್‌ ಬಾಕಿ!

ಪ.ಜಾತಿ/ಪ.ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅಡಿ ಅನುದಾನ ಹಂಚಿಕೆ ಮಾಡಬೇಕಾಗಿದ್ದು 2023-24 ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅಡಿ ಒಟ್ಟು ರೂ.34,294 ಕೋಟಿ ಅನುದಾನ ಒದಗಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಇದು 13% ಅಂದರೆ ರೂ.4,031 ಕೋಟಿ ಹೆಚ್ಚಳವಾಗಿದೆ ಸರ್ಕಾರವು ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಯಡಿ ಮೀಸಲಿರಿಸಿದ ಒಟ್ಟು ಅನುದಾನದಲ್ಲಿ ರೂ.11,144 ಕೋಟಿಗಳನ್ನು ಗ್ಯಾರಂಟಿ ಯೋಜನೆಗಳಿಗೆಂದು ಒದಗಿಸಿದೆ. 

ಉದ್ಯೋಗ ಸೃಷ್ಟಿ, ಆರ್ಥಿಕ ಚಟುವಟಿಕೆಗಳ ಉತ್ತೇಜನಕ್ಕೆ ಒತ್ತು

ಇನ್ನೂ ಹಣವನ್ನು ಕಡ್ಡಾಯವಾಗಿ ಪಜಾತಿ/ ಪಂಗಡಗಳ ಕುಟುಂಬಗಳಿಗೆ ವಿನಿಯೋಗಿಸಲಾಗುವುದು ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅಧಿನಿಯಮ 2013ರ ಅನ್ವಯ ಪ.ಜಾತಿ/ಪ.ಪಂಗಡದವರಿಗೆ ನೇರವಾಗಿ ಪ್ರಯೋಜನವಾಗುವ ವೈಯಕ್ತಿಕ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ವಾಸಸ್ಥಳ ಅಭಿವೃದ್ಧಿಗೆ ಅನುದಾನ ಹಂಚಿಕೆ ಮಾಡಲು ಅವಕಾಶವಿರುತ್ತದೆ. ಈ ಅವಕಾಶಗಳನ್ನು ಇನ್ನಷ್ಟು ಹೆಚ್ಚಿಸಲಾಗುವುದು ಹಾಗೂ ಉದ್ಯೋಗ ಸೃಷ್ಟಿ, ಆರ್ಥಿಕ ಚಟುವಟಿಕೆಗಳ ಉತ್ತೇಜನಕ್ಕೆ ಒತ್ತು ಕೊಡಲು ಉದ್ದೇಶಿಸಿದ್ದೇವೆ ನಮ್ಮ ಸರ್ಕಾರ ದಲಿತ, ದಮನಿತ ವರ್ಗಗಳಿಗೆ ನ್ಯಾಯಯುತವಾದ ಹಕ್ಕುಗಳನ್ನು ಈಡೇರಿಸಲು ಮೊದಲಿನಿಂದಲೂ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. 

2008 ರಿಂದ 2013 ರವರೆಗೆ ಆಡಳಿತ ನಡೆಸಿದ ಸರ್ಕಾರ ಎಸ್‌ಸಿಪಿ/ ಟಿಎಸ್‌ಪಿ ಯೋಜನೆಗಾಗಿ ರೂ.22,261 ಕೋಟಿಗಳನ್ನು ಖರ್ಚು ಮಾಡಿತ್ತು. ಆದರೆ 2013 ರವರೆಗೆ ಆಡಳಿತ ನಡೆಸಿದ್ದ ನಮ್ಮ ಸರ್ಕಾರ ರೂ.88,530 ಕೋಟಿಗಳನ್ನು ಖರ್ಚು ಮಾಡಿತ್ತು. ಈಗಲೂ ನಾವು ರೂ.34,294 ಕೋಟಿಗಳನ್ನು ಒದಗಿಸಿಕೊಟ್ಟಿದ್ದೇವೆ. ಗ್ಯಾರಂಟಿ ಯೋಜನೆಗಳಿಗೆ ಅನುದಾನ ಮೀಸಲಿಟ್ಟ ನಂತರವೂ ನಮಗೆ ರೂ.21-22 ಸಾವಿರ ಕೋಟಿಗಳಷ್ಟು ಅನುದಾನವು ಪ.ಜಾತಿ/ ಪ.ಪಂಗಡಗಳ ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಲಭ್ಯವಿರಲಿದೆ. ಈ ಹಿಂದೆ ಆಡಳಿತ ನಡೆಸಿದ್ದ ಸರ್ಕಾರ ಲಭ್ಯವಿದ್ದ ಅನುದಾನಗಳಲ್ಲಿ ಸೆಕ್ಷನ್ 7(ಡಿ) ಅನ್ನು ದುರುಪಯೋಗಪಡಿಸಿಕೊಂಡುಸಾವಿರಾರು ಕೋಟಿ ರೂಗಳನ್ನು ರಸ್ತೆ, ಸೇತುವೆ ನಿರ್ಮಿಸಲು ಖರ್ಚು ಮಾಡಿದೆ ಎಂದಿದ್ದಾರೆ. 

