ಕರ್ನಾಟಕ ರಾಜ್ಯ ರಾಷ್ಟ್ರದ್ರೋಹಿಗಳ ತಾಣವಾಗುತ್ತಿದೆ. ಪಾಕಿಸ್ತಾನ ಪರ ಘೋಷಣೆ, ಬಾಂಬ್ ಬ್ಲಾಸ್ಟ್ ರಾಜ್ಯದಲ್ಲಿ ಮಾಮೂಲಿಯಾಗಿರುವುದು ರಾಜ್ಯದ ಜನತೆಗೆ ಅಪಮಾನ. ಇಂತವರಿಗೆ ಬೆಂಬಲ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ   

ಶಿವಮೊಗ್ಗ(ಮಾ.07):  ಮಲ್ಲಿಕಾರ್ಜುನ ಖರ್ಗೆಯಂತಹವರಿಗೆ ಪ್ರಿಯಾಂಕ್‌ ‌ಖರ್ಗೆಯಂತಹ ಮಗ ಹುಟ್ಟಿರುವುದೇ ಅನ್ಯಾಯ ಎಂದು ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಕಿಡಿಕಾರಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಪ್ರಿಯಾಂಕ್‌ ಅವರು ನಾಸೀರ್ ಬೆಂಬಲಿಗರು ಯಾವುದೇ ಕಾರಣಕ್ಕೂ ‘ಪಾಕಿಸ್ತಾನ ಜಿಂದಾಬಾದ್’ ಎಂದು ಕೂಗಿಲ್ಲ ಅಂದಿದ್ದರು. ಎ2 ಆರೋಪಿ ಕುಟುಂಬ ಸಮೇತ ಓಡಿ ಹೋಗಿದ್ದಾನೆ. ಅವನು‌ ಓಡಿ ಹೋಗಲು ಯಾರು ಕಾರಣ? ಪೊಲೀಸರ ವೈಫಲ್ಯವಾ? ರಾಜ್ಯ ಸರ್ಕಾರ ಸಹಕಾರ ಕೊಟ್ಟಿದೆಯಾ? ಎಂದು ಪ್ರಶ್ನಿಸಿದ ಅವರು, ಘೋಷಣೆ ಕೂಗಿಯೇ ಇಲ್ಲ ಎಂದ ಡಿ.ಕೆ.ಶಿವಕುಮಾರ್ ಏನಾದರೂ ಸಹಕಾರ ಕೊಟ್ಟಿದ್ದಾರಾ? ಎಂದು ಹರಿಹಾಯ್ದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

‘ಪಾಕಿಸ್ತಾನ ಜಿಂದಾಬಾದ್’ ಪರವಾಗಿ ಕಾಂಗ್ರೆಸ್‌ನವರು ಇದ್ದರು. ಒಬ್ಬ ಕಾಂಗ್ರೆಸ್ ನಾಯಕರು ಕೂಡ ಖಂಡಿಸಲಿಲ್ಲ. ಇದು ಅವರ ಮನಸ್ಥಿತಿ. ಕೇವಲ ಮುಸ್ಲಿಂರ ಓಟು ಬೇಕು ಎಂಬ ಒಂದೇ ಕಾರಣಕ್ಕೆ ಪಾಕಿಸ್ತಾನ ಪರ ಇರುವ ವ್ಯಕ್ತಿಗಳಿಗೆ ಬೆಂಬಲ ಕೊಡುತ್ತೀವಿ ಎನ್ನುವುದು ನಮ್ಮ ದೌರ್ಭಾಗ್ಯ. ಎಫ್ಎಸ್ಎಲ್ ವರದಿ ಬರಲಿ ಅಂತಿದ್ದರು. ಆದರೆ, ಗೃಹಸಚಿವ ಜಿ. ಪರಮೇಶ್ವರ್ ತುಂಬಾ ಸ್ಪಷ್ಟವಾಗಿ ಪಾಕ್‌ ಪರ ಘೋಷಣೆ ಕೂಗಿದ್ದಾರೆ ಎಂದಿದ್ದರು. ಜಿ.ಪರಮೇಶ್ವರ್‌ ಹಾಗೂ ಸಿಎಂ ಸಿದ್ದರಾಮಯ್ಯನವರು ರಾಷ್ಟ್ರದ್ರೋಹಿಗಳ ರಕ್ಷಣೆ ಮಾಡಲ್ಲ ಅಂದಿದ್ದರು. ಹೀಗಾಗಿ ಅವರಿಬ್ಬರಿಗೂ ಅಭಿನಂದಿಸುತ್ತೇನೆ ಎಂದರು.

ರಾಮೇಶ್ವರಂ ಕೆಫೆ ಸ್ಫೋಟ ಸಿಲ್ಲಿ ಅಟೆಂಪ್ಟ್ ಎಂದ ಸಚಿವ ಶರಣ ಪ್ರಕಾಶ ಪಾಟಿಲ್‌ಗೆ ಈಶ್ವರಪ್ಪ ತಿರುಗೇಟು

ಕರ್ನಾಟಕ ರಾಜ್ಯ ರಾಷ್ಟ್ರದ್ರೋಹಿಗಳ ತಾಣವಾಗುತ್ತಿದೆ. ಪಾಕಿಸ್ತಾನ ಪರ ಘೋಷಣೆ, ಬಾಂಬ್ ಬ್ಲಾಸ್ಟ್ ರಾಜ್ಯದಲ್ಲಿ ಮಾಮೂಲಿಯಾಗಿರುವುದು ರಾಜ್ಯದ ಜನತೆಗೆ ಅಪಮಾನ. ಇಂತವರಿಗೆ ಬೆಂಬಲ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.