Asianet Suvarna News Asianet Suvarna News

ಆನಂದ್ ಸಿಂಗ್ ಹಲ್ಲೆ ಪ್ರಕರಣ, ಕೊನೆಗೂ ಕಂಪ್ಲಿ ಶಾಸಕ ಗಣೇಶ್ ಅರೆಸ್ಟ್

ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕಾಂಗ್ರೆಸ್‌ನಿಂದ ಅಮಾನತುಗೊಂಡಿರುವ ಕಂಪ್ಲಿ ಶಾಸಕನನ್ನು ಬಂಧಿಸಲಾಗಿದೆ.

Congress suspended MLA JN Ganesh arrested In  Colleague Assaulting Case
Author
Bengaluru, First Published Feb 20, 2019, 3:06 PM IST

ಬೆಂಗಳೂರು, (ಫೆ.20): ಶಾಸಕ ಆನಂದ್ ಸಿಂಗ್ ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕಂಪ್ಲಿ ಶಾಸಕ ಜೆ.ಎನ್ .ಗಣೇಶ್ ಬಂಧನವಾಗಿದೆ.

ರಾಮನಗರ ಪೊಲೀಸರು ಶಾಸಕ ಕಂಪ್ಲಿ ಗಣೇಶ್​​ರನ್ನು ಹೊರರಾಜ್ಯದಲ್ಲಿ ಅರೆಸ್ಟ್ ಮಾಡಿರುವುದು ಪಕ್ಕಾ. ಆದ್ರೆ, ಯಾವ ಸ್ಥಳದಲ್ಲಿ ಬಂಧಿಸಿದ್ದಾರೆ ಎನ್ನುವುದು ಖಚಿತ ಮಾಹಿತಿ ಇಲ್ಲ.

ಇಂದು (ಬುಧವಾರ) ರಾತ್ರಿ ವೇಳೆಗೆ ಗಣೇಶ್​​ರನ್ನು ರಾಮನಗರಕ್ಕೆ ಕರೆತರುವ ಸಾಧ್ಯತೆ ಇದೆ. ಬಳಿಕ, ಕೋರ್ಟ್​​ ಮುಂದೆ ಹಾಜರುಪಡಿಸುತ್ತಾರೆ ಎಂದು ತಿಳಿದುಬಂದಿದೆ.

 ಜನವರಿ 20 ರಂದು ಈಗಲ್ಟನ್ ರೆಸಾರ್ಟ್‌ನಲ್ಲಿ ಕಂಪ್ಲಿ ಶಾಸಕ ಗಣೇಶ್ ಅವರು ವಿಜಯನಗರ (ಹೊಸಪೇಟೆ)  ಶಾಸಕ ಆನಂದ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು.

ಘಟನೆಯ ನಂತ್ರ, ಗಣೇಶ್​ ತಲೆ ಮರೆಸಿಕೊಂಡಿದ್ದರು. ಈ ನಡುವೆ, ನಿನ್ನೆ (ಮಂಗಳವಾರ) ಜನಪ್ರತಿನಿಧಿಗಳ ವಿಶೇಷ ಕೋರ್ಟ್​​​ನಲ್ಲಿ ತಮ್ಮ ವಕೀಲರ ಮೂಲಕ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಾಪಸ್​ ತೆಗೆದುಕೊಂಡಿದ್ದರು.

 

Follow Us:
Download App:
  • android
  • ios