ಅದರಂತೆ, ಎಸ್.ಸಿ.ಎಸ್.ಪಿ./ಟಿ.ಎಸ್.ಪಿ. ಅಧಿನಿಯಮವು ಜಾರಿಯಾದಾಗಿನಿಂದ ಶಿಕ್ಷಣ, ಆರೋಗ್ಯ ಕೃಷಿ, ತೋಟಗಾರಿಕೆ, ನೀರಾವರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಇತರೆ ಇಲಾಖೆಗಳ ಸಾಮಾನ್ಯ ಯೋಜನೆಗಳಲ್ಲಿ ಈ ಹಿಂದಿನಿಂದಲೂ ಎಸ್.ಸಿ.ಎಸ್.ಪಿ./ಟಿ.ಎಸ್.ಪಿ. ಅನುದಾನನ್ನು ಹಂಚಿಕೆ ಮಾಡಲಾಗುತ್ತಿತ್ತು 5 ವರ್ಷಗಳಲ್ಲಿ ಇಂಧನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕೌಶಲ್ಯಾಭಿವೃದ್ಧಿ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಸಾರಿಗೆ ಇಲಾಖೆಗಳಿಗೆ ಹಂಚಿಕೆ ಮಾಡಿರುವ ಅನುದಾನದ ವಿವರ ಈ ಕೆಳಕಂಡಂತಿದೆ ಪ್ರಸಕ್ತ ಸಾಲಿನಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಈ ಕೆಳಗಿನ ಗ್ಯಾರಂಟಿ ಕಾರ್ಯಕ್ರಮಗಳು ನೇರವಾಗಿ ಪ್ರಯೋಜನವಾಗುತ್ತಿರುವ ಎಸ್ಸಿ/ಎಸ್ಟಿ ಜನರಿಗೆ ಹಿನ್ನೆಲೆಯಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅಧಿನಿಯಮದ ಅನುಸಾರವಾಗಿ,ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅಡಿ ಭಾಗಶಃ ಅನುದಾನ ಹಂಚಿಕೆ ಮಾಡಲಾಗಿದೆ ಮೇಲ್ಕಂಡ ಐದುಕಾರ್ಯಕ್ರಮಗಳಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅಡಿಯಲ್ಲಿ ನೀಡಿರುವ ಅನುದಾನವನ್ನು ಎಸ್.ಸಿ/ಎಸ್.ಟಿ ಫಲಾನುಭವಿಗಳಿಗೆ ಮಾತ್ರ ಉಪಯೋಗಿಸಲು ಸೂಚಿಸಲಾಗಿದೆ ಮತ್ತು ಎಸ್.ಸಿ/ಎಸ್.ಟಿ ಫಲಾನುಭವಿಗಳ ನಿಖರ ಅಂಕಿ-ಅಂಶಗಳನ್ನು ಪಡೆದು ಅದರಂತೆ ಅನುದಾನವನ್ನು ಉಪಯೋಗಿಸುತ್ತಿರುವ ಬಗ್ಗೆ ನೋಡಲ್ ಏಜೆನ್ಸಿ ಮೂಲಕ ಪರಿಶೀಲಿಸಿ ಸೂಕ್ತ ಅಗತ್ಯ ಕ್ರಮಗಳನ್ನು ಸಹ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. 

