Asianet Suvarna News Asianet Suvarna News

ಯಾರ ಹಂಗಿಲ್ಲದೆ ಸರ್ಕಾರ ರಚಿಸುವ ಶಕ್ತಿ ನೀಡಿ: ನಿಖಿಲ್‌ ಕುಮಾರಸ್ವಾಮಿ

ಜೆಡಿಎಸ್‌ ಪಕ್ಷ ಬಡವರು, ದೀನ ದಲಿತರು, ಅಲ್ಪಸಂಖ್ಯಾತರ ಕಷ್ಟ ಕಾರ್ಪಣ್ಯಗಳನ್ನು ಅರಿತು, ಅವುಗಳ ನಿವಾರಣೆಗಾಗಿ ಪಂಚರತ್ನ ಯೋಜನೆಯನ್ನು ರೂಪಿಸಿದೆ.  

Give Power to form Government without Anyones help Says Nikhil Kumaraswamy gvd
Author
First Published Feb 14, 2023, 1:00 AM IST

ತುಮಕೂರು (ಫೆ.14): ಜೆಡಿಎಸ್‌ ಪಕ್ಷ ಬಡವರು, ದೀನ ದಲಿತರು, ಅಲ್ಪಸಂಖ್ಯಾತರ ಕಷ್ಟ ಕಾರ್ಪಣ್ಯಗಳನ್ನು ಅರಿತು, ಅವುಗಳ ನಿವಾರಣೆಗಾಗಿ ಪಂಚರತ್ನ ಯೋಜನೆಯನ್ನು ರೂಪಿಸಿದೆ. ಇವುಗಳು ಅನುಷ್ಠಾನಕ್ಕೆ ಬರಬೇಕೆಂದರೆ ತಾವೆಲ್ಲರೂ ಜೆಡಿಎಸ್‌ ಪಕ್ಷಕ್ಕೆ ಯಾರ ಹಂಗಿಲ್ಲದೆ ಸರ್ಕಾರ ರಚಿಸುವಂತಹ ಶಕ್ತಿಯನ್ನು ನೀಡಬೇಕೆಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತಿಳಿಸಿದ್ದಾರೆ. ನಗರದ ಜೆಡಿಎಸ್‌ ಜಿಲ್ಲಾ ಕಾರ್ಯಾಲಯದ ಆವರಣದಲ್ಲಿ ಪಕ್ಷದ ವತಿಯಿಂದ ಏರ್ಪಡಿಸಿದ್ದ ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಜನಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಿಜೆಪಿ, ಕಾಂಗ್ರೆಸ್‌ ಪಕ್ಷಗಳ ಸೋಗಲಾಡಿತನದ ರಾಜಕಾರಣದಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ. ಹಾಗಾಗಿ ಬದಲಾವಣೆ ಬಯಸಿದ್ದು, ಯಾರ ಹಂಗಿಲ್ಲದೆ ಜೆಡಿಎಸ್‌ ಸ್ವತಂತ್ರವಾಗಿ ಅಧಿಕಾರಕ್ಕೆ ತರಬೇಕೆಂಬುದು ಎಚ್‌.ಡಿ.ಕೆಯವರ ಹೋರಾಟವಾಗಿದೆ. ಅವರೊಂದಿಗೆ ಪಕ್ಷದ ಇತರೆ ಮುಖಂಡರು ಕೈಜೋಡಿಸಿದ್ದಾರೆ. ಕಾರ್ಯಕರ್ತರು ಸಹ ಚುನಾವಣೆಗೆ ಇನ್ನೂ 70-80 ದಿನಗಳಿದ್ದು ಹಗಲಿರುಳು ಶ್ರಮಿಸಿ ಪಕ್ಷದ ಗೆಲುವಿಗೆ ಸಂಕಲ್ಪ ತೊಡಬೇಕು. ಪಕ್ಷಕ್ಕಾಗಿ ದುಡಿದವರನ್ನು ಗುರುತಿಸಿ ಅಧಿಕಾರ ಕೊಡಲಿದೆ ಎಂದರು.

