ಎರಡು ತಿಂಗಳಲ್ಲಿ ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಸಿಎಂ ಸಿದ್ದರಾಮಯ್ಯ  

ಬೆಂಗಳೂರು(ಸೆ.11): ಮುಡಾ ಪ್ರಕರಣದಲ್ಲಿ ಸಿಎಂ ಇಕ್ಕಟ್ಟಿಗೆ ಸಿಲುಕಿಸಿ, ರಾಜೀ ನಾಮೆಗೆ ಪಟ್ಟು ಹಿಡಿದಿರುವ ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್‌ ತಂತ್ರಕ್ಕೆ ಪ್ರತಿತಂತ್ರವಾಗಿ ವಿಪಕ್ಷಗಳ ಅಧಿಕಾರವಧಿಯ ಹಗರಣಗಳ ತನಿಖೆಗೆ ಡಾ.ಜಿ. ಪರಮೇಶ್ವರ್ ನೇತೃತ್ವದಲ್ಲಿ ಐವರು ಸಚಿವರ ಸಮಿತಿ ರಚಿಸಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಬಗ್ಗೆ ಸಿದ್ದರಾಮಯ್ಯ ಅವರು, ಮಂಗಳವಾರ ಅಧಿಕೃತ ಆದೇಶಿಸಿ ಎರಡು ತಿಂಗಳಲ್ಲಿ ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. 

ಬೆಂಗಳೂರು ರಿಯಲ್ ಎಸ್ಟೇಟ್ ಮಾಫಿಯಾ: ಬಿಡಿಎ, ಬಿಎಂಆರ್‌ಡಿಎ ಹೆಸರಿನಲ್ಲಿ 3,000ಕ್ಕೂ ಅನಧಿಕೃತ ಬಡಾವಣೆ!

ಸಮಿತಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷರಾಗಿದ್ದು, ಸಚಿವರಾದ ಎಚ್.ಕೆ.ಪಾಟೀಲ್, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಎಸ್.ಲಾಡ್‌ರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಮಾತನಾಡಿದ ಸಚಿವ ಪರಂ, ಬಿಜೆಪಿ ಅವಧಿಯ ಹಗರಣಗಳು ಹೊರಬರಲಿವೆ. 2 ತಿಂಗಳೊಳಗೆ ವರದಿ ನೀಡಲು ಹೇಳಿದ್ದಾರೆ. 20 25 ಹಗರಣಗಳ ಪಟ್ಟಿ ಮಾಡಿದ್ದೇವೆ. ದ್ವೇಷದ ರಾಜಕಾರಣ ಬೇಡ ಎಂಬುದು ನಮ್ಮ ಉದ್ದೇಶ ಎಂದರು.