ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಂಘ ಪರಿವಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರು, (ಫೆ.14) : ರಾಜ್ಯದಲ್ಲಿ ಮೀಸಲಾತಿ ವಿಚಾರದಲ್ಲಿ ಭಾರಿ ಚರ್ಚೆ ನಡೆಯುತ್ತಿದ್ದ ಸಂದರ್ಭಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಮ್ಮ ಟ್ವೀಟರ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಂಘ ಪರಿವಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮೀಸಲಾತಿಯನ್ನು ವಿರೋಧಿಸುತ್ತಲೇ ಬಂದಿರುವ ಬಿಜೆಪಿ ನಾಯಕರು ಸಾಲುಸಾಲಾಗಿ ನಿಂತು ಮೀಸಲಾತಿಗಾಗಿ ಕೂಗೆಬ್ಬಿಸಿರುವುದು ಪ್ರಾಮಾಣಿಕ ಜ್ಞಾನೋದಯವೇ ? ಸಾಮಾಜಿಕ ನ್ಯಾಯದ ಹೋರಾಟದ ದಿಕ್ಕುತಪ್ಪಿಸುವ ಇನ್ನೊಂದು ರಾಜಕೀಯ ಷಡ್ಯಂತ್ರವೇ ? ಎಂದು ಪ್ರಶ್ನಿಸಿದ್ದಾರೆ.

Scroll to load tweet…

ಮಂಡಲ್ ವರದಿಯನ್ನು ವಿರೋಧಿಸಿ ಮೈಗೆ ಬೆಂಕಿಹಚ್ಚಿಕೊಂಡವರು ಯಾರು? ಉನ್ನತ ಶಿಕ್ಷಣದಲ್ಲಿ ಮೀಸಲಾತಿಯನ್ನು ವಿರೋಧಿಸಿ ಬೀದಿಗಿಳಿದವರು ಯಾರು? ಸ್ಥಳೀಯ ಸಂಸ್ಥೆಗಳಲ್ಲಿನ ಮೀಸಲಾತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದ ರಾಮಾ ಜೋಯಿಸ್ ಯಾವ ಪಕ್ಷದವರು? ಉತ್ತರಿಸುವಿರಾ ಎಂದು ರಾಜ್ಯ ಬಿಜೆಪಿಗೆ ಟ್ಯಾಗ್ ಮಾಡಿದ್ದಾರೆ.

Scroll to load tweet…

ಮೀಸಲಾತಿಯನ್ನು ನೇರವಾಗಿ ವಿರೋಧಿಸಲಿಕ್ಕಾಗದ ಸಂಘ ಪರಿವಾರದ ನಾಯಕರು ವಿವಾದ ಸೃಷ್ಟಿಸಿ, ಸಮುದಾಯಗಳನ್ನು ಪರಸ್ಪರ ಕಾದಾಟಕ್ಕಿಳಿಸಿ ಸಾಮಾಜಿಕ ನ್ಯಾಯದ ಹೋರಾಟದ ಹಾದಿ ತಪ್ಪಿಸುವ ಕುಟಿಲ ಕಾರಸ್ಥಾನಕ್ಕೆ ಅಮಾಯಕ ಜನತೆ ಬಲಿಯಾಗಬಾರದು. ಜಾತಿಯಿಂದಲೇ ನರಕ, ಧರ್ಮದಿಂದಲೇ ಸ್ವರ್ಗ, ನಾವೆಲ್ಲ ಹಿಂದೂ, ನಾವೆಲ್ಲ ಒಂದು ಎಂದು ಹಿಂದೂ ಸಮಾಜೋತ್ಸವ ನಡೆಸುತ್ತಿದ್ದ ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ನೀಡುತ್ತಿದೆ? ಯಾರಾದರೂ ಉತ್ತರಿಸುವಿರಾ? ಎಂದು ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ. 

Scroll to load tweet…