Asianet Suvarna News Asianet Suvarna News

'ಮೀಸಲಾತಿ ಹೋರಾಟ: ಸ್ವಾಮೀಜಿಗಳನ್ನೇ ಸಿಎಂ, ಮಂತ್ರಿ ಮಾಡಿಬಿಡಬೇಕು'

ರಾಜ್ಯದಲ್ಲಿ ವಿವಿಧ ಸಮುದಾಯಗಳು ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟದ ವಿಚಾರವಾಗಿ ಕಾಂಗ್ರೆಸ್ ನಾಯಕ ಕೆ.ಎನ್ ಪ್ರತಿಕ್ರಿಯಿಸಿದ್ದಾರೆ.

Congress Leader KN Rajanna Reacts On Swamiji Protest For reservation rbj
Author
Bengaluru, First Published Feb 19, 2021, 6:18 PM IST

ತುಮಕೂರು, (19): ಎಲ್ಲಾ ಸ್ವಾಮೀಜಿಗಳನ್ನು ಸೇರಿಸಿ ಅವರನ್ನೇ ಎಂಎಲ್‌ಎ, ಮಂತ್ರಿಯನ್ನಾಗಿ ಮಾಡಿಬಿಡಬೇಕು ಎಂದು ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ ವಾಗ್ದಾಳಿ ನಡೆಸಿದ್ದಾರೆ.

ಮೀಸಲಾತಿ‌ಗಾಗಿ ಸ್ವಾಮೀಜಿಗಳ ಹೋರಾಟ ವಿಚಾರಕ್ಕೆ ಸಂಬಂಧಿಸಿ ಮಾಧ್ಯಮಗಳ ಎದುರು ಗುಡುಗಿದ ರಾಜಣ್ಣ, ಈ ಸಮಸ್ಯೆ ಸರಿಹೋಗಬೇಕು ಅಂದರೆ ಎಲ್ಲಾ ಸ್ವಾಮೀಗಳು ಎಂಎಲ್‌ಎ, ಸಿಎಂ ಆಗಿಬಿಡಬೇಕು. ಆಗ ಸಮಸ್ಯೆ ಬಗೆಹರಿಯಬಹುದಷ್ಟೇ. ಇಲ್ಲಾ ಅಂದ್ರೆ ಇದು ನೆವರ್ ಎಂಡಿಂಗ್ ಪ್ರಾಬ್ಲಂ ಎಂದರು.

ಗೌಡ ಲಿಂಗಾಯತ ಸ್ವಾಮೀಜಿಗಳು ಕಾಂಜಿ ಪಿಂಜಿಗಳು ಎಂದ ವಚನಾನಂದ ಶ್ರೀ

ಕುಂಬಾರರು, ಮಡಿವಾಳರು ಈ ರೀತಿಯವರು ಮೀಸಲಾತಿ ಕೇಳಿದ್ರೇ ಪರವಾಗಿಲ್ಲ. ತಳಸಮುದಾಯದ ಶೋಷಿತರು ಮೀಸಲಾತಿ ಕೇಳೋದ್ರಲ್ಲಿ ಅರ್ಥ‌ ಇದೆ. ಲಿಂಗಾಯತರು 2-ಎಗೆ ಬಂದರೆ ಕುರುಬರೆಲ್ಲ ಸತ್ತುಹೋಗುತ್ತಾರೆ. 2ಎನಲ್ಲಿ ಹೆಚ್ಚು ಫಲಾನುಭವಿಗಳು ಕುರುಬರೇ‌ ಇರೋದು. ಅವರೇನಾದರೂ 2Aಗೆ ಬಂದರೆ ಕುರುಬರನ್ನ ಸಾಯಿಸಿ ಬಿಡುತ್ತಾರೆ ಎಂದು ಹೇಳಿದರು. 

Follow Us:
Download App:
  • android
  • ios