Asianet Suvarna News Asianet Suvarna News

ಚುನಾವಣಾ ಆಯೋಗದ ಮೇಲೂ ಹಿಡಿತ ಸಾಧಿಸಲು ಹೊರಟ ಬಿಜೆಪಿ: ಡಿ.ಕೆ.​ಸು​ರೇಶ್‌

ಮತದಾರರ ಪಟ್ಟಿ ಪರಿಷ್ಕರಣೆ ಸರ್ಕಾರದ ಹೊಣೆ, ಅದನ್ನು ಖಾಸಗಿ ಸಂಸ್ಥೆಗೆ ನೀಡಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವ ಕೆಲಸ ಮಾಡು​ತ್ತಿದೆ: ಸಂಸದ ಸುರೇಶ್‌

Congress MP DK Suresh Slams BJP Government grg
Author
First Published Nov 19, 2022, 11:00 PM IST

ರಾಮ​ನ​ಗರ(ನ.19): ಬಿಜೆಪಿ ಪಕ್ಷ ಕೆಲವು ಸ್ವ ಹಿತ ಸಂಸ್ಥೆಗಳ ಮೇಲೆ ಮಾತ್ರ ಹಿಡಿತ ಸಾಧಿಸಿತ್ತು. ಇದೀಗ ಚುನಾವಣಾ ಆಯೋಗದ ಮೇಲೂ ಹಿಡಿತ ಸಾಧಿಸಲು ಹೊರಟಿದೆ ಎಂದು ಸಂಸದ ಡಿ.ಕೆ.​ಸು​ರೇಶ್‌ ವಾಗ್ದಾಳಿ ನಡೆ​ಸಿ​ದರು.

ಸುದ್ದಿ​ಗಾ​ರ​ರೊಂದಿಗೆ ಮಾತ​ನಾ​ಡಿದ ಅವರು, ಮತದಾರರ ಪಟ್ಟಿಪರಿಷ್ಕರಣೆ ಮಾಡುವುದು ಸರ್ಕಾರದ ಹೊಣೆ. ಆ ಜವಾ​ಬ್ದಾ​ರಿ​ಯನ್ನು ಖಾಸಗಿ ಸಂಸ್ಥೆಗೆ ನೀಡಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವ ಕೆಲಸ ಮಾಡು​ತ್ತಿದೆ. ಇದರಲ್ಲಿ ಭಾಗಿ​ಯಾ​ಗಿ​ರುವ ಅಧಿಕಾರಿಗಳು, ಜನಪ್ರತಿನಿಧಿಗಳ ಮೇಲೆ ಚುನಾವಣಾ ಆಯೋಗ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ಈ ಅಕ್ರ​ಮದ ಕುರಿತು ಸಮಗ್ರ ತನಿಖೆಯಾಗಬೇಕು. ತನಿಖೆ ಹೆಸ​ರಿ​ನಲ್ಲಿ ದಾರಿ ತಪ್ಪಿ​ಸುವ ಕೆಲಸ ಮಾಡ​ಬಾ​ರದು. ಅಕ್ರಮದಲ್ಲಿ ಬೆಂಗಳೂರಿನ ಎಲ್ಲಾ ಸಚಿವರು ಪಾಲುದಾರರಾಗಿದ್ದಾರೆ. ಸ್ವತಃ ಮುಖ್ಯಮಂತ್ರಿಗಳೇ ಇದರ ಪಾಲುದಾರಿಕೆ ಹೊಂದಿದ್ದಾರೆ. ಆದ್ದ​ರಿಂದ ಈ ಕೂಡಲೇ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಒತ್ತಾ​ಯಿ​ಸಿ​ದರು.

ಸತೀಶ್‌ ಹೇಳಿಕೆ ದುರಾದೃಷ್ಟಕರ: ಬಿಜೆಪಿಗೆ ಹೋರಾಟ ಮಾಡುವ ನೈತಿಕತೆಯಿಲ್ಲ ಎಂದ ಡಿ.ಕೆ ಸುರೇಶ್

ಕೆಲವು ಬಿಜೆಪಿ ನಾಯಕರ ಅಧೀ​ನ​ದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಗಳಿಗೆ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡುವ ಕೆಲಸವನ್ನು ಕಾನೂನು ಬಾಹಿರವಾಗಿ ಕೊಟ್ಟಿದ್ದಾರೆ. ಆ ಮುಖಾಂತರ ಮತದಾರರ ಪಟ್ಟಿಯಲ್ಲಿ ಸಾಕಷ್ಟುಗೊಂದಲವನ್ನು ಸೃಷ್ಟಿಮಾಡಿದ್ದಾರೆ. ಸಾಕಷ್ಟುಮತಗಳನ್ನು ಡಿಲೀಟ್‌ ಮಾಡಿದ್ದಾರೆ. ಜೊತೆಗೆ ಅವರಿಗೆ ಬೇಕಾದ ಮತದಾರರನ್ನು ಸೇರಿಸಿದ್ದಾರೆ ಎಂದು ಆರೋ​ಪಿ​ಸಿ​ದರು.

