ಗ್ಯಾರಂಟಿ ಈಡೇರಿಸಲು ಕುಂಟು ನೆಪದ ಷರತ್ತು: ರಾಮುಲು ಕಿಡಿ
ಕಾಂಗ್ರೆಸ್ ಸುಳ್ಳು ಹೇಳಿಕೊಂಡು ಜನರ ದಿಕ್ಕು ತಪ್ಪಿಸುತ್ತಿದೆ. ಗ್ಯಾರಂಟಿ ಆಶ್ವಾಸನೆಗಳ ಮೂಲಕ ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದಿದ್ದಾರೆ. ಹೀಗಾಗಿ ನಾವು ಸೋಲು ಅನುಭವಿಸಬೇಕಾಯಿತು. ಮುಂದಿನ ದಿನದಲ್ಲಿ ಮತ್ತೆ ಪುಟಿದೇಳುತ್ತೇವೆ. ಆಶ್ವಾಸನೆಗಳನ್ನು ಈಡೇರಿಸದಿದ್ದರೆ ಮಹಿಳೆಯರು ರೊಚ್ಚಿಗೇಳಲಿದ್ದಾರೆ. ಈಡೇರಿಸಲು ಸಾಧ್ಯವಾಗದಿದ್ದರೆ ಸುಳ್ಳು ಆಶ್ವಾಸನೆ ಯಾಕೆ ಕೊಡಬೇಕು ಎಂದು ಕಿಡಿಕಾರಿದ ಶ್ರೀರಾಮುಲು.
ಬೆಂಗಳೂರು(ಮೇ.28): ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಆಶ್ವಾಸನೆಗಳು ಬಿಜೆಪಿಯ ಸೋಲಿಗೆ ಕಾರಣವಾಗಿದ್ದು, ಗ್ಯಾರಂಟಿಗಳನ್ನು 24 ಗಂಟೆಯೊಳಗೆ ಈಡೇರಿಸುವ ಭರವಸೆ ನೀಡಿ ಈಗ ಅಧಿಕಾರಕ್ಕೆ ಬಂದ ಮೇಲೆ ಕುಂಟುನೆಪ ಹೇಳಿ ಷರತ್ತುಗಳನ್ನು ಹಾಕುತ್ತಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಟೀಕಾಪ್ರಹಾರ ನಡೆಸಿದ್ದಾರೆ.
ಶನಿವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಸುಳ್ಳು ಹೇಳಿಕೊಂಡು ಜನರ ದಿಕ್ಕು ತಪ್ಪಿಸುತ್ತಿದೆ. ಗ್ಯಾರಂಟಿ ಆಶ್ವಾಸನೆಗಳ ಮೂಲಕ ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದಿದ್ದಾರೆ. ಹೀಗಾಗಿ ನಾವು ಸೋಲು ಅನುಭವಿಸಬೇಕಾಯಿತು. ಮುಂದಿನ ದಿನದಲ್ಲಿ ಮತ್ತೆ ಪುಟಿದೇಳುತ್ತೇವೆ. ಆಶ್ವಾಸನೆಗಳನ್ನು ಈಡೇರಿಸದಿದ್ದರೆ ಮಹಿಳೆಯರು ರೊಚ್ಚಿಗೇಳಲಿದ್ದಾರೆ. ಈಡೇರಿಸಲು ಸಾಧ್ಯವಾಗದಿದ್ದರೆ ಸುಳ್ಳು ಆಶ್ವಾಸನೆ ಯಾಕೆ ಕೊಡಬೇಕು ಎಂದು ಕಿಡಿಕಾರಿದರು.
ಮುಂದಿನ ಕ್ಯಾಬಿನೆಟ್ನಲ್ಲಿ ಗ್ಯಾರಂಟಿಗಳ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ: ಸಿಎಂ ಸಿದ್ದರಾಮಯ್ಯ
ಷರತ್ತುಗಳನ್ನು ಹಾಕಿದರೆ ಯಾರಿಗೆ ಉಪಯೋಗವಾಗುತ್ತದೆ? ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದಿದ್ದಾರೆ. ಮುಂದಿನ ದಿನದಲ್ಲಿ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ. ಜೀವನದಲ್ಲಿ ಸೋಲು ಇಲ್ಲದ ನಾವು ಇಂದು ಸೋತಿದ್ದೇವೆ. ಸುಳ್ಳು ಆಶ್ವಾಸನೆಗಳ ಕಾರಣ ನಮಗೆ ಸೋಲಾಗಿದೆ. ಈ ಸರ್ಕಾರ ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದ ಸರ್ಕಾರವಾಗಿದೆ ಎಂದು ವಾಗ್ದಾಳಿ ನಡೆಸಿದರು.