ಶಾಸಕ ಜಮೀರ್ಗೆ ಕೊಲೆ ಬೆದರಿಕೆ: ಜೆಡಿಎಸ್ ವಕ್ತಾರನ ವಿರುದ್ಧ ಕೇಸ್ ಬುಕ್
* ಜೆಡಿಎಸ್ ವಕ್ತಾರ ನರಸಿಂಹಮೂರ್ತಿ ವಿರುದ್ಧ ಎಫ್ ಐ ಆರ್ ದಾಖಲು.
* ಶಾಸಕ ಜಮೀರ್ ಅಹಮದ್ ಗೆ ಕೊಲೆ ಬೆದರಿಕೆ ಹಾಕಿದ್ದರೆನ್ನಲಾದ ಪ್ರಕರಣದಲ್ಲಿ ಎಫ್ ಐ ಆರ್.
* ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಬೆಂಗಳೂರು, (ಆ.25): ನಗರದ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ಗೆ ಕೊಲೆ ಬೆದರಿಕೆ ಹಾಕಿರುವ ಆರೋಪದ ಮೇಲೆ ಜೆಡಿಎಸ್ ವಕ್ತಾರನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಜೆಡಿಎಸ್ ವಕ್ತಾರ ನರಸಿಂಹ ಮೂರ್ತಿ ವಿರುದ್ಧ ದೂರು ದಾಖಲಾಗಿದೆ. ಹೆಚ್ಡಿಕೆ ಗಜಪಡೆ ಎಂಬ ಫೇಸ್ಬುಕ್ ಅಕೌಂಟ್ನಲ್ಲಿ ಭದ್ರತೆ ಇದ್ದರೂ ಹಲ್ಲೆ ಮಾಡಿ, ಹತ್ಯೆ ಮಾಡುತ್ತೇವೆ ಎಂದು ಜಮೀರ್ ಅಹ್ಮದ್ ಖಾನ್ಗೆ ವಿಡಿಯೋ ಮೂಲಕ ಕೊಲೆ ಬೆದರಿಕೆ ಹಾಕಿದ್ದರು.
ಗೆಸ್ಟ್ಹೌಸ್ ವಿಷಯಕ್ಕೆ ಎಚ್ಡಿಕೆ - ಜಮೀರ್ ಗಲಾಟೆ
ಜೊತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ನವೀನ್ ಗೌಡ ಎಂಬುವವರು ಜೆಡಿಎಸ್ ವಕ್ತಾರ ನರಸಿಂಹ ಮೂರ್ತಿ ವಿರುದ್ಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಗೆಸ್ಟ್ ಹೌಸ್ ಖಾಲಿ ಮಾಡಿಸುವ ವಿಚಾರದಲ್ಲಿ ಜಮೀರ್ ಮತ್ತು ಕುಮಾರಸ್ವಾಮಿ ನಡುವೆ ಮಾತಿಗೆ ಮಾತು ಬೆಳೆದಿತ್ತು. ಈ ಸಂಧರ್ಭದಲ್ಲಿ ಜಮೀರ್ ವಿರುದ್ದ ನರಸಿಂಹಮೂರ್ತಿ ವಿಡಿಯೋ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ .
ನವೀನ್ ಗೌಡ ದೂರಿನ ಮೇರೆಗೆ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಜೆಡಿಎಸ್ ವಕ್ತಾರ ನರಸಿಂಹ ಮೂರ್ತಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಮುಂದಿನ ವಿಚಾರಣೆ ಮಾಡಲಿದ್ದಾರೆ.