9 ದಿನ ಅಜ್ಞಾತವಾಸದ ಬಳಿಕ ರಮೇಶ್ ಜಾರಕಿಹೊಳಿ ಕೊನೆಗೂ ಪ್ರತ್ಯಕ್ಷ
ಮಂತ್ರಿ ಸ್ಥಾನ ಕಿತ್ತುಕೊಂಡಿದ್ದರಿಂದ ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡು 9 ದಿನದ ಅಜ್ಞಾತವಾಸದ ಬಳಿಕ ರಮೇಶ್ ಜಾರಕಿಹೊಳಿ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಹಾಗಾದರೆ ರಮೇಶ್ ಜಾರಕಿಹೊಳಿ ಎಲ್ಲಿದ್ದಾರೆ?
ಬೆಳಗಾವಿ, (ಜ.02): ಸಚಿವ ಸಂಪುಟದಿಂದ ಕೈ ಬಿಟ್ಟ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಸಿಡಿದೆದ್ದಿದ್ದ ರಮೇಶ್ ಜಾರಕಿಹೊಳಿ ಅಜ್ಞಾತ ಸ್ಥಳದಿಂದ ಹೊರಬಂದಿದ್ದಾರೆ.
ಕಾಂಗ್ರೆಸ್ ನಾಯಕರ ನಡೆಗೆ ಮುನಿಸಿಕೊಂಡು ಯಾರ ಸಂಪರ್ಕಕ್ಕೂ ಸಿಗದೆ ಅಜ್ಞಾತ ಸ್ಥಳದಿಂದ ರಮೇಶ್ ಜಾರಕಿಹೊಳಿ ಅವರು ಮೈತ್ರಿ ಸರ್ಕಾರವನ್ನು ನಡುಗಿಸಿದ್ದರು. ಆದ್ರೆ ಇಂದು [ಬುಧವಾರ] ರಮೇಶ್ ಜಾರಕಿಹೊಳಿ ಅವರು ತಮ್ಮ ಗೋಕಾಕ್ ನಿವಾಸದಲ್ಲಿ ದಿಢೀರ್ ಪ್ರತ್ಯಕ್ಷರಾಗಿದ್ದಾರೆ.
7 ದಿನವಾದರೂ ರಮೇಶ್ ಸುಳಿವಿಲ್ಲ; ‘ಮೈತ್ರಿ’ಗೆ ನಿದ್ದೆಯಿಲ್ಲ?
ಕಳೆದ 9 ದಿನಗಳಿಂದ ನಿಗೂಢ ನಡೆ ಕಾಯ್ದುಕೊಂಡಿದ್ದ ರಮೇಶ್ ಎಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ? ಎಂಬ ಯಾವ ಮಾಹಿತಿ ಕೂಡ ಯಾರಿಗೂ ಇರಲಿಲ್ಲ. ಮೂಲಗಳ ಪ್ರಕಾರ ದೆಹಲಿಯಲ್ಲಿ ಬೀಡುಬಿಟ್ಟಿದ್ದರು ಎಂದು ಹೇಳಲಾಗಿತ್ತು.
ತಂದೆಯ ಶ್ರದ್ಧಾಂಜಲಿಗೂ ಗೈರಾದ ರಮೇಶ್ ಜಾರಕಿಹೊಳಿ ಎಲ್ಲಿ..?
ಅಷ್ಟೇ ಅಲ್ಲದೇ ರಮೇಶ್ ಜಾರಕಿಹೊಳಿ ದೆಹಲಿಯಲ್ಲಿಯೇ ಠಿಕಾಣಿ ಹೂಡಿ ಮೈತ್ರಿ ಸರ್ಕಾರವನ್ನು ಕೆಡುವಲು ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂಬ ಸುದ್ದಿಗಳು ಕೂಡ ರಾಜ್ಯ ರಾಜಕಾರಣದಲ್ಲಿ ಹಬ್ಬಿದ್ದವು.