ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಮಾಜಿ ಶಾಸಕ ಜೀವರಾಜ್ ನೇಮಕ?
ಎಸ್.ಆರ್.ವಿಶ್ವನಾಥ್ ಬಿಡಿಎ ಅಧ್ಯಕ್ಷರನ್ನಾಗಿ ನೇಮಕ| 2018ರ ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿದ್ದ ಜೀವರಾಜ್| ಯಡಿಯೂರಪ್ಪಗೆ ಪರಮಾಪ್ತರಾಗಿರುವ ಜೀವರಾಜ್|
ಬೆಂಗಳೂರು(ಡಿ.18): ಮಾಜಿ ಶಾಸಕ ಡಿ.ಎನ್.ಜೀವರಾಜ್ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿಕೊಳ್ಳುವ ಸಾಧ್ಯತೆ ಇದೆ.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿದ್ದ ಶಾಸಕ ಎಸ್.ಆರ್.ವಿಶ್ವನಾಥ್ ಅವರನ್ನು ಇತ್ತೀಚೆಗೆ ಬಿಡಿಎ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಆ ಸ್ಥಾನವು ತೆರವಾಗಿದೆ. ಹೀಗಾಗಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ಡಿ.ಎನ್.ಜೀವರಾಜ್ ಅವರನ್ನು ನೇಮಕ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.
ಪಕ್ಷಕ್ಕೆ ಮುಜುಗರ ತರುವ ಹೇಳಿಕೆ: ಬಿಜೆಪಿ ನಾಯಕನಿಂದಲೇ ಯತ್ನಾಳ್ಗೆ ಖಡಕ್ ಎಚ್ಚರಿಕೆ..!
2018ರ ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿರುವ ಜೀವರಾಜ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪರಮಾಪ್ತರಾಗಿರುವ ಕಾರಣ ಮತ್ತೆ ಅಧಿಕಾರ ನೀಡುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.