Asianet Suvarna News Asianet Suvarna News

ಮಂಡ್ಯ ಮೈಶುಗರ್‌ ಕಾರ್ಖಾನೆಯನ್ನು ಖಾಸಗೀಕರಣ ಮಾಡುವುದು ಅನಿವಾರ್ಯ ಎಂದ ಡಿಸಿಎಂ

* ಜೆಡಿಎಸ್‌ ಜತೆ ಬಿಜೆಪಿ ಒಳ ಒಪ್ಪಂದ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಡಿಸಿಎಂ
* ಮಂಡ್ಯದಲ್ಲಿ ಮೈಶುಗರ್‌ ಕಾರ್ಖಾನೆ ಬಗ್ಗೆ ಮಾತು
* ಮೇಕೆದಾಟು ನಿಲ್ಲುವುದಿಲ್ಲ ಎಂದ  ಡಾ.ಸಿ.ಎನ್.‌ಅಶ್ವತ್ಥನಾರಾಯಣ
 

DCM Ashwath Narayan reacts On mandya sugar factory rbj
Author
Bengaluru, First Published Jul 7, 2021, 6:45 PM IST

ಬೆಂಗಳೂರು, (ಜುಲೈ.07):  ಮಂಡ್ಯದಲ್ಲಿ ಮೈಶುಗರ್‌ ಕಾರ್ಖಾನೆ ಆರಂಭದ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಇದು ತಪ್ಪೇನೂ ಅಲ್ಲ. ಕಾರ್ಖಾನೆ ಆರಂಭವಾಗಬೇಕು ಎನ್ನುವುದು ಆ ಭಾಗದ ಜನರ ಬಹದಿನಗಳ ಬಯಕೆ. ಆ ನಿಟ್ಟಿನಲ್ಲಿ ಸರಕಾರ ಎಲ್ಲ ಕ್ರಮಗಳನ್ನೂ ಕೈಗೊಳ್ಳಲಿದೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

ರಾಮನಗರದಲ್ಲಿ ಇಂದು (ಬುಧವಾರ) ಮಾಧ್ಯಮಗಳ ಜತೆ ಮಾತನಾಡಿದ ಅವರು, ಮೈಶುಗರ್‌ ಕಾರ್ಖಾನೆಯನ್ನು ಖಾಸಗೀಕರಣ ಮಾಡುವುದು ಅನಿವಾರ್ಯ. ಈವರೆಗೆ ಸರಕಾರದ ಉಸ್ತುವಾರಿಯಲ್ಲಿ ಹೇಗೆ ನಡೆದಿದೆ, ಏನೆಲ್ಲ ಅಧ್ವಾನಗಳು ಆಗಿದ್ದವು ಎಂಬುದು ಎಲ್ಲರಿಗೂ ಗೊತ್ತಿದೆ. ಹೀಗಾಗಿ ಖಾಸಗೀಕರಣವೇ ಉತ್ತಮ ಪರಿಹಾರ. ಈ ಕಾರ್ಖಾನೆ ನಮ್ಮ ರಾಜ್ಯದ ಹೆಮ್ಮೆಯ ಸಂಕೇತ. ಅದನ್ನು ಉಳಿಸಿ ಬೆಳಸಬೇಕು ಎಂದು ಡಿಸಿಎಂ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 

ಮೈಶುಗರ್ ಖಾಸಗೀಕರಣಕ್ಕೆ ಅಸ್ತು ಎಂದ ಸರ್ಕಾರ

ಮೇಕೆದಾಟು ನಿಲ್ಲುವುದಿಲ್ಲ: 
ಆದಷ್ಟು ಬೇಗ ಮೇಕೆದಾಟು ಯೋಜನೆಗೆ ಚಾಲನೆ ನೀಡಲಾಗುವುದು. ಯಾವುದೇ ಕಾರಣಕ್ಕೂ ಈ ಯೋಜನೆಯಿಂದ ಸರಕಾರ ಹಿಂದೆ ಸರಿಯುವುದಿಲ್ಲ. ಹಿಂದೆ ಜಲಸಂಪನ್ಮೂಲ ಖಾತೆ ಸಚಿವರಾಗಿದ್ದ ರಮೇಶ್‌ ಜಾರಕಿಹೊಳಿ ಅವರು ಕೇಂದ್ರದಿಂದ ಎಲ್ಲ ಒಪ್ಪಿಗೆಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಸಣ್ಣಪುಟ್ಟ ಕೆಲಸಗಳಷ್ಟೇ ಬಾಕಿ ಇವೆ. ಮುಂಗಡ ಪತ್ರದಲ್ಲೂ ಯೋಜನೆಯನ್ನು ಪ್ರಸ್ತಾಪ ಮಾಡಲಾಗಿದೆ ಎಂದು ಡಿಸಿಎಂ ಹೇಳಿದರು. 

ತಮಿಳುನಾಡು ಮುಖ್ಯಮಂತ್ರಿಗಳ ಸಹಕಾರ ಪಡೆಯಲು ಸರಕಾರ ಪ್ರಯತ್ನಿಸಿದೆ. ನಮ್ಮ ಪಾಲು ನೀರನ್ನು ಮಾತ್ರ ನಾವು ಬಳಕೆ ಮಾಡಿಕೊಳ್ಳುತ್ತಿದ್ದೇವೆ. ತಮಿಳುನಾಡು ಪಾಳಿನ ನೀರನ್ನು ಯಾವ ಕಾರಣಕ್ಕೂ ರಾಜ್ಯ ತಡೆಯುವುದಿಲ್ಲ ಎಂದರು.

 ಜೆಡಿಎಸ್‌-ಬಿಜೆಪಿ ಒಳ ಒಪ್ಪಂದ ಆರೋಪಕ್ಕೆ ಸ್ಪಷ್ಟನೆ
ಸ್ಥಳೀಯ ಸಂಸ್ಥೆ ಚುನಾವಣೆ ಸೇರಿ ಯಾವುದೇ ವಿಷಯಗಳಲ್ಲೂ ಬಿಜೆಪಿ- ಜೆಡಿಎಸ್‌ ನಡುವೆ ಒಳ ಒಪ್ಪಂದ ಆಗಿಲ್ಲ. ಈ ಬಗ್ಗೆ ಕೇಳಿ ಬರುತ್ತಿರುವ ಮಾತುಗಳು ಆಧಾರ ರಹಿತ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು. 

 ಪ್ರತಿಪಕ್ಷಗಳಿಗೆ,‌ ಮುಖ್ಯವಾಗಿ ಕಾಂಗ್ರೆಸ್‌ಗೆ ಒಳ್ಳೆಯದು ಮಾತಾಡಿ ಅಭ್ಯಾಸವಿಲ್ಲ. ಮಂಡ್ಯ, ಮೈಸೂರು, ರಾಮನಗರ ಸೇರಿ ಯಾವುದೇ ಭಾಗದಲ್ಲಿ ಬಿಜೆಪಿ- ಜೆಡಿಎಸ್‌ ನಡುವೆ ಹೊಂದಾಣಿಕೆ ಇಲ್ಲ. ಎಲ್ಲರಿಗೂ ಗೊತ್ತಿರುವಂತೆ ಜೆಡಿಎಸ್‌ ನಮಗೆ ವಿರೋಧ ಪಕ್ಷ. ಹಾಗೆ ನೋಡಿದರೆ ಒಳಒಪ್ಪಂದಗಳು ಇರುವುದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ಮಾತ್ರ. ಈ ಬಗ್ಗೆ ದೂರುವವರು ಅವೆರಡೂ ಪಕ್ಷಗಳ ಬಗ್ಗೆ ಮಾತನಾಡಬೇಕು ಎಂದು ಹೇಳಿದರು. 

Follow Us:
Download App:
  • android
  • ios