ನೀವು ಚನ್ನಪಟ್ಟಣಕ್ಕೆ ಬಂದು ಎದೆ ತಟ್ಟಿಕೊಂಡು ಮಾತಾಡಿದ್ದೀರಿ. ಗೌಡರೆ, ನಿಮ್ಮ ಆರೋಗ್ಯ ಚೆನ್ನಾಗಿರಲಿ, 100 ವರ್ಷ ಚೆನ್ನಾಗಿದೆ. ಹಿರಿಯರಾಗಿ ನೀವು ದೇಶಕ್ಕೆ ಸಲಹೆ ಕೊಡುತ್ತೀರಿ ಎಂದುಕೊಂಡಿದ್ದೆವು. ಆದರೆ, ನಿಮ್ಮ ಮೊಮ್ಮಗನ ಪರ ಮತ ಕೇಳೋಕೆ ಬಂದಿದ್ದೀರಿ ಎಂದ ಮಾಜಿ ಸಂಸದ ಡಿ.ಕೆ.ಸುರೇಶ್

ಚನ್ನಪಟ್ಟಣ(ನ.10): ನನ್ನ ಅಣ್ಣ ಡಿ.ಕೆ.ಶಿವಕುಮಾರ್ 100 ರು. ಗಳಿಗೆ ಯಾರ ಹತ್ತಿರಾನೋ ಇದ್ದರು ಎಂದು ದೇವೇಗೌಡರು ಹೇಳಿದ್ದಾರೆ. ಆದರೆ, ದುಡ್ಡಿಗಾಗಿ ನಮ್ಮ ತಂದೆ-ತಾಯಿ ಯಾರ ಹತ್ತಿರವೂ ನಮ್ಮನ್ನು ಕಳಿಸಿಲ್ಲ. ನನ್ನ ಅಣ್ಣ 23ನೇ ವಯಸ್ಸಿಗೆ ನಿಮ್ಮ ವಿರುದ್ಧ ತೊಡೆ ತಟ್ಟಿ ನಿಂತಿದ್ದವರು. ತೊಡೆ ತಟ್ಟು ನಾನಿದ್ದೇನೆ ಎಂದು ನಮ್ಮ ಅಪ್ಪ ಹೇಳಿದ್ದರು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಅವರಿಗೆ ತಿರುಗೇಟು ನೀಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಾಲೂಕಿನ ಹುಣಸನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ತಿಗಳ ಸಮಾಜದ ಕಾಂಗ್ರೆಸ್ ಬೆಂಬಲಿಗರ ಸಭೆಯಲ್ಲಿ ಅವರು ಮಾತನಾಡಿ ದರು. ದೇವೇಗೌಡರು ಹಿರಿಯರು ಎಂದು ಗೌರವ ಕೊಡುತ್ತಿದ್ದೇವೆ. ಅವರು ಯಾವ ರೀತಿ ಮಾತನಾಡುತ್ತಾರೆ ಎನ್ನುವುದನ್ನು ಜನರು ತಿಳಿದು ಕೊಳ್ಳಬೇಕು ಎಂದು ಹೇಳಿದರು. 

ಹಿಂದೆ ಡಿ.ಕೆ ಸುರೇಶ್ ಅವರೂ ಕಣ್ಣೀರು ಹಾಕಿದ್ರು, ನಾವು ಕೇಳಿದ್ವಾ?: ನಿಖಿಲ್ ಕುಮಾರಸ್ವಾಮಿ

ನೀವು ಚನ್ನಪಟ್ಟಣಕ್ಕೆ ಬಂದು ಎದೆ ತಟ್ಟಿಕೊಂಡು ಮಾತಾಡಿದ್ದೀರಿ. ಗೌಡರೆ, ನಿಮ್ಮ ಆರೋಗ್ಯ ಚೆನ್ನಾಗಿರಲಿ, 100 ವರ್ಷ ಚೆನ್ನಾಗಿದೆ. ಹಿರಿಯರಾಗಿ ನೀವು ದೇಶಕ್ಕೆ ಸಲಹೆ ಕೊಡುತ್ತೀರಿ ಎಂದುಕೊಂಡಿದ್ದೆವು. ಆದರೆ, ನಿಮ್ಮ ಮೊಮ್ಮಗನ ಪರ ಮತ ಕೇಳೋಕೆ ಬಂದಿದ್ದೀರಿ ಎಂದರು.