Asianet Suvarna News Asianet Suvarna News

ಛಲವಾದಿ ನಾರಾಯಣಸ್ವಾಮಿ ಸಮಯಸಾಧಕ ರಾಜಕಾರಣಿ: ಸುಂಡಹಳ್ಳಿ ಮಂಜುನಾಥ್

ಆರ್‌ಎಸ್‌ಎಸ್ ಮತ್ತು ಬಿಜೆಪಿ ಅಕ್ರಮಗಳ ಬಗ್ಗೆ ಸಂವಿಧಾನಬದ್ಧವಾಗಿ ಮಾತನಾಡುವ ಪ್ರಿಯಾಂಕ್ ಖರ್ಗೆ ಅವರನ್ನು ನಾರಾಯಣಸ್ವಾಮಿಯಂತಹವರಿಗೆ ಅಧಿಕಾರದ ದಾಹ ತೋರಿಸಿ ಸಮುದಾಯದ ನಾಯಕರನ್ನು ತುಳಿಯುವ ಪ್ರಯತ್ನವನ್ನು ಬಿಜೆಪಿಯವರು ಹಿಂದಿನಿಂದಲೂ ಮಾಡುತ್ತಾ ಬಂದಿದ್ದಾರೆ ಎಂದು ದೂರಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್ 

Congress Leader Sundalli Manjunath Slams BJP MLC Chalavadi Narayanaswamy grg
Author
First Published Sep 1, 2024, 11:38 PM IST | Last Updated Sep 1, 2024, 11:38 PM IST

ಮಂಡ್ಯ(ಸೆ.01):  ಬುದ್ಧ ವಿಹಾರ ಟ್ರಸ್ಟ್‌ಗೆ ಸಿಎ ನಿವೇಶನ ನೀಡಿರುವ ಬಗ್ಗೆ ವಿವಾದ ಸೃಷ್ಟಿಸಿರುವ ಛಲವಾದಿ ನಾರಾಯಣಸ್ವಾಮಿ ಒಬ್ಬ ಸಮಯಸಾಧಕ ರಾಜಕಾರಣಿ. ಕೇವಲ ಅಧಿಕಾರಕ್ಕಾಗಿ ಪಕ್ಷ ಮತ್ತು ಸಿದ್ಧಾಂತ ಬದಲಾಯಿಸುವ ಗೋಸುಂಬೆ ರಾಜಕಾರಣಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್ ಟೀಕಿಸಿದರು.

ಆರ್‌ಎಸ್‌ಎಸ್ ಮತ್ತು ಬಿಜೆಪಿ ಅಕ್ರಮಗಳ ಬಗ್ಗೆ ಸಂವಿಧಾನಬದ್ಧವಾಗಿ ಮಾತನಾಡುವ ಪ್ರಿಯಾಂಕ್ ಖರ್ಗೆ ಅವರನ್ನು ನಾರಾಯಣಸ್ವಾಮಿಯಂತಹವರಿಗೆ ಅಧಿಕಾರದ ದಾಹ ತೋರಿಸಿ ಸಮುದಾಯದ ನಾಯಕರನ್ನು ತುಳಿಯುವ ಪ್ರಯತ್ನವನ್ನು ಬಿಜೆಪಿಯವರು ಹಿಂದಿನಿಂದಲೂ ಮಾಡುತ್ತಾ ಬಂದಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.

ಹುಡುಗರು ಲವ್ ಪ್ರಪೋಸ್ ಮಾಡಿದ್ದಕ್ಕೆ ಆತ್ಮಹತ್ಯೆಗೆ ಶರಣಾದ 15ರ ಬಾಲಕಿ!

ನಾರಾಯಣಸ್ವಾಮಿ ಸಮಾಜಮುಖಿ ಕೆಲಸ ನಿರ್ವಹಿಸುತ್ತಿರುವ ಬುದ್ಧ ವಿಹಾರ ಟ್ರಸ್ಟ್ ಬಗ್ಗೆ ತಿಳಿದಿದ್ದರೂ ಸಂಘ ಪರಿವಾರವನ್ನು ಮೆಚ್ಚಿಸಲು ಖರ್ಗೆ ಕುಟುಂಬವನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ. ಬುದ್ಧ ವಿಹಾರ ಟ್ರಸ್ಟ್‌ಗೆ ನೀಡಿರುವ ನಿವೇಶನ ನೀಡಿರುವ ಕುರಿತು ಮಾತನಾಡುವವರು ಮೈಸೂರು ಹೆಬ್ಬಾಳದ ಎರಡನೇ ಹಂತದಲ್ಲಿ ಎರಡು ಎಕರೆ ಜಮೀನನ್ನು ಬೃಂದಾವನ ಸಾಫ್ಟ್‌ವೇರ್ ಹೆಸರಿನಲ್ಲಿ ೨೦೦೬ರಲ್ಲಿ ಪಡೆದಿರುವ ಇವರು ಇದುವರೆಗೂ ಯಾವುದೇ ಕೈಗಾರಿಕೆ ಚಟುವಟಿಕೆ ನಡೆಸದೆ ಮತ್ತೊಬ್ಬ ದಲಿತರಿಗೂ ಅವಕಾಶ ಸಿಗದಂತೆ ಮಾಡಿರುವುದು ಇವರಿಗಿರುವ ದಲಿತಪರ ಕಾಳಜಿಗೆ ಸಾಕ್ಷಿ ಎಂದು ಮೂದಲಿಸಿದರು.