ವೀರೇಂದ್ರ ಹೆಗ್ಗಡೆ ಬಗ್ಗೆ ಅಪಪ್ರಚಾರ ಬೇಡ: ಗುಣಧರನಂದಿ ಶ್ರೀಗಳು

ಎಸ್‌ಸಿ ಮತ್ತು ಎಸ್‌ಟಿ ಯೋಜನೆಗೆ ಹಣ ಕಡಿಮೆಯಾಗುತ್ತಿರುವುದಕ್ಕೆ ಮುಖ್ಯ ಕಾರಣಗಳಲ್ಲಿ ರಾಜ್ಯದ ಸಾಲ ಮತ್ತು ಸಾಲದ ಮೇಲಿನ ಬಡ್ಡಿಯೂ ಒಂದು ರಾಜ್ಯ ಸರ್ಕಾರ ಸಾಲಗಾರನಾಗಲು ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡಬೇಕಾದ ಅನುದಾನಗಳನ್ನು ಕೊಡದಿರುವುದೇ ಮುಖ್ಯ ಕಾರಣ ಕೇಂದ್ರ ಸರ್ಕಾರ 2018-19 ರಲ್ಲಿ ರೂ.24.42 ಲಕ್ಷ ಕೋಟಿ ಬಜೆಟ್ ಮಂಡಿಸಿ ರೂ.51,977 ಕೋಟಿಗಳಷ್ಟನ್ನು ತೆರಿಗೆ ಪಾಲು ಮತ್ತು ಕೇಂದ್ರ ಪುರಸ್ಕೃತ ಯೋಜನೆಗಳಿಗಾಗಿ ಕೊಟ್ಟಿತ್ತು. ಈ ವರ್ಷ ಕೇಂದ್ರದ ಬಜೆಟ್ ರೂ.45.03 ಲಕ್ಷ ಕೋಟಿಗಳಷ್ಟಾಗಿದೆ, ಆದರೆ ರಾಜ್ಯಕ್ಕೆ ಬರಬಹುದೆಂದು ನಿರೀಕ್ಷಿಸಿರುವ ಅನುದಾನ ರೂ.50,257 ಕೋಟಿಗಳು ಮಾತ್ರ 2018 ಕ್ಕೆ ಹೋಲಿಸಿದರೆ 2023 ರಲ್ಲಿ ರೂ.1 ಲಕ್ಷ ಕೋಟಿಗಳಷ್ಟು ತೆರಿಗೆ ಪಾಲು ಮತ್ತು ಕೇಂದ್ರ ಪುರಸ್ಕೃತ ಯೋಜನೆಗಳಿಗಾಗಿ ಬರಬೇಕಾಗಿತ್ತು. ನಮಗೆ ಅನುದಾನ ಕಡಿಮೆಯಾಗುತ್ತಿದೆ. ಅನಿವಾರ್ಯವಾಗಿ ನಾವು ಸಾಲ ಮಾಡಬೇಕಾಗಿದೆ. ಸಾಲದ ಮೇಲಿನ ಬಡ್ಡಿಯೂ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್ಸಿ ಪಿ ಮತ್ತು ಟಿಎಸ್‌ಪಿಗೆ ಅನುದಾನಗಳು ಕಡಿಮೆಯಾಗುತ್ತಿವೆ.

ಇಷ್ಟರ ನಡುವೆಯೂ ನಾವು ಹಿಂದಿನ ಸರ್ಕಾರಕ್ಕೆ ಹೋಲಿಸಿದರೆ ರೂ.4,031 ಗಳಷ್ಟು ಹೆಚ್ಚು ಖರ್ಚು ಮಾಡುತ್ತಿದ್ದೇವೆ. ಹಾಗಾಗಿ ಯಾವುದೆ ಸುಳ್ಳು ಸುದ್ದಿಗಳಿಗೆ ಕಿವಿ ಕೊಡದೆ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ವಿನಂತಿಸುತ್ತೇವೆ ಎಂದು ಹೇಳಿದ್ದಾರೆ. 

Latest Videos
Follow Us:
Download App:
  • android
  • ios