ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಬೆನ್ನಲ್ಲೇ, ಡಿ.ಕೆ. ಶಿವಕುಮಾರ್  ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಖಚಿತವಾಗಿದೆ. ಈ ಬದಲಾವಣೆಯು ಸರ್ಕಾರ ಮತ್ತು ಕೆಪಿಸಿಸಿ ಹಂತದಲ್ಲಿ ಸಚಿವ ಸಂಪುಟ, ಸಭಾಧ್ಯಕ್ಷ, ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ಹಲವು ಪ್ರಮುಖ ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಚಾಲನೆ..

ಬೆಂಗಳೂರು (ಮೇ.30): ಮುಖ್ಯಮಂತ್ರಿ ಬದಲಾಗುತ್ತಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಸ್ಥಾನ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಸೇರಿದಂತೆ ಸರ್ಕಾರ ಹಾಗೂ ಕೆಪಿಸಿಸಿ ಹಂತದಲ್ಲಿ ಹಲವು ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿದ್ದರಾಮಯ್ಯ(Siddaramaiah) ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಶನಿವಾರ ಕಾಂಗ್ರೆಸ್‌ನ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ್‌(DK Shivakumar) ಆಯ್ಕೆಯಾಗುವುದು ಖಚಿತವಾಗಿದೆ.

ಬಳಿಕ ಶಿವಕುಮಾರ್‌ ಅವರು ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದು, ಈ ವೇಳೆಯೇ ಸಂಪುಟ ಸಚಿವರ ಪ್ರಮಾಣ ವಚನ ಸ್ವೀಕಾರವೂ ನಡೆಯಲಿದೆ.

ನಂತರ ವಿಧಾನಸಭೆ ಸಭಾಧ್ಯಕ್ಷರ ಆಯ್ಕೆ, ಸರ್ಕಾರದ ಮುಖ್ಯಸಚೇತಕರ ನೇಮಕ, ಶಾಸಕಾಂಗ ಪಕ್ಷದ ಕಾರ್ಯದರ್ಶಿ ನೇಮಕ ನಡೆಯಲಿದ್ದು, ಜತೆಗೆ ವಿವಿಧ ನಿಗಮ-ಮಂಡಳಿಗಳಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಲ್ಲೂ ಬದಲಾವಣೆಗಳು ಆಗಲಿವೆ.

ಕೆಪಿಸಿಸಿ ಅಧ್ಯಕ್ಷ(KPCC President)ರಾಗಿರುವ ಡಿ.ಕೆ. ಶಿವಕುಮಾರ್‌ ಅವರು ಸದ್ಯದಲ್ಲೇ ಕೆಪಿಸಿಸಿ ಜವಾಬ್ದಾರಿಗೆ ರಾಜೀನಾಮೆ ನೀಡಲಿದ್ದಾರೆ. ಬಳಿಕ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. 2028ರ ಚುನಾವಣೆ ಗಮನದಲ್ಲಿಟ್ಟುಕೊಂಡು ಕೆಪಿಸಿಸಿ ಕಾರ್ಯಾಧ್ಯಕ್ಷರಲ್ಲೂ ಬದಲಾವಣೆಗಳನ್ನು ಮಾಡಬಹುದು. ಕೆಪಿಸಿಸಿ ಪ್ರಚಾರ ಸಮಿತಿ, ಸಂಘಟನೆ ವಿಭಾಗ, ಸಮನ್ವಯ ಸಮಿತಿ ಹುದ್ದೆಗಳನ್ನು ನೇಮಕದ ಜತೆಗೆ ಕೆಲವು ಜಿಲ್ಲಾ ಘಟಕಗಳೂ ಬದಲಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.