Asianet Suvarna News Asianet Suvarna News

ವಿನಯ್ ಕುಲಕರ್ಣಿ ಅನುಪಸ್ಥಿತಿಯಲ್ಲಿ ಶಕ್ತಿ ಪ್ರದರ್ಶನ: ಶಿವಲೀಲಾ ಕುಲಕರ್ಣಿ ನಾಮಪತ್ರ ಸಲ್ಲಿಕೆ

 ರಾಜ್ಯದಲ್ಲಿ ಪ್ರತಿಷ್ಠೆ ಕಣವಾಯ್ತು ಧಾರವಾಡ ಗ್ರಾಮೀಣ ಕ್ಷೆತ್ರ..!
 ವಿನಯ ಕುಲಕರ್ಣಿ ಅನುಪ ಸ್ಥಿತಿಯಲ್ಲಿ ನಾಮಪತ್ರ ಸಲ್ಲಿಸಿದ ಶಿವಲೀಲಾ ಕುಲಕರ್ಣಿ 
 ಪತಿಯನ್ನು ನೆನೆದು ಕಣ್ಣೀರು ಹಾಕಿದ ಶೀವಲೀಲಾ ಕುಲಕರ್ಣಿ..!

Dharwad Vinay Kulkarni wife Shivleela Kulkarni Nomination Submission sat
Author
First Published Apr 20, 2023, 6:44 PM IST

ವರದಿ : ಪರಮೇಶ್ವರ ಅಂಗಡಿ ಏಷ್ಯಾನೆಟ್ ಸುವರ್ಣ ನ್ಯೂಸ್ 

ಧಾರವಾಡ (ಏ.20): ಅದ್ಧೂರಿ ಮೆರವಣಿಗೆ ಧಾರವಾಡದ ಮುರುಘಾಮಠದಿಂದ ನಿಂತಿದ್ದ ಜನ ಇತ್ತ ಸಿಬಿಟಿವರೆಗೂ ಸಾಗರದಂತೆ ನಿಂತಿತ್ತು. ಅವರ ಮೇಲಿನ ಅಭಿಮಾನಕ್ಕೆ ಜನ ಅವರ ಕಟೌಟ್‌ಗೆ ಕ್ಷೀರಾಭಿಷೇಕವನ್ನೇ ಮಾಡಿದರು. 

ಈ ಅದ್ಧೂರಿ ದೃಶ್ಯ ಕಂಡು ಬಂದದ್ದು ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೆತ್ರದಲ್ಲಿ, ಎಸ್ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿದಿದ್ದು, ಇಂದು ಅವರ ಅನುಪಸ್ಥಿತಿಯಲ್ಲಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರು ಶಕ್ತಿ ಪ್ರದರ್ಶನದೊಂದಿಗೆ ಅಧಿಕೃತವಾಗಿ ವಿನಯ್ ಅವರ ಉಮೇದುವಾರಿಕೆ ಸಲ್ಲಿಸಿದ್ದಾರೆ.ಈ ಉಮೇದುವಾರಿಕೆ ಸಲ್ಲಿಕೆಯ ರ್‍ಯಾಲಿಯಲ್ಲಿ 35 ಸಾವಿರಕ್ಕೂ ಹೆಚ್ಚು ಕಾಂಗ್ರೇಸ್ ಕಾರ್ಯಕರ್ತರು ಭಾಗಿಯಾಗಿದ್ದರು.

ಕರ್ನಾಟ ವಿಧಾನಸಭೆ ಚುನಾವಣೆ: ಕಾಂಗ್ರೆಸ್‌ 224 ಅಭ್ಯರ್ಥಿಗಳ ಪಟ್ಟಿ

ವಿನಯ್‌ ಕುಲಕರ್ಣಿ ಮುಖವಾಡ ಧರಿಸಿಮೆರವಣಿಗೆ:  ಧಾರವಾಡದ ಪ್ರಸಿದ್ಧ ಮುರುಘಾಮಠದಿಂದ ಮೆರವಣಿಗೆ ಮೂಲಕ ಧಾರವಾಡದ ಉಪವಿಭಾಗಾಧಿಕಾರಿ ಕಚೇರಿಗೆ ಬಂದ ಶಿವಲೀಲಾ ಅವರು, ವಿನಯ್ ಅವರ ನಾಮಪತ್ರ ಸಲ್ಲಿಸಿದರು. ವಿನಯ್ ಕುಲಕರ್ಣಿ ಅವರ ಸ್ಪರ್ಧೆಯಿಂದ ಧಾರವಾಡ ಗ್ರಾಮೀಣ ಕ್ಷೇತ್ರ ತೀವ್ರ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ. ವಿನಯ್ ಅವರ ಮೇಲಿನ ಅಭಿಮಾನಕ್ಕಾಗಿ ಅವರ ನಾಮಪತ್ರ ಸಲ್ಲಿಕೆ ವೇಳೆ ಮೂವತ್ತು ಸಾವಿರಕ್ಕೂ ಜನ ಆಗಮಿಸಿ ವಿನಯ್ ಅವರ ಉಮೇದುವಾರಿಕೆಗೆ ಸಾಕ್ಷಿಯಾದರು. ಪ್ರತಿಯೊಬ್ಬರ ಕೈಯಲ್ಲಿ ವಿನಯ್ ಅವರ ಚಿಕ್ಕ ಚಿಕ್ಕ ಕಟೌಟ್‌ಗಳು ರಾರಾಜಿಸುತ್ತಿದ್ದವು. ಪ್ರತಿಯೊಬ್ಬರೂ ವಿನಯ್ ಅವರ ಮುಖವಾಡ ಧರಿಸಿ ವಿನಯ್ ಇಲ್ಲದಿದ್ದರೂ ಅವರಂತೆಯೇ ಗೋಚರಿಸಿ ರ್‍ಯಾಲಿಯಲ್ಲಿ ಗಮನ ಸೆಳೆದರು. 

