ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರ ಜತೆ ಸಿಹಿ ಸುದ್ದಿನೇ ಇರುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಅವರು ತುಮಕೂರಿನಲ್ಲಿ ಕರ್ನಾಟಕ ಕ್ರೀಡಾಕೂಟ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆ.ಎನ್.ರಾಜಣ್ಣ ಅವರ ಮನೆಯಲ್ಲಿ ಔತಣ ಕೂಟದಲ್ಲಿ ಭಾಗವಹಿಸಿದ್ದರು.

ತುಮಕೂರು : ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರ ಜತೆ ಸಿಹಿ ಸುದ್ದಿನೇ ಇರುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಅವರು ತುಮಕೂರಿನಲ್ಲಿ ಕರ್ನಾಟಕ ಕ್ರೀಡಾಕೂಟ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆ.ಎನ್.ರಾಜಣ್ಣ ಅವರ ಮನೆಯಲ್ಲಿ ಔತಣ ಕೂಟದಲ್ಲಿ ಭಾಗವಹಿಸಿದ್ದರು.

ಕೋಳಿ ಸಾರು, ಕಾಲುಸೂಪು, ಇಡ್ಲಿ ಸವಿದೆ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ನನಗೆ ಹುಷಾರು ಇರಲಿಲ್ಲ. ಹಾಗಾಗಿ ಬಾಯಿ ಕೆಟ್ಟು ಹೋಗಿತ್ತು. ಆದ್ದರಿಂದ ಕೋಳಿ ಸಾರು, ಕಾಲುಸೂಪು, ಇಡ್ಲಿ ಸವಿದೆ ಎಂದು ಹೇಳಿದರು.

ಹೈಕಮಾಂಡ್ ಜೊತೆ ಮಾತನಾಡುವುದಾಗಿ ತಿಳಿಸಿದ ಸಿಎಂ

ಈ ವೇಳೆ ಸುದ್ದಿಗಾರರು ರಾಜಣ್ಣ ಅವರಿಗೆ ಮಂತ್ರಿ ಸ್ಥಾನದ ಸಿಹಿ ಸುದ್ದಿ ಕೊಡುವಿರಾ ಎಂದು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಹೈಕಮಾಂಡ್ ಜೊತೆ ಮಾತನಾಡುವುದಾಗಿ ತಿಳಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಗೆ ಹೋಗಿರುವ ವಿಚಾರ ನನಗೆ ಗೊತ್ತಿಲ್ಲ ಎಂದರು.