ರಾಜ್ಯದಲಿ ಮೋದಿ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ಮೊನ್ನೆ ಕಲಬುರಗಿಯಲ್ಲಿ ಚುನಾವಣಾ ಪ್ರಚಾರ ಮಾಡಿದ್ದರು. ಮೋದಿಯವರು ಕೇವಲ ಚುನಾವಣೆಗೆ ಮಾತ್ರ ಕೆಲಸ ಮಾಡಲ್ಲ. ದೇಶಕ್ಕಾಗಿ ಒಂದು ದಿನವೂ ವಿಶ್ರಾಂತಿ ಪಡೆಯದೆ ಕೆಲಸ ಮಾಡುತ್ತಿದ್ದಾರೆ ಎಂದು ಗುಣಗಾನ ಮಾಡಿದ ಯಡಿಯೂರಪ್ಪ 

ಶಿವಮೊಗ್ಗ(ಮಾ.19): ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟದಿಂದ 28 ಅಭ್ಯರ್ಥಿಗಳನ್ನೂ ಗೆಲ್ಲಿಸಿಕೊಂಡು ನಿಮ್ಮನ್ನು ನೋಡಲು ದೆಹಲಿಗೆ ಬರುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಪ್ರಧಾನಿ ಮೋದಿಗೆ ಭರವಸೆ ನೀಡಿದರು.

Add Asianetnews Kannada as a Preferred SourcegooglePreferred

ನಗರದಲ್ಲಿ ಸೋಮವಾರ ನಡೆದ ಮೋದಿ ಅವರ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ದೂರವಾಣಿ ಕರೆ ಮಾಡಿದ್ದರು. ನಾನು ಕೂಡ ಶಿವಮೊಗಕ್ಕೆ ಬರುತ್ತೇನೆ. ಎಲ್ಲ ಕಡೆ ಪ್ರಚಾರ ಮಾಡಿ ಅಭ್ಯರ್ಥಿಗಳನ್ನು ಗೆಲ್ಲಿಸೋಣ ಎಂದು ಹೇಳಿದ್ದಾರೆ. ಬಿಜೆಪಿ-ಜೆಡಿಎಸ್‌ ಪಕ್ಷಗಳು ಒಟ್ಟಿಗೆ ಸೇರಿ 28 ಕ್ಷೇತ್ರಗಳನ್ನೂ ಗೆಲ್ಲಲಿದ್ದೇವೆ ಎಂದರು.

ಕಾಂಗ್ರೆಸ್‌ ಸರ್ಕಾರದ ಆಡಳಿತದಿಂದ ಜನರು ಹತಾಶ: ಕರ್ನಾಟಕದ ಮನಸ್ಥಿತಿಯನ್ನು ನಾನು ಕಂಡೆ, ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರನ್ನು ಹಿಂದಿ ಭಾಷೆಯಲ್ಲೇ ಸ್ವಾಗತಿಸಿ, ಹಾಡಿ ಹೊಗಳಿದ ಯಡಿಯೂರಪ್ಪ, ರಾಜ್ಯದಲಿ ಮೋದಿ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ಮೊನ್ನೆ ಕಲಬುರಗಿಯಲ್ಲಿ ಚುನಾವಣಾ ಪ್ರಚಾರ ಮಾಡಿದ್ದರು. ಮೋದಿಯವರು ಕೇವಲ ಚುನಾವಣೆಗೆ ಮಾತ್ರ ಕೆಲಸ ಮಾಡಲ್ಲ. ದೇಶಕ್ಕಾಗಿ ಒಂದು ದಿನವೂ ವಿಶ್ರಾಂತಿ ಪಡೆಯದೆ ಕೆಲಸ ಮಾಡುತ್ತಿದ್ದಾರೆ ಎಂದು ಗುಣಗಾನ ಮಾಡಿದರು.

ದೇಶದ ಗಡಿ ಕಾಯುವ ರಕ್ಷಣಾ ವ್ಯವಸ್ಥೆ ಜೊತೆಗೆ ಕಿಸಾನ್ ಸಮ್ಮಾನ್ ಮೂಲಕ ರೈತರಿಗೆ 6 ಸಾವಿರ ರು. ಕೊಡುತ್ತಿದ್ದಾರೆ. ನಾನು ಅಧಿಕಾರದಲ್ಲಿ ಇದ್ದಾಗ ಕೇಂದ್ರದಿಂದ 6 ಸಾವಿರ ರು. ಜೊತೆಗೆ ರಾಜ್ಯ ಸರ್ಕಾರದಿಂದ 4 ಸಾವಿರ ರು. ಸೇರಿಸಿ 10 ಸಾವಿರ ರು. ಕೊಡುತ್ತಿದ್ದೇವು. ಆದರೆ, ಈಗ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಅದನ್ನು ನಿಲ್ಲಿಸಿದ್ದಾರೆ ಎಂದು ಆರೋಪಿಸಿದರು.