ಸಿದ್ದರಾಮಯ್ಯ ಬೇರೆ ಕ್ಷೇತ್ರ ಆಯ್ಕೆ ಮಾಡಿಕೊಳ್ಳಲಿ: ನಿಖಿಲ್‌ ಕುಮಾರಸ್ವಾಮಿ

ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ 2013 ಮತ್ತು 2018ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ನಗರ ಕ್ಷೇತ್ರದಿಂದ ಸ್ಪರ್ಧಿಸಿ ಕಡಿಮೆ ಅಂತರದಲ್ಲಿ ಸೋತಿದ್ದು ಎನ್‌. ಗೋವಿಂದರಾಜು ಕ್ಷೇತ್ರದ ಜನತೆಯಿಂದ ದೂರವಾಗದೆ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಈ ಬಾರಿ ಅವರನ್ನು ಆಶೀರ್ವದಿಸಿ, ಕುಮಾರಣ್ಣನ ಕೈಬಲಪಡಿಸಿ ಎಂದು ನಿಖಿಲ್‌ ಕುಮಾರಸ್ವಾಮಿ ಮನವಿ ಮಾಡಿದರು. ನಗರ ಜೆಡಿಎಸ್‌ ಅಭ್ಯರ್ಥಿ ಎನ್‌.ಗೋವಿಂದರಾಜು ಮಾತನಾಡಿ, ರಾಜ್ಯದಲ್ಲಿ ಜೆಡಿಎಸ್‌ ಪಕ್ಷವು ಅಧಿಕಾರಕ್ಕೆ ಬಂದರೆ ತುಮಕೂರು ನಗರದಲ್ಲಿ 5 ಹೈಟೆಕ್‌ ಆಸ್ಪತ್ರೆ,7 ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ಸಿಗುವ ಶಾಲೆಗಳನ್ನು ನಿರ್ಮಿಸುವ ಮೂಲಕ ಗುಣಮಟ್ಟದ ಆರೋಗ್ಯ ಮತ್ತು ಶಿಕ್ಷಣ ಉಚಿತವಾಗಿ ದೊರೆಯುವಂತೆ ಮಾಡಲಿದ್ದಾರೆ. ಕುಮಾರಣ್ಣ ನುಡಿದಂತೆ ನಡೆಯುವ ವ್ಯಕ್ತಿ ಎಂದು ಹೇಳಿದರು.

ಜೆಡಿಎಸ್‌ ಜಿಲ್ಲಾಧ್ಯಕ್ಷ ಆರ್‌.ಸಿ.ಆಂಜನಪ್ಪ ಅಧ್ಯಕ್ಷತೆ ವಹಿಸಿದ್ದರು. ಜೆಡಿಎಸ್‌ ಕಾರ್ಯಾಧ್ಯಕ್ಷ ಟಿ.ಆರ್‌.ನಾಗರಾಜು, ರಾಜ್ಯ ವಕ್ತಾರ ಹಾಲನೂರು ಲೇಪಾಕ್ಷಿ, ಮಹಾನಗರ ಪಾಲಿಕೆ ಉಪ ಮೇಯರ್‌ ಟಿ.ಕೆ.ನರಸಿಂಹಮೂರ್ತಿ, ಸದಸ್ಯರಾದ ಎಚ್‌ಡಿಕೆ ಮಂಜುನಾಥ್‌,ಲಕ್ಷ್ಮಿ ನರಸಿಂಹರಾಜು, ಎ. ಶ್ರೀನಿವಾಸ್‌, ಧರಣೇಂದ್ರ ಕುಮಾರ್‌, ಲಲಿತಾರವೀಶ್‌, ಮುಖಂಡರಾದ ಸೋಲಾರ್‌ ಕೃಷ್ಣಮೂರ್ತಿ, ಹಾಲೆನೂರು ಆನಂತ್‌, ಹಿರೇಹಳ್ಳಿ ಮಹೇಶ್‌, ಮಹಿಳಾ ಘಟಕದ ಅಧ್ಯಕ್ಷೆ ಕುಸುಮಾ ಜಗನ್ನಾಥ್‌, ತಾಹೇರಾ ಕುಲ್ಸ್‌ಮ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಧರ್ಮ ಕಾರ್ಯ​ಗಳು ನಿರಂತರ ನಡೆ​ಯ​ಬೇ​ಕು: ಬಿ.ಎಸ್‌.ಯಡಿಯೂರಪ್ಪ

ಪಕ್ಷ ಅಧಿಕಾರಕ್ಕೆ ಬಂದರೆ ಪಂಚರತ್ನ ಯೋಜನೆ ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಪಂಚರತ್ನ ಯೋಜನೆಗಳ ಘೋಷಿಸಿರುವ ಕಾರ್ಯಕ್ರಮಗಳನ್ನು ಜಾರಿಗೆ ಪ್ರತಿ ಯೋಜನೆಗೆ 25 ಸಾವಿರ ಕೋಟಿಯಂತೆ ಒಟ್ಟು 1.25 ಲಕ್ಷ ಕೋಟಿ ರು.,ಅನುದಾನ ಬೇಕಿದ್ದು, ಅತಿ ಹೆಚ್ಚು ತೆರಿಗೆ ಕಟ್ಟುವ ಕರ್ನಾಟಕದಲ್ಲಿ ಇಷ್ಟುಅನುದಾನ ಕ್ರೂಢೀಕರಿಸುವುದು ಕಷ್ಟವಲ್ಲ. ಈಗಾಗಲೇ ಎರಡು ಬಾರಿ ಮುಖ್ಯಮಂತ್ರಿಯಾಗಿ ಎಚ್‌.ಡಿ.ಕುಮಾರಸ್ವಾಮೀ ಸಂಪನ್ಮೂಲ ಕ್ರೂಢೀಕರಣದ ದಾರಿಗಳನ್ನು ಕಂಡುಕೊಂಡಿದ್ದಾರೆ. ಅದನ್ನು ರಾಜ್ಯದ ಜನತೆಗೆ ಅರ್ಪಿಸಲಿದ್ದಾರೆ,
-ನಿಖಿಲ್‌ ಕುಮಾರಸ್ವಾಮಿ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ

Follow Us:
Download App:
  • android
  • ios