ತಂದೆಯ ಅನುಪಸ್ಥಿತಿಯಲ್ಲಿ ಮಕ್ಕಳಿಂದ ಮತಯಾಚನೆ: ರಸ್ತೆಯ ಇಕ್ಕೆಲಗಳಲ್ಲೂ ಜನ ನಿಂತು ರ್‍ಯಾಲಿಗೆ ಬೆಂಬಲಿಸಿದರು. ಈ ರ್‍ಯಾಲಿಯಲ್ಲಿ ವಿನಯ್ ಅವರ ಮಕ್ಕಳಾದ ವೈಶಾಲಿ, ದೀಪಾಲಿ ಹಾಗೂ ಹೇಮಂತ್ ಅವರು ಪಾಲ್ಗೊಂಡು ಜನರತ್ತ ಕೈ ಬೀಸಿ ತಮ್ಮ ತಂದೆಯನ್ನು ಬೆಂಬಲಿಸುವಂತೆ ಮನವಿ ಮಾಡಿದರು. ವಿನಯ್ ಅವರು ಕುದುರೆ ಸವಾರಿಯಲ್ಲಿ ಎತ್ತಿದ ಕೈ. ಹೀಗಾಗಿ ಅವರ ಅಭಿಮಾನಿಗಳು ರ್‍ಯಾಲಿಯಲ್ಲಿ ಎರಡು ಕುದುರೆಗಳನ್ನೂ ತಂದು ಗಮನ ಸೆಳೆದರು. ತೆರೆದ ವಾಹನದ ಮೂಲಕ ಶಿವಲೀಲಾ ಅವರು ಮೆರವಣಿಗೆ ನಡೆಸಿದರು. ವಿನಯ್ ಅವರ ಅಭಿಮಾನಿಗಳು ತೆರೆದ ವಾಹನದ ಮೇಲಿದ್ದ ನಾಯಕರ ಮೇಲೆ ಹೂಮಳೆಗರೆದರು. ಅಲ್ಲದೇ ಕ್ರೇನ್ ಮೂಲಕ ಮಾಲಾರ್ಪಣೆ ಹಾಗೂ ವಿನಯ ಕುಲಕರ್ಣಿಯವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದ್ದು ಕಣ್ಮಣ ಸೆಳೆಯಿತು. 

ಡಿಕೆಶಿಗೆ ಜೈಲು ಶಿಕ್ಷೆಯ ಭಯ: ಕನಕಪುರದಲ್ಲಿ ನಾಮಪತ್ರ ಸಲ್ಲಿಸಿದ ಡಿ.ಕೆ. ಸುರೇಶ್

ಮಾಜಿ ಸಿಎಂ ಶೆಟ್ಟರ್‌ ಸಾಥ್: ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಜನ ವಿಕೆ ಬಾಸ್‌ಗೆ ಜೈ ಎನ್ನುವ ಘೋಷಣೆಗಳನ್ನು ಕೂಗಿದರು. ಧಾರವಾಡ ಗ್ರಾಮೀಣ ಕ್ಷೇತ್ರದ ಎಲ್ಲಾ ಹಳ್ಳಿಗಳಿಂದಲೂ ಜನರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಶಿವಲೀಲಾ ಅವರು ಉಪವಿಭಾಗಾಧಿಕಾರಿ ಕಚೇರಿಗೆ ನಾಮಪತ್ರ ಸಲ್ಲಿಸಲು ಬಂದ ವೇಳೆ ಮಾಜಿ ಸಚಿವ ಹಾಗೂ ಕಲಘಟಗಿ ಕಾಂಗ್ರೆಸ್ ಅಭ್ಯರ್ಥಿ ಸಂತೋಷ್ ಲಾಡ್ ಕೂಡ ಅವರಿಗೆ ,ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ ಸಾಥ ನೀಡಿದರು. ನೀಡಿದರು.
ಒಟ್ಟಾರೆ ವಿನಯ್ ಕುಲಕರ್ಣಿ ಅವರ ನಾಮಪತ್ರ ಅದ್ಧೂರಿ ಶಕ್ತಿ ಪ್ರದರ್ಶನದೊಂದಿಗೆ ಸಲ್ಲಿಕೆಯಾಗಿದೆ. ಲಕ್ಷಾಂತರ ಜನ ರ್‍ಯಾಲಿಯಲ್ಲಿ ಪಾಲ್ಗೊಂಡು ರ್‍ಯಾಲಿ ಯಶಸ್ವಿಗೊಳಿಸಿದರು.

ಏಪ್ರಿಲ್‌ 13 ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಏಪ್ರಿಲ್‌ 20 ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದ್ದು, ಏಪ್ರಿಲ್‌ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್‌ 24 ಆಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

Follow Us:
Download App:
  • android
  • ios