ದಲಿತರ ಪರ ಕಾಳಜಿ ಇದ್ದರೆ, ಧೈರ್ಯವಿದ್ದರೆ ಆರ್‌ಎಸ್‌ಎಸ್ ಅಂಗ ಸಂಸ್ಥೆಯಾಗಿರುವ ರಾಷ್ಟ್ರೋತ್ಥಾನ ಪರಿಷತ್ತಿಗೆ ನೀಡಿರುವ ಐದು ಎಕರೆ ಜಮೀನು ಮತ್ತು ಚಾಣಕ್ಯ ವಿವಿಗೆ ೧೧೬ ಎಕರೆ ಭೂಮಿ ನೀಡಿರುವ ವಿಚಾರವಾಗಿ ರಾಜ್ಯಪಾಲರಿಗೆ ದೂರು ನೀಡಲಿ ಎಂದು ಸವಾಲು ಹಾಕಿದರು.

ಸಿದ್ದರಾಮಯ್ಯ ಕೊಟ್ಟ ಮಾತನಂತೆ‌ ನಡೆಯುತ್ತಿದ್ದಾರೆ, ಅದಕ್ಕೆ ಬಿಜೆಪಿಯವರಿಗೆ ಹೊಟ್ಟೆ ಕಿಚ್ಚು: ಮಧು ಬಂಗಾರಪ್ಪ

ಖರ್ಗೆ ಅವರ ಆಶೀರ್ವಾದದಿಂದ ಹೌಸಿಂಗ್ ಬೋರ್ಡ್ ನಿರ್ದೇಶಕರಾಗಿ, ಕೇಂದ್ರ ರೈಲ್ವೆ ಮಂಡಳಿ ಅಧ್ಯಕ್ಷ ಮತ್ತು ಅರಣ್ಯ ಅಬಿವೃದ್ಧಿ ನಿಗಮದ ಅಧ್ಯಕ್ಷ ಹುದ್ದೆ ಪಡೆದುಕೊಂಡು ಅಧಿಕಾರ ಅನುಭವಿಸಿ, ಗ್ರಾಪಂ ಚುನಾವಣೆಯಲ್ಲೂ ಗೆಲ್ಲದ ನಾರಾಯಣಸ್ವಾಮಿ ದಲಿತರ ಹೆಸರೇಳಿಕೊಂಡು ಹಿಂಬಾಗಿಲ ಮೂಲಕ ವಿಧಾನ ಪರಿಷತ್ ಸದಸ್ಯರಾಗಿ ನಾಮಕರಣಗೊಂಡಿರುವ ನಿಮಗೆ ಖರ್ಗೆ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಜರಿದರು

ಬಿಜೆಪಿ ಸೇರಿದ ಬಳಿಕ ಮಾನಸಿಕ ಸ್ಥಿಮಿತತೆ ಕಳೆದುಕೊಂಡವರಂತೆ ವರ್ತಿಸುತ್ತಿರುವ ನಾರಾಯಣಸ್ವಾಮಿ ಒಮ್ಮೆ ಬುದ್ಧ ವಿಹಾರಕ್ಕೆ ಹೋದರೆ ಮನಃಪರಿವರ್ತನೆಯಾಗಬಹುದು ಎಂದು ಸಲಹೆ ನೀಡಿದರು. ಗೋಷ್ಠಿಯಲ್ಲಿ ಎಂ.ಎನ್.ಶ್ರೀಧರ್, ಸಿದ್ದಲಿಂಗಯ್ಯ, ಬಿ.ಟಿ.ಗುರುರಾಜ್, ಎಂ.ಹೊಂಬಯ್ಯ, ಹರೀಶ್, ವಿಜಯ್‌ಕುಮಾರ್ ಇತರರಿದ್ದರು.

Latest Videos
Follow Us:
Download App:
  • android
  • ios