17 ಶಾಸಕರ ಕಾಂಗ್ರೆಸ್ ಸೇರ್ಪಡೆ ವಿಚಾರದಲ್ಲಿ ಈಗ ಡಿಕೆಶಿ ಮೌನ
- ಬಿಜೆಪಿಗೆ ಪಕ್ಷಾಂತರ ಮಾಡಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣರಾದ 17 ಮಂದಿ ಶಾಸಕರು
- ಕಾಂಗ್ರೆಸ್ಗೆ ಬರುವುದಾದರೆ ಅರ್ಜಿ ಹಾಕಿ ಎಂಬ ಹೇಳಿಕೆ ಭಾರೀ ಚರ್ಚೆಗೆ ಕಾರಣ
- ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇದೀಗ ಆ ವಿಚಾರದಲ್ಲಿ ಮೌನಕ್ಕೆ ಶರಣು
ಬೆಂಗಳೂರು/ಉಡುಪಿ (ಜು.07): ಬಿಜೆಪಿಗೆ ಪಕ್ಷಾಂತರ ಮಾಡಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣರಾದ 17 ಮಂದಿ ಶಾಸಕರು ಮತ್ತೆ ಕಾಂಗ್ರೆಸ್ಗೆ ಬರುವುದಾದರೆ ಅರ್ಜಿ ಹಾಕಿ ಎಂಬ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇದೀಗ ಆ ವಿಚಾರದಲ್ಲಿ ಮೌನಕ್ಕೆ ಶರಣಾಗಿದ್ದಾರೆ.
ಕಾಂಗ್ರೆಸ್ ಕದ ತಟ್ಟುತ್ತಿದ್ದಾರಾ ಬಿಜೆಪಿ ಬಾಂಬೆ ಫ್ರೆಂಡ್ಸ್..? ...
ಕಾಂಗ್ರೆಸ್ ತ್ಯಜಿಸಿ ಬಿಜೆಪಿಗೆ ಸೇರ್ಪಡೆ ಆಗಿರುವ ಶಾಸಕರನ್ನು ಮತ್ತೆ ಪಕ್ಷಕ್ಕೆ ಸ್ವಾಗತಿಸುವ ವಿಚಾರಕ್ಕೆ ಸಂಬಂಧಿಸಿ ಉಡುಪಿಯಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಾನು ಸದ್ಯ ಪ್ರತಿಕ್ರಿಯೆ ನೀಡುವುದಿಲ್ಲ. ಆಮೇಲೆ ಈ ವಿಚಾರ ಮಾತನಾಡೋಣ ಎಂದರು.
ಕಾಂಗ್ರೆಸ್, ಡಿಕೆಶಿ ವಿರುದ್ಧ ಮುಗಿಬಿದ್ದ ಬಿಜೆಪಿ ; ಹಡಗಿಗೆ ತೂತು ಬಿದ್ದಿದೆ
ಕೆಪಿಸಿಸಿ ಅಧ್ಯಕ್ಷನಾಗಿ ನಾನು ಯಾರನ್ನೂ ಅಸ್ಪೃಶ್ಯರಂತೆ ಕಾಣುವುದಿಲ್ಲ. ಪಕ್ಷ ಸೇರಬಯಸುವ ಬಿಜೆಪಿ ಶಾಸಕರು ಅರ್ಜಿ ಹಾಕಿಕೊಳ್ಳಲಿ. ರಾಜಕೀಯ ನಿಂತ ನೀರಲ್ಲ, ರಾಜಕಾರಣ ಯಾವಾಗಲೂ ಬದಲಾಗುತ್ತಿರುತ್ತದೆ ಎಂದು ಡಿ.ಕೆ.ಶಿವಕುಮಾರ್ ಶುಕ್ರವಾರ ಹೇಳಿದ್ದರು. ಈ ಮೂಲಕ ಬಿಜೆಪಿಗೆ ಪಕ್ಷಾಂತರ ಮಾಡಿ ಸಮ್ಮಿಶ್ರ ಸಕಾರ ಪತನಕ್ಕೆ ಕಾರಣರಾದ 17 ಮಂದಿ ಶಾಸಕರು ಮತ್ತೆ ಕಾಂಗ್ರೆಸ್ಗೆ ಬರುವುದಾದರೆ ತಾವು ಮುಕ್ತ ಮನಸ್ಥಿತಿ ಹೊಂದಿದ್ದೇನೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಈ ಹೇಳಿಕೆ ಕುರಿತು ಬಿಜೆಪಿ ಮುಖಂಡರಿಂದ ತೀವ್ರ ಟೀಕೆವ್ಯಕ್ತವಾಗಿತ್ತು. ಮುಳುಗುವ ಹಡಗಾದ ಕಾಂಗ್ರೆಸ್ ಕನಸು ಕಾಣುತ್ತಿದ್ದು, ಅದನ್ನು ಹತ್ತುವವರು ಯಾರು ಎಂದು ಹಲವು ಮುಖಂಡರು ವ್ಯಂಗ್ಯವಾಡಿದ್ದರು.