ರಾಜ್ಯದಲ್ಲಿ ನೆರೆ ಹಾಗೂ ಬರದಿಂದ ಬೆಳೆ ನಷ್ಟ ಹೊಂದಿರುವ ವಿಮಾ ರೈತರಿಗೆ ಡಿಸೆಂಬರ್ ತಿಂಗಳಾಂತ್ಯದ ಒಳಗಾಗಿ ಬೆಳೆ ವಿಮೆ ಹಣ ಪಾವತಿ ಮಾಡಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಭರವಸೆ ನೀಡಿದರು. 

ವಿಧಾನಸಭೆ (ಡಿ.15): ರಾಜ್ಯದಲ್ಲಿ ನೆರೆ ಹಾಗೂ ಬರದಿಂದ ಬೆಳೆ ನಷ್ಟ ಹೊಂದಿರುವ ವಿಮಾ ರೈತರಿಗೆ ಡಿಸೆಂಬರ್ ತಿಂಗಳಾಂತ್ಯದ ಒಳಗಾಗಿ ಬೆಳೆ ವಿಮೆ ಹಣ ಪಾವತಿ ಮಾಡಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಭರವಸೆ ನೀಡಿದರು. ಇದೇ ವೇಳೆ ರೈತರಿಗೆ ಹೆಚ್ಚು ಪ್ರಮಾಣದ ವಿಮೆ ಮೊತ್ತ ಪಾವತಿಯಾಗುವಂತೆ ಮಾಡಲು ಪೂರಕವಾಗಿ ಕೆಲಸ ಮಾಡುವಂತೆಯೂ ಇಲಾಖಾ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.ಪ್ರಶ್ನೋತ್ತರ ವೇಳೆ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ಶರಣು ಸಲಗಾರ, ಬರದಿಂದ ರಾಜ್ಯ ತತ್ತರಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಮ್ಮ ಕ್ಷೇತ್ರದಲ್ಲೂ ಹಿಂದೆ ನೆರೆ ಹಾಗೂ ಈಗ ಬರದಿಂದ ಸಾಕಷ್ಟು ಬೆಳೆ ನಷ್ಟ ಉಂಟಾಗಿದೆ. ಇವರಿಗೆ ಫಸಲ್ ಬಿಮಾ ಯೋಜನೆಯಡಿ ಈವರೆಗೆ ಪರಿಹಾರ ಬಂದಿಲ್ಲ. ಇನ್ನು ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರು ಪ್ರೀಮಿಯಂ ಪಾವತಿ ಮಾಡಿದ್ದಕ್ಕಿಂತ ಕಡಿಮೆ ವಿಮೆ ಹಣ ಬರುವ ಸಾಧ್ಯತೆಯಿದೆ. ಹಿಂದೆ ಇದೇ ರೀತಿ ನಡೆದಿದೆ ಎಂದು ಹೇಳಿದರು.ಇದಕ್ಕೆ ಉತ್ತರಿಸಿದ ಚೆಲುವರಾಯಸ್ವಾಮಿ, ವಿಮೆಗಾಗಿ ರಾಜ್ಯ ಸರ್ಕಾರ ₹450 ಕೋಟಿ ಹಣ ಭರಿಸಿದೆ. ಈಗಾಗಲೇ ಬೆಳೆ ಕಟಾವು ಸಮೀಕ್ಷೆ ಸಂಪೂರ್ಣ ಮುಗಿದಿದ್ದು, ವಿಮಾ ಯೋಜನೆಯಡಿ ಅರ್ಹ ರೈತರಿಗೆ ಮಾಸಾಂತ್ಯಕ್ಕೆ ವಿಮೆ ಹಣ ತಲುಪಲಿದೆ.ಇನ್ನು ವಿಮೆ ಹಣ ಕಡಿಮೆ ಬರಲು ಕೇಂದ್ರದ ಮಾರ್ಗಸೂಚಿ ಕಾರಣ. 

ಬಿಜೆಪಿಗೆ ಸಾಮಾಜಿಕ ನ್ಯಾಯ ಬಗ್ಗೆ ಮಾತಾಡೋ ಹಕ್ಕಿಲ್ಲ: ಸಿಎಂ ಸಿದ್ದರಾಮಯ್ಯ

ಬೆಳೆ ಕಟಾವು ಸಮೀಕ್ಷೆಯ ಲ್ಲಿ ಕೇಂದ್ರ ಸರ್ಕಾರದ ಮಾರ್ಗ ಸೂಚಿಯನ್ವಯ ಹಿಂದಿನ ಏಳು ಸಾಲುಗಳಲ್ಲಿ ಐದು ವರ್ಷಗಳ ಸರಾಸರಿ ಇಳುವರಿಯನ್ನು ಮಾನದಂಡವನ್ನಾಗಿ ಪರಿಗಣಿಸಲಾಗುತ್ತಿದೆ. ಇದನ್ನು ಬದಲಾಯಿಸುವಂತೆ ರಾಜ್ಯ ಸರ್ಕಾರದಿಂದ ಪತ್ರದ ಮೂಲಕ ಹಾಗೂ ಕೇಂದ್ರ ಹಣಕಾಸುಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದರೂ ಸಹ ಈ ಮಾರ್ಗಸೂಚಿಯನ್ನು ಬದಲಾಯಿಸಲು ಕೇಂದ್ರ ಸರ್ಕಾರ ಸಮ್ಮತಿಸಿಲ್ಲ ಎಂದು ಸ್ಪಷ್ಟನೆ ನೀಡಿದರು.ಆದರೂ ರಾಜ್ಯದ ರೈತರ ಹಿತವನ್ನು ಕಾಯ್ದುಕೊಂಡು, ಯಾವುದೇ ತೊಂದರೆಯಾಗದಂತೆ ವಿಶೇಷ ಗಮನಹರಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅವರು ಈ ಜವಾಬ್ದಾರಿ ನಿಭಾಯಿಸಲಿದ್ದಾರೆ ಎಂದರು.