ಇದು ಪಿಎಂ ಕೇರ್ಸ್ ಅಲ್ಲ, 'ಕಾಂಗ್ರೆಸ್ ಕೇರ್ಸ್' ಅಂಬ್ಯುಲೆನ್ಸ್ ಸೇವೆ ಆರಂಭ
ಅದೆಷ್ಟೋ ಜನರು ಆಕ್ಸಿಜನ್, ಆಸ್ಪತ್ರೆಯ ಬೆಡ್, ಅಂಬ್ಯುಲೆನ್ಸ್ ಸಿಗದೆ ನರಳಾಡುತ್ತಿದ್ದಾರೆ. ಇದನ್ನು ಮನಗಂಡಿರುವ ಯುವ ಕಾಂಗ್ರೆಸ್ ಘಟಕ ಆಯಂಬುಲೆನ್ಸ್ ಸೇವೆಯನ್ನು ಆರಂಭಿಸಿದೆ.
ಬೆಂಗಳೂರು, (ಏ.30): ಕರ್ನಾಟಕದಲ್ಲಿ ಕೊರೋನಾ ಹಾವಳಿ ಹೆಚ್ಚಾಗಿದ್ದು, ಸೂಕ್ತ ಸಮಯಕ್ಕೆ ಬೆಡ್, ಆಕ್ಸಿಜನ್, ಅಂಬ್ಯುಲೆನ್ಸ್ ಸಿಗದೇ ಕೊರೋನಾ ಸೊಂಕಿತರು ಪರದಾಡುತ್ತಿದ್ದಾರೆ.
ಅದರಲ್ಲೂ ಬೆಂಗಳೂರಂತೂ ಕೊರೋನಾ ಹಾಟ್ಸ್ಪಾಟ್ ಆಗಿದ್ದು, ಪರಿಸ್ಥಿತಿ ಕೈಮೀರಿ ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರ ಸಹಾಯಕ್ಕೆ ರಾಜ್ಯ ಕಾಂಗ್ರೆಸ್ ಮುಂದಾಗಿದೆ.
ಕರುನಾಡಿಗೆ ಬಿಗ್ ಶಾಕ್: ಒಂದೇ ದಿನ ಬರೋಬ್ಬರಿ 48 ಸಾವಿರ ಕೊರೋನಾ ಕೇಸ್
ಹೌದು... ಯುವ ಕಾಂಗ್ರೆಸ್ ಘಟಕ ಅಂಬ್ಯುಲೆನ್ಸ್ ಸೇವೆಯನ್ನು ಆರಂಭಿಸಿದೆ. ಕಾಂಗ್ರೆಸ್ ಕೇರ್ಸ್ ಹೆಸರಿನಲ್ಲಿ ಆರಂಭಿಸಿದ್ದು, ಸಹಾಯವಾಣಿ ಮತ್ತಿತರ ನೆರವುಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ವಿವರಿಸಿದ್ದಾರೆ.
ವಿಡಿಯೋ ಕಾಲ್ ಮೂಲಕ ವಿವರಣೆ ನೀಡಲಾಗಿದೆ. ಈ ವೇಳೆ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಹಾಗೂ ರಾಮಲಿಂಗಾರೆಡ್ಡಿ ಅವರು ಶಿವಕುಮಾರ್ ಜತೆಗಿದ್ದರು.