Asianet Suvarna News Asianet Suvarna News

ಬಿಎಸ್‌ವೈ ಸರ್ವಾ​ನು​ಮ​ತದ ಆಯ್ಕೆ, ಬದಲಾವಣೆ ಪ್ರಶ್ನೆಯೇ ಇಲ್ಲ: ರವಿ

ಬಿಎಸ್‌ವೈ ಸರ್ವಾ​ನು​ಮ​ತದ ಆಯ್ಕೆ, ಬದಲಾವಣೆ ಪ್ರಶ್ನೆಯೇ ಇಲ್ಲ: ರವಿ| ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ ಎಳೆದ ಸಚಿವ

CT Ravi Supports Karnataka Chief Minister BS yediyurappa
Author
Bangalore, First Published Oct 9, 2019, 9:22 AM IST

ರಾಮನಗರ[ಅ.09]: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ದೇಶದ ಇತಿಹಾಸದಲ್ಲಿ 75 ವರ್ಷ ವಯಸ್ಸು ದಾಟಿರುವವರಿಗೆ ಅಧಿಕಾರ ಕೊಟ್ಟಿರುವುದು ಯಡಿಯೂರಪ್ಪ ಅವರಿಗೆ ಮಾತ್ರ. ಚುನಾವಣೆ ಪೂರ್ವದಲ್ಲೇ ಯಡಿಯೂರಪ್ಪ ನಮ್ಮ ಮು​ಖ್ಯ​ಮಂತ್ರಿ ಎಂದು ಘೋಷಣೆ ಮಾಡಿದ್ದೆವು ಎಂದು ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿ​ಗಾ​ರ​ರೊಂದಿಗೆ ಮಾತನಾಡಿ, ಯಡಿ​ಯೂ​ರಪ್ಪ ಅವರನ್ನು ನಾವು ಬಹುಮತದಿಂದ ಆಯ್ಕೆ ಮಾಡಿರಲಿಲ್ಲ, ಸರ್ವಾನುಮತದಿಂದ ಆಯ್ಕೆ ಮಾಡಿದ್ದೇವೆ. ಹೀಗಾಗಿ ಯಾವುದೇ ಕಾರಣಕ್ಕೂ ಮುಖ್ಯ​ಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪನವರೇ ಅವಧಿ ಪೂರ್ಣ​ಗೊ​ಳಿ​ಸ​ಬೇ​ಕೆಂಬ ಅಪೇಕ್ಷೆ ಇದೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬದಲಾವಣೆಯ ಗೊಂದಲಗಳಿಗೆ ತೆರೆ ಎಳೆದರು.

‘ಕೈ’ ಒಡೆದ ಮನೆ: ಕಾಂಗ್ರೆಸ್‌ನಲ್ಲಿ ಸರ್ವಾನುಮತವಿಲ್ಲ. ಪ್ರತಿಪಕ್ಷ ಸ್ಥಾನದ ಆಯ್ಕೆಯಲ್ಲಿ ಕಾಂಗ್ರೆಸ್‌ ಒಡೆದ ಮನೆಯಾಗಿದೆ. ಕಾಂಗ್ರೆಸ್ಸಿಗ​ರದು ಹೊಡೆದ ಮನಸ್ಸುಗಳಾಗಿವೆ. ಸಿದ್ದರಾಮಯ್ಯ ಸರ್ವಾನುಮತದ ನಾಯಕರಾಗುವ ಸ್ಥಿತಿಯಲ್ಲಿಲ್ಲ. ಒಂದು ವೇಳೆ ಅವರೇ ವಿಪಕ್ಷ$ನಾಯಕರಾದರೆ, ಒಂದು ಗುಂಪಿನ ನಾಯಕರಾಗುತ್ತಾರೆ ಎಂದರು.

Follow Us:
Download App:
  • android
  • ios