ಒಂದೆಡೆ ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆಯ ರಂಗೇರಿದೆ. ಇದರ ಮಧ್ಯೆ ಕೆಲ ಕಡೆ ಸ್ಥಳೀಯ ಸಂಸ್ಥೆ ಚುನಾವಣೆ ಎದುರಾಗಿದ್ದು, ಈ ಬಗ್ಗೆ ಡಿಕೆಶಿ ಚುನಾವಣೆ ಆಯೋಗ ಮತ್ರ ಬರೆದಿದ್ದಾರೆ.

ಬೆಂಗಳೂರು, (ಏ.10): ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಾಮಪತ್ರ ಸಲ್ಲಿಸಲು ರಜಾದಿನವಾದ ಏ.13 ಮತ್ತು 14 ರಂದು ನಾಮಪತ್ರ ಸಲ್ಲಿಕೆಗೆ ಅವಕಾಶ ಮಾಡಿಕೊಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ರಾಜ್ಯ ಚುನಾವಣಾ ಆಯುಕ್ತರಿಗೆ ಮನವಿ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಕುರಿತು ಪತ್ರ ಬರೆದಿರುವ ಅವರು, ರಾಜ್ಯದ 8 ಜಿಲ್ಲೆಗಳ 10 ನಗರ ಸ್ಥಳೀಯ ಸಂಸ್ಥೆಗಳ 266 ವಾರ್ಡ್‌ಗಳಿಗೆ ನಿಗದಿಯಾಗಿರುವ ಚುನಾವಣೆಗೆ ಏ.15 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ನಾಮಪತ್ರ ಸಲ್ಲಿಕೆಗೆ 8 ದಿನ ಕಾಲಾವಕಾಶ ಇದ್ದರೂ ಅದರಲ್ಲಿ 4 ದಿನ ಸಾರ್ವತ್ರಿಕ ರಜಾ ದಿನ ಇರುತ್ತದೆ. ಹೀಗಾಗಿ, ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಳಿಗೆ ನಾಮಪತ್ರ ಸಲ್ಲಿಸಲು ಸಾಕಷ್ಟು ಕಾಲಾವಕಾಶ ದೊರೆಯುವುದಿಲ್ಲ ಎಂದು ಹೇಳಿದ್ದಾರೆ.

ಮಸ್ಕಿಯಲ್ಲಿ ಬಿಜೆಪಿಯಿಂದ ಹಣ ಹಂಚಿಕೆ: ಗಂಭೀರ ಸ್ವರೂಪ ಪಡೆದ ಪ್ರಕರಣ

ಈ ವಿಚಾರ ಸೂಕ್ಷ್ಮವಾಗಿದ್ದು ಏ.13 ಮತ್ತು 14 ರಂದು ಸಹ ನಾಮಪತ್ರ ಸಲ್ಲಿಕೆಗೆ ಅವಕಾಶ ಮಾಡಿಕೊಡಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ. 1 ಮಹಾನಗರ ಪಾಲಿಕೆ, 5 ನಗರಸಭೆ, 2 ಪುರಸಭೆ, 2 ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ದಿನಾಂಕ ನಿಗದಿಯಾಗಿದೆ.