ಸುಧಾಕರ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದ ಮಾಜಿ ಶಾಸಕ ಇಂದು (ಸೋಮವಾರ) ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದರು.

ಬೆಂಗಳೂರು, (ಡಿ.07): ಬಿಜೆಪಿಗೆ ಸೇರ್ಪಡೆಯಾದ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ರಾಜಣ್ಣ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.

Add Asianetnews Kannada as a Preferred SourcegooglePreferred

ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರ ನೇತೃತ್ವದಲ್ಲಿ ನಿನ್ನೆ (ಭಾನುವಾರ) ಚಿಕ್ಕಬಳ್ಳಾಪುರದಲ್ಲಿಯೇ ಸೇರ್ಪಡೆಯಾಗಿದ್ದರು. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರೊಂದಿಗೆ ತೆರಳಿ ಸಿಎಂ ಬಿಎಸ್‌ವೈ ಅವರನ್ನ ಭೇಟಿ ಮಾಡಿದರು. 

ಕಾಂಗ್ರೆಸ್‌ಗೆ ಬಿಗ್ ಶಾಕ್: ರಾಜಕೀಯ ನಿವೃತ್ತಿ ಘೋಷಿಸಿದ ಕರ್ನಾಟಕದ ಕೈ ಹಿರಿಯ ನಾಯಕ

ಈ ವೇಳೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಶಾಸಕ ಎಂ.ರಾಜಣ್ಣ ಅವರನ್ನ ಸಿಎಂ ಯಡಿಯೂರಪ್ಪ ಅಭಿನಂದಿಸಿದರು. ಅಲ್ಲದೇ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಜನಸೇವೆ ಮಾಡಿ ಪಕ್ಷ ಸಂಘಟನೆ ಮಾಡಬೇಕೆಂದು ಸೂಚಿಸಿದರು.

ಈ ಸಂದರ್ಭದಲ್ಲಿ ಅಬ್ಲೂಡು ಗ್ರಾಪಂ ಮಾಜಿ ಅಧ್ಯಕ್ಷ ಕೆ.ಎಸ್.ಕನಕಪ್ರಸಾದ್,ಕುಂದಲಗುರ್ಕಿ ಗ್ರಾಪಂ ಮಾಜಿ ಉಪಾಧ್ಯಕ್ಷ ಆಂಜಿನಪ್ಪ,ಯುವ ಮುಖಂಡ ಭರತ್ ಮತ್ತಿತರರು ಉಪಸ್ಥಿತರಿದ್ದರು.