Asianet Suvarna News Asianet Suvarna News

ಅರುಣ್‌ ಸಿಂಗ್‌ ಭೇಟಿಯಾದ ಜಗದೀಶ್‌ ಶೆಟ್ಟರ್‌: ಕಾರಣ?

*   ಹುಬ್ಬಳ್ಳಿ-ಧಾರವಾಡ ಪಾಲಿಕೆ ಫಲಿತಾಂಶ ಚರ್ಚೆ
*   ಬಿಜೆಪಿ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಏರುವುದು ಖಚಿತ
*   ಚುನಾವಣೆ ಫಲಿತಾಂಶದ ಕುರಿತು ಮಾಹಿತಿ ನೀಡಿದ ನಾಯಕರು 

Former CM Jagadish Shettar met Arun Singh grg
Author
Bengaluru, First Published Sep 8, 2021, 8:05 AM IST

ನವದೆಹಲಿ(ಸೆ.08): ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಹಾಗೂ ಜವಳಿ ಸಚಿವ ಶಂಕರ ಮುನೇನಕೊಪ್ಪ ಅವರು ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರನ್ನು ದೆಹಲಿಯಲ್ಲಿ ಮಂಗಳವಾರ ಭೇಟಿಯಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ವಿಚಾರವಾಗಿ ಚರ್ಚೆ ನಡೆಸಿದ್ದಾರೆ. 

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿರುವ ಬಿಜೆಪಿ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಏರುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಿದ ಶೆಟ್ಟರ್‌ ಹಾಗೂ ಮುನೇನಕೊಪ್ಪ ಅವರು ದೆಹಲಿಯ ಜಿಆರ್‌ಜಿ ರಸ್ತೆಯಲ್ಲಿರುವ ಅರುಣ್‌ ಸಿಂಗ್‌ ನಿವಾಸಕ್ಕೆ ತೆರಳಿ ಕೆಲಕಾಲ ಮಾತುಕತೆ ನಡೆಸಿದರು. ಚುನಾವಣೆ ಫಲಿತಾಂಶದ ಕುರಿತು ಮಾಹಿತಿ ನೀಡಿದರು. 

ಶಾಕ್ ಕೊಟ್ಟ ಕೋನರೆಡ್ಡಿ, ದೇವೇಗೌಡ್ರಿಗೆ ರಾಜೀನಾಮೆ ಸಲ್ಲಿಕೆ

ಈ ವಿಚಾರವಾಗಿ ನಂತರ ಸುದ್ದಿಗಾರರ ಜತೆಗೆ ಮಾತನಾಡಿದ ಶೆಟ್ಟರ್‌, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮಗಳ ಆರತಕ್ಷತೆ ಹಿನ್ನೆಲೆಯಲ್ಲಿ ದೆಹಲಿಗೆ ಬಂದಿದ್ದೇವೆ. ಹುಬ್ಬಳ್ಳಿ-ಧಾರವಾಡ ಚುನಾವಣೆ ಫಲಿತಾಂಶ ವಿಚಾರವಾಗಿ ಚರ್ಚೆ ನಡೆಸಿದ್ದೇವೆ. ಇದನ್ನು ಹೊರತುಪಡಿಸಿ ಬೇರಿನ್ಯಾವ ರಾಜಕೀಯ ವಿಚಾರವೂ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.
 

Follow Us:
Download App:
  • android
  • ios