ನಮ್ಮ ಪಕ್ಷದ ಉಸಾ​ಬರಿ ಬೇರೆ ಪಕ್ಷ​ದ​ವ​ರಿಗೆ ಬೇಡ. ನಮ್ಮ ಪಕ್ಷ​ದಲ್ಲಿ ಸೂಕ್ತ ಅಭ್ಯರ್ಥಿ ಇದ್ದಾರೆ. ನೀವು ನಿರೀಕ್ಷೆ ಮಾಡ​ದಂತಹ ರೀತಿ​ಯಲ್ಲಿ ಸ್ಥಳೀ​ಯರೇ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡು​ತ್ತಾರೆ ಕಾದು ನೋಡಿ ಎಂದು ಮಾಜಿ ಸಚಿವ ಸಿ.ಪಿ.​ಯೋ​ಗೇ​ಶ್ವರ್‌ಗೆ ತಿರು​ಗೇಟು ನೀಡಿ​ದ​ರು.

Ramanagara: ಬಿಜೆಪಿಯೇ ವಸೂಲಿ ಪಕ್ಷ: ಸಂಸದ ಸುರೇಶ್‌ ವಾಗ್ದಾಳಿ

ಜೆಡಿ​ಎಸ್‌ ಪಂಚ​ರತ್ನ ರಥ​ಯಾತ್ರೆಗೆ ಚಾಲನೆ ನೀಡಿ​ರುವ ಪ್ರಶ್ನೆಗೆ ಉತ್ತ​ರಿ​ಸಿದ ಸಂಸ​ದರು, ಬೇರೆ ಬೇರೆ ಪಕ್ಷದವರು ಪಕ್ಷ ಸಂಘಟನೆಗೆ ಅವರದ್ದೇ ಸ್ಟಾಟರ್ಜಿ ಮಾಡುತ್ತಾರೆ. ಅವರ ಪಕ್ಷದ ಸಿದ್ಧಾಂತಗಳ ಮೇಲೆ ಕಾರ್ಯಕ್ರಮಗಳನ್ನು ರೂಪಿಸುತ್ತಾರೆ. ನಮ್ಮ ಪಕ್ಷ ಸಂಘಟನೆ ಮಾಡಲು ನಾವು ಹಲವು ಕಾರ್ಯಕ್ರಮಗಳನ್ನು ರೂಪಿಸುತ್ತೇವೆ. ಅವರ ಪಕ್ಷದ ಆಂತರಿಕ ವಿಚಾರ ನಮಗೇಕೆ ಎಂದು ಹೇಳಿ​ದರು.

ವಿಧಾನ ಪರಿ​ಷತ್‌ ಸದಸ್ಯ ಸಿ.ಎಂ.ಲಿಂಗಪ್ಪ, ಮಾಜಿ ಶಾಸಕ ಕೆ.ರಾಜು, ಕೆಪಿ​ಸಿಸಿ ಪ್ರಧಾನ ಕಾರ್ಯ​ದರ್ಶಿ ಜಿಯಾ​ವುಲ್ಲಾ, ಜಿಪಂ ಮಾಜಿ ಅಧ್ಯಕ್ಷರಾದ ಇಕ್ಬಾಲ್‌ ಹುಸೇನ್‌, ಕೆ.ರ​ಮೇಶ್‌, ರಾಮ​ನ​ಗರ ನಗ​ರಾ​ಭಿ​ವೃದ್ಧಿ ಪ್ರಾಧಿ​ಕಾರ ಮಾಜಿ ಅಧ್ಯಕ್ಷ ಸಿಎನ್‌ಆರ್‌ ವೆಂಕ​ಟೇಶ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಚೇತನ್‌ಕುಮಾರ್‌ ಇತರರಿದ್ದ​ರು.
 

Follow Us:
Download App:
  • android
  • ios