ರಾಸಲೀಲೆ ಸಿ.ಡಿ. ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ರಮೇಶ್ ಜಾರಕಿಹೊಳಿಗೆ ಬಿಗ್ ರಿಲೀಫ್
ರಾಷ್ಟ್ರ ಮಟ್ಟದವರೆಗೆ ಸುದ್ದಿಯಾಗಿದ್ದ ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಪ್ರಕರಣಕ್ಕೆ ಮೆಗಾ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ರಮೇಶ್ ಜಾರಕಿಹೊಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಬೆಂಗಳೂರು, (ಮಾ.07): ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ರಮೇಶ್ ಜಾರಕಿಹೊಳಿ CD ಕೇಸ್ಗೆ ಮೆಗಾ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ದೂರುದಾರ ದಿನೇಶ್ ಕಲ್ಲಹಳ್ಳಿ ಅವರು ಯುಟರ್ನ್ ಆಗಿದ್ದಾರೆ.
ಹೌದು.. ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ್ದ ದೂರನ್ನು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಾಪಸ್ ಪಡೆದಿದ್ದಾರೆ.
"
ಮಾರ್ಚ್ 2 ರಂದು ಕಬ್ಬನ್ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ದಿನೇಶ್ ಕಲ್ಲಹಳ್ಳಿ, ಇಂದು (ಭಾನುವಾರ) ದೂರನ್ನು ತಮ್ಮ ವಕೀಲರ ಮೂಲಕ ವಾಪಸ್ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ಇದನ್ನು ಠಾಣೆಯ ಪೊಲೀಸರು ಖಚಿತಪಡಿಸಬೇಕಿದೆ.
ಸಾಹುಕಾರ್ ರಾಸಲೀಲೆ ಸೀಡಿ : ಸಂತ್ರಸ್ತ ಯುವತಿ ಇದ್ದದ್ದು ಪಿಜಿಯಲ್ಲಲ್ಲ, ಇವರ ಮನೆಯಲ್ಲಿ!
ಈ ರಾಸಲೀಲೆ ಸಿ.ಡಿ. ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಅಲ್ಲದೇ ರಮೇಶ್ ಜಾರಕಿಹೊಳಿ ಅವರ ಸಚಿವ ಸ್ಥಾನವನ್ನೂ ಸಹ ನುಂಗಿತ್ತು. ಇದೀಗ ದಿನೇಶ್ ಕಲ್ಲಹಳ್ಳಿ ಬಹುದೊಡ್ಡ ಯೂ-ಟರ್ನ್ ಹೊಡೆದಿದ್ದು, ರಮೇಶ್ ಜಾರಕಿಹೊಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ತಮ್ಮ ವಕೀಲರ ಮುಖಾಂತರ ಪೊಲೀಸ್ ಠಾಣೆಗೆ ದೂರು ಹಿಂಪಡೆಯುವ ಪತ್ರವನ್ನು ದಿನೇಶ್ ರವಾನೆ ಮಾಡಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ದಿನೇಶ್ ಕಲ್ಲಹಳ್ಳಿ ಏಕೆ ಈ ನಿರ್ಧಾರ ಕೈಗೊಂಡಿದ್ದಾರೆ? ಏನಾದ್ರೂ ಬೆದರಿ ಇದ್ಯಾ..? ಎನ್ನುವ ಹಲವು ಪ್ರಶ್ನೆಗಳು ಉದ್ಭವಿಸಿವೆ. ಇನ್ನೂ ಈ ಪ್ರಕರಣದಲ್ಲಿ ಸಿ.ಡಿ.ಯಲ್ಲಿರುವ ಯುವತಿಗಾಗಿ ಪೊಲೀಸರು ಎಲ್ಲಾ ಕಡೆ ಜಾಲಾಡುತ್ತಿದ್ದಾರೆ. ಆದ್ರೆ, ಈ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ.