ಶಾಮನೂರು ಶಿವಶಂಕರಪ್ಪ ಅವರು ಯಾವ ಆಧಾರದಲ್ಲಿ ಹೇಳಿಕೆ ನೀಡಿದ್ದಾರೆ ಎಂಬುದು ಗೊತ್ತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌ಗೆ ಎಲ್ಲ ಜಾತಿಯ ಜನ ಮತ ನೀಡಿದ್ದಾರೆ. ರಾಜ್ಯದ 7 ಕೋಟಿ ಜನಸಂಖ್ಯೆಯಲ್ಲಿ ಶೇ.1ರಷ್ಟು ಮಾತ್ರ ಸರ್ಕಾರಿ ನೌಕರರು ಇದ್ದಾರೆ. ಇನ್ನುಳಿದವರು ಮತದಾರರು. ಹೀಗಾಗಿ ಮತದಾರರಿಗೆ ಆದ್ಯತೆ ನೀಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದ ವಿ.ಎಸ್‌. ಉಗ್ರಪ್ಪ 

ಬಳ್ಳಾರಿ(ಅ.09): ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲು ಎಲ್ಲ ಜಾತಿಯವರು ಮತ ಹಾಕಿದ್ದು, ಮತದಾರರಿಗೆ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ ತಿಳಿಸಿದರು.

Add Asianetnews Kannada as a Preferred SourcegooglePreferred

ರಾಜ್ಯದಲ್ಲಿ ಲಿಂಗಾಯಿತರ ಕಡೆಗಣನೆ ಕುರಿತ ಶಾಮನೂರು ಶೀವಶಂಕರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ಶಾಮನೂರು ಶಿವಶಂಕರಪ್ಪ ಅವರು ಯಾವ ಆಧಾರದಲ್ಲಿ ಹೇಳಿಕೆ ನೀಡಿದ್ದಾರೆ ಎಂಬುದು ಗೊತ್ತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌ಗೆ ಎಲ್ಲ ಜಾತಿಯ ಜನ ಮತ ನೀಡಿದ್ದಾರೆ. ರಾಜ್ಯದ 7 ಕೋಟಿ ಜನಸಂಖ್ಯೆಯಲ್ಲಿ ಶೇ.1ರಷ್ಟು ಮಾತ್ರ ಸರ್ಕಾರಿ ನೌಕರರು ಇದ್ದಾರೆ. ಇನ್ನುಳಿದವರು ಮತದಾರರು. ಹೀಗಾಗಿ ಮತದಾರರಿಗೆ ಆದ್ಯತೆ ನೀಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.

ಶಾಮನೂರು ಸತ್ಯವನ್ನೇ ಹೇಳಿದ್ದಾರೆ, ರಾಜ್ಯ ಸರ್ಕಾರ ಚಿಂತಿಸಲಿ: ಜೋಶಿ

ಸರ್ಕಾರಿ ನೌಕರರಾದವರು ಉದ್ಯೋಗ ಪಡೆದ ಬಳಿಕ ಜಾತಿಯನ್ನು ಮರೆಯುತ್ತಾರೆ. ಜಾತಿ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ವೈಯಕ್ತಿಕ ಹಿತಾಸಕ್ತಿ ಕಡೆ ಗಮನ ಹರಿಸುತ್ತಾರೆ ಎಂದು ಪರೋಕ್ಷವಾಗಿ ಶಾಮನೂರು ಶಿವಶಂಕರಪ್ಪ ಅವರಿಗೆ ಟಾಂಗ್‌ ನೀಡಿದರು.